AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ ವಿಜಯ್

ಕರೂರು ಕಾಲ್ತುಳಿತದ ಘಟನೆ ಬಳಿಕ ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಅವರು ತೀವ್ರ ಟೀಕೆಗೆ ಗುರಿ ಆಗಿದ್ದಾರೆ. ದುರಂತದ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದು, ಗಾಯಾಳುಗಳು ಹಾಗೂ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ. ಮೃತರ ಕುಟುಂಬಗ್ಗೆ ತಲಾ 20 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 2 ಲಕ್ಷ ರೂಪಾಯಿ ನೀಡುವುದಾಗಿ ತಿಳಿಸಿದ್ದಾರೆ.

ಕರೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ ವಿಜಯ್
Thalapathy Vijay
ಮದನ್​ ಕುಮಾರ್​
|

Updated on: Sep 28, 2025 | 12:35 PM

Share

ಕಾಲಿವುಡ್ ನಟ, ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ (Thalapathy Vijay) ಶನಿವಾರ (ಸೆ.27) ನಡೆಸಿದ ರ‍್ಯಾಲಿಯಲ್ಲಿ ಕಾಲ್ತುಳಿತ (Karur Stampede) ಉಂಟಾಗಿ 39 ಜನರು ಮೃತರಾಗಿದ್ದಾರೆ. ಈ ದುರಂತದ ಬಗ್ಗೆ ವಿಜಯ್ ಪ್ರತಿಕ್ರಿಯೆ ನೀಡಿದ್ದಾರೆ. ಮೃತರ ಕುಟುಂಬಕ್ಕೆ ಅವರು ಸಂತಾಪ ಸೂಚಿಸಿದ್ದಾರೆ. ಅಲ್ಲದೇ ತಲಾ 20 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಕಾಲ್ತುಳಿತಕ್ಕೆ ಒಳಗಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಅವರು ತಿಳಿಸಿದ್ದಾರೆ. ಈ ಬಗ್ಗೆ ಅವರು ಟಿವಿಕೆ (TVK) ಪಕ್ಷದ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಪೋಸ್ಟ್ ಮಾಡಿದ್ದಾರೆ.

‘ನಿನ್ನೆ ನಡೆದ ಘಟನೆಯಿಂದ ತೀವ್ರ ನೋವಾಗಿದೆ. ಅದನ್ನು ಹೇಗೆ ವಿವರಿಸಬೇಕು ಎಂಬುದೇ ತಿಳಿಯುತ್ತಿಲ್ಲ. ಪ್ರೀತಿ ಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನಾನು ಸಂತಾಪ ಸೂಚಿಸುತ್ತೇನೆ. ಏನೇ ಕೊಟ್ಟರೂ ಆಗಿರುವ ನಷ್ಟವನ್ನು ಭರಿಸಲು ಸಾಧ್ಯವಿಲ್ಲ. ಆದರೂ, ಕುಟುಂಬದ ಸದಸ್ಯರಲ್ಲಿ ನಾನೂ ಒಬ್ಬನಾಗಿ ಮೃತರ ಕುಟುಂಬದವರಿಗೆ ತಲಾ 20 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 2 ಲಕ್ಷ ರೂಪಾಯಿ ನೀಡುತ್ತೇನೆ’ ಎಂದು ವಿಜಯ್ ಪರಿಹಾರ ಘೋಷಿಸಿದ್ದಾರೆ.

‘ಆಗಿರುವ ನಷ್ಟಕ್ಕೆ ಹೋಲಿಸಿದರೆ ಇದು ದೊಡ್ಡ ಪರಿಹಾರದ ಮೊತ್ತವಲ್ಲ. ಆದರೂ ಕೂಡ ಕುಟುಂಬದ ಸದಸ್ಯನಾಗಿ ಈ ಕಷ್ಟದ ಸಂದರ್ಭದಲ್ಲಿ ನಿಮ್ಮ ಜೊತೆ ನಿಲ್ಲುವುದು ನನ್ನ ಕರ್ತವ್ಯ. ಗಾಯಗೊಂಡಿರುವ ನನ್ನ ಎಲ್ಲ ಬಂಧುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಎಲ್ಲ ಗಾಯಾಳುಗಳ ಚಿಕಿತ್ಸೆಗೆ ನೆರವು ನೀಡುವೆ’ ಎಂದು ದಳಪತಿ ವಿಜಯ್ ಅವರು ಟ್ವೀಟ್ ಮಾಡಿದ್ದಾರೆ.

40ಕ್ಕೂ ಅಧಿಕ ಜನರು ಈ ಕಾಲ್ತುಳಿತದಲ್ಲಿ ಗಾಯಗೊಂಡಿದ್ದಾರೆ. ಎಲ್ಲರಿಗೂ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ರ‍್ಯಾಲಿಯಲ್ಲಿ ಸುಮಾರು 60 ಸಾವಿರ ಜನರು ಭಾಗವಹಿಸಿದ್ದರು ಎನ್ನಲಾಗಿದೆ. ಕಾಲ್ತುಳಿತಕ್ಕೆ ಹೊಣೆ ಯಾರು ಎಂಬುದನ್ನು ತಿಳಿಯಲು ತನಿಖೆ ಮಾಡಲಾಗುತ್ತಿದೆ. ಇತ್ತೀಷೆಗಷ್ಟೇ ರಾಜಕೀಯಕ್ಕೆ ಕಾಲಿಟ್ಟಿರುವ ದಳಪತಿ ವಿಜಯ್ ಅವರಿಗೆ ಈ ಘಟನೆಯಿಂದ ಆರಂಭದಲ್ಲೇ ಹಿನ್ನಡೆ ಆಗಿದೆ.

ಇದನ್ನೂ ಓದಿ: ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ: 10 ವರ್ಷದ ಬಾಲಕಿ ಸಾವನ್ನ ಕಣ್ಣಾರೆ ಕಂಡೆ ಎಂದ ಬೆಂಗಳೂರಿನ ವ್ಯಕ್ತಿ

ದಳಪತಿ ವಿಜಯ್ ಹಾಗೂ ಇಡೀ ತಮಿಳುನಾಡಿನ ಪಾಲಿಗೆ ಇದೊಂದು ಕರಾಳ ಅಧ್ಯಾಯ ಆಗಿದೆ. ಈವರೆಗೂ ಯಾವುದೇ ರಾಜಕೀಯ ಪಕ್ಷದ ರ‍್ಯಾಲಿಯಲ್ಲಿ ಇಷ್ಟು ದೊಡ್ಡ ದುರಂತ ಆಗಿರಲಿಲ್ಲ. ನರೇಂದ್ರ ಮೋದಿ, ಅರವಿಂದ್ ಕೇಜ್ರಿವಾಲ್, ಎಂ.ಕೆ. ಸ್ಟಾಲಿನ್, ರಾಜನಾಥ್ ಸಿಂಗ್, ಅಮಿತ್ ಶಾ ಮುಂತಾದವರು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ಈ ರಾಶಿಯವರು ಹಣದ ವಿಚಾರದಲ್ಲಿ ಆತುರಪಡಬೇಡಿ!
ಇಂದು ಈ ರಾಶಿಯವರು ಹಣದ ವಿಚಾರದಲ್ಲಿ ಆತುರಪಡಬೇಡಿ!
ಖರ್ಗೆ ಭೇಟಿ ಬಳಿಕ ಅಚ್ಚರಿಯ ಹೇಳಿಕೆ ಕೊಟ್ಟ ಡಿಸಿಎಂ ಡಿಕೆಶಿ
ಖರ್ಗೆ ಭೇಟಿ ಬಳಿಕ ಅಚ್ಚರಿಯ ಹೇಳಿಕೆ ಕೊಟ್ಟ ಡಿಸಿಎಂ ಡಿಕೆಶಿ
ಕಾಶ್ಮೀರದ ಝೋಜಿಲಾ ಪಾಸ್‌ನಲ್ಲಿ ಭಾರೀ ಹಿಮಪಾತ
ಕಾಶ್ಮೀರದ ಝೋಜಿಲಾ ಪಾಸ್‌ನಲ್ಲಿ ಭಾರೀ ಹಿಮಪಾತ
ಬಿಎಂಟಿಸಿ ಚಾಲಕ ಹೃದಯಾಘಾತದಿಂದ ಸಾವು: ಪರಿಹಾರ ನೀಡುವವರೆಗೂ ಡ್ಯೂಟಿ ಮಾಡಲ್ಲ
ಬಿಎಂಟಿಸಿ ಚಾಲಕ ಹೃದಯಾಘಾತದಿಂದ ಸಾವು: ಪರಿಹಾರ ನೀಡುವವರೆಗೂ ಡ್ಯೂಟಿ ಮಾಡಲ್ಲ
ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್​ನ ಘರ್ಷಣೆಯಲ್ಲಿ ಹಲವರಿಗೆ ಗಾಯ
ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್​ನ ಘರ್ಷಣೆಯಲ್ಲಿ ಹಲವರಿಗೆ ಗಾಯ
ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಮನೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಮನೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ಸತತ 4 ಸಿಕ್ಸರ್; ಪ್ರಫುಲ್ ಹಿಂಗೆ ವಿರುದ್ಧ ಸೇಡು ತೀರಿಸಿಕೊಂಡ ವೈಭವ್
ಸತತ 4 ಸಿಕ್ಸರ್; ಪ್ರಫುಲ್ ಹಿಂಗೆ ವಿರುದ್ಧ ಸೇಡು ತೀರಿಸಿಕೊಂಡ ವೈಭವ್
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ