ಯುವ ನಟಿಯ ಜತೆ ದಳಪತಿ ವಿಜಯ್ ಡೇಟಿಂಗ್​? ವಿಚ್ಛೇದನ ಸುದ್ದಿ ಹುಟ್ಟಲು ಇದುವೇ ಕಾರಣ

|

Updated on: Jan 27, 2023 | 7:51 AM

ಈ ಜೋಡಿ ಎರಡು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದೆ. ಇಬ್ಬರ ಮಧ್ಯೆ ಆಪ್ತತೆ ಬೆಳೆದಿದೆ. ಇದು ಸಂಗೀತಾ ಗಮನಕ್ಕೆ ಬಂದಿದ್ದು ಈ ಕಾರಣಕ್ಕೆ ಅವರು ವಿಚ್ಛೇದನ ನೀಡುವ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವರದಿ ಹೇಳಿದೆ.

ಯುವ ನಟಿಯ ಜತೆ ದಳಪತಿ ವಿಜಯ್ ಡೇಟಿಂಗ್​? ವಿಚ್ಛೇದನ ಸುದ್ದಿ ಹುಟ್ಟಲು ಇದುವೇ ಕಾರಣ
ಕೀರ್ತಿ ಸುರೇಶ್​-ದಳಪತಿ ವಿಜಯ್
Follow us on

ನಟ ದಳಪತಿ ವಿಜಯ್ (Thalapathy Vijay) ಹಾಗೂ ಪತ್ನಿ ಸಂಗೀತಾ (Sangeetha) ಅವರು ಮದುವೆ ಆಗಿ 22 ವರ್ಷಗಳ ಬಳಿಕ ವಿಚ್ಛೇದನ ಪಡೆಯುತ್ತಿದ್ದಾರೆ ಎನ್ನುವ ಸುದ್ದಿ ಹುಟ್ಟಿಕೊಂಡಿತ್ತು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದ ಇವರು ಬೇರೆ ಆಗುತ್ತಿದ್ದಾರೆ ಎನ್ನುವ ವದಂತಿ ಹುಟ್ಟಲು ಕಾರಣ ಏನು ಎಂಬ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ದಳಪತಿ ವಿಜಯ್ ಅವರು ಯುವನಟಿಯ ಜತೆ ಡೇಟಿಂಗ್ ಶುರು ಹಚ್ಚಿಕೊಂಡಿದ್ದೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಈ ಸುದ್ದಿ ಈಗ ಕಾಡ್ಗಿಚ್ಚಿನಂತೆ ಹಬ್ಬಿದೆ.

ದಳಪತಿ ವಿಜಯ್ ಹಾಗೂ ಸಂಗೀತಾ ಮಧ್ಯೆ ವೈಮನಸ್ಸು ಮೂಡಿದೆ ಎನ್ನಲಾಗಿದೆ. ಇದಕ್ಕೆ ಕಾರಣವಾಗಿದ್ದು ನಟಿ ಕೀರ್ತಿ ಸುರೇಶ್ ಎಂದು ಬಾಲಿವುಡ್ ಹಂಗಾಮ ವರದಿ ಮಾಡಿದೆ. ಈ ಜೋಡಿ ಎರಡು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದೆ. ಇಬ್ಬರ ಮಧ್ಯೆ ಆಪ್ತತೆ ಬೆಳೆದಿದೆ. ಇದು ಸಂಗೀತಾ ಗಮನಕ್ಕೆ ಬಂದಿದ್ದು ಈ ಕಾರಣಕ್ಕೆ ಅವರು ವಿಚ್ಛೇದನ ನೀಡುವ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವರದಿ ಹೇಳಿದೆ.

ದಳಪತಿ ವಿಜಯ್ ಅವರು ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತದೆ. ಈಗ ಅವರ ಹೆಸರು ಕೀರ್ತಿ ಸುರೇಶ್ ಜೊತೆ ತಳುಕು ಹಾಕಿಕೊಂಡಿರೋದು ಅನೇಕರಿಗೆ ಬೇಸರ ಮೂಡಿಸಿದೆ. ಈ ಬಗ್ಗೆ ವಿಜಯ್ ಅವರು ಸ್ಪಷ್ಟನೆ ನೀಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಆದರೆ ದಳಪತಿ ವಿಜಯ್ ಈ ಬಗ್ಗೆ ಮೌನ ತಾಳಿದ್ದಾರೆ.

ಇದನ್ನೂ ಓದಿ
Varisu Trailer: ಧೂಳೆಬ್ಬಿಸುತ್ತಿದೆ ‘ವಾರಿಸು’ ಸಿನಿಮಾ ಟ್ರೇಲರ್​; ಫ್ಯಾಮಿಲಿ ಪ್ರೇಕ್ಷಕರ ಮೇಲೆ ಕಣ್ಣಿಟ್ಟ ದಳಪತಿ ವಿಜಯ್​
Katrina Kaif: ‘ದಳಪತಿ’ ವಿಜಯ್​ ಚಿತ್ರದ ಹಾಡಿಗೆ ಶಾಲಾ ಮಕ್ಕಳ ಜತೆ ಕತ್ರಿನಾ ಕೈಫ್ ಡ್ಯಾನ್ಸ್​; ಇಲ್ಲಿದೆ ವಿಡಿಯೋ
‘ಕೆಜಿಎಫ್​ 2’ ಎದುರು ‘ಬೀಸ್ಟ್​’ ಸೋತರೂ ಪಾರ್ಟಿ ಮಾಡಿದ ದಳಪತಿ ವಿಜಯ್; ನಿರ್ದೇಶಕ ಹೇಳಿದ್ದೇನು?
‘ಕೆಜಿಎಫ್​ 2’ ಎದುರು ‘ಬೀಸ್ಟ್​’ಗೆ ಹಿನ್ನಡೆ; ಚಿತ್ರರಂಗಕ್ಕೆ ದಳಪತಿ ವಿಜಯ್​ ಮಗನ ಎಂಟ್ರಿ ಬಗ್ಗೆ ಟಾಕ್​ ಶುರು

ವಿಜಯ್ ಅವರು ವಿವಾದದಿಂದ ದೂರ ಇರಲು ಇಷ್ಟಪಡುತ್ತಾರೆ. ಆದಾಗ್ಯೂ ಕೆಲವೊಮ್ಮೆ ವಿವಾದಗಳು ಹುಟ್ಟಿಕೊಳ್ಳುತ್ತವೆ. ಇಂತಹ ಸಂದರ್ಭದಲ್ಲಿ ಅವರು ಸ್ಪಷ್ಟನೆ ನೀಡಿದ ಉದಾಹರಣೆ ಇದೆ. ಈಗ ವಿಚ್ಛೇದನ ಹಾಗೂ ಡೇಟಿಂಗ್ ವಿಚಾರದಲ್ಲಿ ಅವರಿಂದ ಯಾವ ರೀತಿಯ ಉತ್ತರ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ:  ರಶ್ಮಿಕಾ ಬಳಿಕ ದಳಪತಿ ವಿಜಯ್ ಚಿತ್ರದಲ್ಲಿ ರಕ್ಷಿತ್​ ಶೆಟ್ಟಿ? ‘ಸಿಂಪಲ್​ ಸ್ಟಾರ್​’ಗೆ ಕಾಲಿವುಡ್​ನಲ್ಲಿ ಬೇಡಿಕೆ

ದಳಪತಿ ವಿಜಯ್ ನಟನೆಯ ‘ವಾರಿಸು’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ತಮಿಳು ಹಾಗೂ ತೆಲುಗಿನಲ್ಲಿ ರಿಲೀಸ್ ಆದ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನೂರಾರು ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ 2023ರ ಆರಂಭದಲ್ಲೇ ವಿಜಯ್​ಗೆ ಗೆಲುವು ಸಿಕ್ಕಂತೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ