Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವ ನಟಿಯ ಜತೆ ದಳಪತಿ ವಿಜಯ್ ಡೇಟಿಂಗ್​? ವಿಚ್ಛೇದನ ಸುದ್ದಿ ಹುಟ್ಟಲು ಇದುವೇ ಕಾರಣ

ಈ ಜೋಡಿ ಎರಡು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದೆ. ಇಬ್ಬರ ಮಧ್ಯೆ ಆಪ್ತತೆ ಬೆಳೆದಿದೆ. ಇದು ಸಂಗೀತಾ ಗಮನಕ್ಕೆ ಬಂದಿದ್ದು ಈ ಕಾರಣಕ್ಕೆ ಅವರು ವಿಚ್ಛೇದನ ನೀಡುವ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವರದಿ ಹೇಳಿದೆ.

ಯುವ ನಟಿಯ ಜತೆ ದಳಪತಿ ವಿಜಯ್ ಡೇಟಿಂಗ್​? ವಿಚ್ಛೇದನ ಸುದ್ದಿ ಹುಟ್ಟಲು ಇದುವೇ ಕಾರಣ
ಕೀರ್ತಿ ಸುರೇಶ್​-ದಳಪತಿ ವಿಜಯ್
Follow us
ರಾಜೇಶ್ ದುಗ್ಗುಮನೆ
|

Updated on: Jan 27, 2023 | 7:51 AM

ನಟ ದಳಪತಿ ವಿಜಯ್ (Thalapathy Vijay) ಹಾಗೂ ಪತ್ನಿ ಸಂಗೀತಾ (Sangeetha) ಅವರು ಮದುವೆ ಆಗಿ 22 ವರ್ಷಗಳ ಬಳಿಕ ವಿಚ್ಛೇದನ ಪಡೆಯುತ್ತಿದ್ದಾರೆ ಎನ್ನುವ ಸುದ್ದಿ ಹುಟ್ಟಿಕೊಂಡಿತ್ತು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದ ಇವರು ಬೇರೆ ಆಗುತ್ತಿದ್ದಾರೆ ಎನ್ನುವ ವದಂತಿ ಹುಟ್ಟಲು ಕಾರಣ ಏನು ಎಂಬ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ದಳಪತಿ ವಿಜಯ್ ಅವರು ಯುವನಟಿಯ ಜತೆ ಡೇಟಿಂಗ್ ಶುರು ಹಚ್ಚಿಕೊಂಡಿದ್ದೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಈ ಸುದ್ದಿ ಈಗ ಕಾಡ್ಗಿಚ್ಚಿನಂತೆ ಹಬ್ಬಿದೆ.

ದಳಪತಿ ವಿಜಯ್ ಹಾಗೂ ಸಂಗೀತಾ ಮಧ್ಯೆ ವೈಮನಸ್ಸು ಮೂಡಿದೆ ಎನ್ನಲಾಗಿದೆ. ಇದಕ್ಕೆ ಕಾರಣವಾಗಿದ್ದು ನಟಿ ಕೀರ್ತಿ ಸುರೇಶ್ ಎಂದು ಬಾಲಿವುಡ್ ಹಂಗಾಮ ವರದಿ ಮಾಡಿದೆ. ಈ ಜೋಡಿ ಎರಡು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದೆ. ಇಬ್ಬರ ಮಧ್ಯೆ ಆಪ್ತತೆ ಬೆಳೆದಿದೆ. ಇದು ಸಂಗೀತಾ ಗಮನಕ್ಕೆ ಬಂದಿದ್ದು ಈ ಕಾರಣಕ್ಕೆ ಅವರು ವಿಚ್ಛೇದನ ನೀಡುವ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವರದಿ ಹೇಳಿದೆ.

ದಳಪತಿ ವಿಜಯ್ ಅವರು ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತದೆ. ಈಗ ಅವರ ಹೆಸರು ಕೀರ್ತಿ ಸುರೇಶ್ ಜೊತೆ ತಳುಕು ಹಾಕಿಕೊಂಡಿರೋದು ಅನೇಕರಿಗೆ ಬೇಸರ ಮೂಡಿಸಿದೆ. ಈ ಬಗ್ಗೆ ವಿಜಯ್ ಅವರು ಸ್ಪಷ್ಟನೆ ನೀಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಆದರೆ ದಳಪತಿ ವಿಜಯ್ ಈ ಬಗ್ಗೆ ಮೌನ ತಾಳಿದ್ದಾರೆ.

ಇದನ್ನೂ ಓದಿ
Image
Varisu Trailer: ಧೂಳೆಬ್ಬಿಸುತ್ತಿದೆ ‘ವಾರಿಸು’ ಸಿನಿಮಾ ಟ್ರೇಲರ್​; ಫ್ಯಾಮಿಲಿ ಪ್ರೇಕ್ಷಕರ ಮೇಲೆ ಕಣ್ಣಿಟ್ಟ ದಳಪತಿ ವಿಜಯ್​
Image
Katrina Kaif: ‘ದಳಪತಿ’ ವಿಜಯ್​ ಚಿತ್ರದ ಹಾಡಿಗೆ ಶಾಲಾ ಮಕ್ಕಳ ಜತೆ ಕತ್ರಿನಾ ಕೈಫ್ ಡ್ಯಾನ್ಸ್​; ಇಲ್ಲಿದೆ ವಿಡಿಯೋ
Image
‘ಕೆಜಿಎಫ್​ 2’ ಎದುರು ‘ಬೀಸ್ಟ್​’ ಸೋತರೂ ಪಾರ್ಟಿ ಮಾಡಿದ ದಳಪತಿ ವಿಜಯ್; ನಿರ್ದೇಶಕ ಹೇಳಿದ್ದೇನು?
Image
‘ಕೆಜಿಎಫ್​ 2’ ಎದುರು ‘ಬೀಸ್ಟ್​’ಗೆ ಹಿನ್ನಡೆ; ಚಿತ್ರರಂಗಕ್ಕೆ ದಳಪತಿ ವಿಜಯ್​ ಮಗನ ಎಂಟ್ರಿ ಬಗ್ಗೆ ಟಾಕ್​ ಶುರು

ವಿಜಯ್ ಅವರು ವಿವಾದದಿಂದ ದೂರ ಇರಲು ಇಷ್ಟಪಡುತ್ತಾರೆ. ಆದಾಗ್ಯೂ ಕೆಲವೊಮ್ಮೆ ವಿವಾದಗಳು ಹುಟ್ಟಿಕೊಳ್ಳುತ್ತವೆ. ಇಂತಹ ಸಂದರ್ಭದಲ್ಲಿ ಅವರು ಸ್ಪಷ್ಟನೆ ನೀಡಿದ ಉದಾಹರಣೆ ಇದೆ. ಈಗ ವಿಚ್ಛೇದನ ಹಾಗೂ ಡೇಟಿಂಗ್ ವಿಚಾರದಲ್ಲಿ ಅವರಿಂದ ಯಾವ ರೀತಿಯ ಉತ್ತರ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ:  ರಶ್ಮಿಕಾ ಬಳಿಕ ದಳಪತಿ ವಿಜಯ್ ಚಿತ್ರದಲ್ಲಿ ರಕ್ಷಿತ್​ ಶೆಟ್ಟಿ? ‘ಸಿಂಪಲ್​ ಸ್ಟಾರ್​’ಗೆ ಕಾಲಿವುಡ್​ನಲ್ಲಿ ಬೇಡಿಕೆ

ದಳಪತಿ ವಿಜಯ್ ನಟನೆಯ ‘ವಾರಿಸು’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ತಮಿಳು ಹಾಗೂ ತೆಲುಗಿನಲ್ಲಿ ರಿಲೀಸ್ ಆದ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನೂರಾರು ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ 2023ರ ಆರಂಭದಲ್ಲೇ ವಿಜಯ್​ಗೆ ಗೆಲುವು ಸಿಕ್ಕಂತೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ