AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪು ಮಾಡದಿದ್ದರೂ ಕೈ ಮುಗಿದು ಕ್ಷಮೆ ಕೇಳಿದ ‘ದಳಪತಿ’ ವಿಜಯ್; ವೈರಲ್​ ಆಗುತ್ತಿದೆ ವಿಡಿಯೋ

ಶನಿವಾರ (ಫೆಬ್ರವರಿ 19) ತಮಿಳುನಾಡಿನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿದೆ. ಚೆನ್ನೈನಲ್ಲಿ ವಿಜಯ್​ ಅವರು ತಮ್ಮ ಮತ ಚಲಾಯಿಸಲು ಬಂದಿದ್ದರು. ಈ ವೇಳೆ ವಿಜಯ್​ ಅವರನ್ನು ನೋಡೋಕೆ ಅಭಿಮಾನಿಗಳು ಹಾಗೂ ಮಾಧ್ಯಮದವರು ಮುತ್ತಿಕೊಂಡರು.

ತಪ್ಪು ಮಾಡದಿದ್ದರೂ ಕೈ ಮುಗಿದು ಕ್ಷಮೆ ಕೇಳಿದ ‘ದಳಪತಿ’ ವಿಜಯ್; ವೈರಲ್​ ಆಗುತ್ತಿದೆ ವಿಡಿಯೋ
ದಳಪತಿ ವಿಜಯ್
TV9 Web
| Edited By: |

Updated on: Feb 20, 2022 | 5:02 PM

Share

ನಟ ದಳಪತಿ ವಿಜಯ್​ ಅವರಿಗೆ (Thalapathy Vijay) ಕಾಲಿವುಡ್​ನಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಅವರ ಸಿನಿಮಾ ತೆರೆಗೆ ಬಂದರೆ ಸಾಕು ಅಭಿಮಾನಿಗಳು ಹಬ್ಬ ಮಾಡುತ್ತಾರೆ. ಅವರ ಕಟೌಟ್​ ನಿರ್ಮಿಸಿ, ಹಾಲಿನ ಅಭಿಷೇಕ ಮಾಡುತ್ತಾರೆ. ಅವರ ನಟನೆಯ ‘ಬೀಸ್ಟ್​’ ಸಿನಿಮಾ (Beast Movie) ತೆರೆಗೆ ಬರೋಕೆ ರೆಡಿ ಆಗಿದೆ. ಅದಕ್ಕೂ ಮೊದಲೇ ವಿಜಯ್ ಅವರು ಸಾರ್ವಜನಿಕವಾಗಿ ಬಹಿರಂಗ ಕ್ಷಮೆಯಾಚಿಸಿದ್ದಾರೆ. ವಿಶೇಷ ಎಂದರೆ ಇದರಲ್ಲಿ ‘ದಳಪತಿ’ ವಿಜಯ್​ ಅವರ ಯಾವುದೇ ತಪ್ಪು ಕೂಡ ಇರಲಿಲ್ಲ! ಸದ್ಯ, ಅವರು ಕ್ಷಮೆ ಕೇಳಿರುವ ವಿಡಿಯೋ ಈಗ ಸಾಕಷ್ಟು ವೈರಲ್​ ಆಗುತ್ತಿದೆ.

ಶನಿವಾರ (ಫೆಬ್ರವರಿ 19) ತಮಿಳುನಾಡಿನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿದೆ. ಚೆನ್ನೈನಲ್ಲಿ ವಿಜಯ್​ ಅವರು ತಮ್ಮ ಮತ ಚಲಾಯಿಸಲು ಬಂದಿದ್ದರು. ಈ ವೇಳೆ ವಿಜಯ್​ ಅವರನ್ನು ನೋಡೋಕೆ ಅಭಿಮಾನಿಗಳು ಹಾಗೂ ಮಾಧ್ಯಮದವರು ಮುತ್ತಿಕೊಂಡರು. ಅಭಿಮಾನಿಗಳು ಜೋರಾಗಿ ಕೂಗೋಕೆ ಆರಂಭಿಸಿದ್ದರು. ಮತಗಟ್ಟೆಯಲ್ಲಿ ನೂಕುನುಗ್ಗಲು ಆರಂಭವಾಯಿತು. ಅಭಿಮಾನಿಗಳನ್ನು ನಿಯಂತ್ರಿಸೋಕೆ ಪೊಲೀಸರಿಗೆ ಕಷ್ಟಸಾಧ್ಯವಾಯಿತು. ಈ ವಿಡಿಯೋ ಸಾಕಷ್ಟು ವೈರಲ್​ ಆಗುತ್ತಿದೆ.

ಅಭಿಮಾನಿಗಳು ಮುತ್ತಿಕೊಂಡಿದ್ದರಿಂದ ಮತ ಹಾಕಲು ಬಂದ ಜನಸಾಮಾನ್ಯರು ಹಾಗೂ ಮತಗಟ್ಟೆಯ ಅಧಿಕಾರಿಗಳಿಗೆ ತೀವ್ರ ತೊಂದರೆ ಆಗಿತ್ತು. ಅವರು ನಟನಿಗೆ ಬೈದುಕೊಂಡರು. ಅಚ್ಚರಿ ಎಂಬಂತೆ ವಿಜಯ್​ ಅವರು ಕೈ ಮಗಿದು ಅಭಿಮಾನಿಗಳ ಪರವಾಗಿ ಕ್ಷಮೆ ಕೇಳಿದರು. ಈ ವಿಡಿಯೋ ಈಗ ದೊಡ್ಡ ಮಟ್ಟದಲ್ಲಿ ವೈರಲ್​ ಆಗುತ್ತಿದೆ. ನಟನ ಸರಳತೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

‘ಬೀಸ್ಟ್’ ಸಿನಿಮಾದ ಕೊನೆಯ ಹಂತದ ಕೆಲಸಗಳಲ್ಲಿ ವಿಜಯ್​ ಬ್ಯುಸಿ ಆಗಿದ್ದಾರೆ. ಪೂಜಾ ಹೆಗ್ಡೆ ಚಿತ್ರದ ನಾಯಕಿ. ನೆಲ್ಸನ್​ ದಿಲೀಪ್​ಕುಮಾರ್ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಚಿನ್ನದ ಕಳ್ಳಸಾಗಣೆ ಬಗ್ಗೆ ಸಿನಿಮಾ ಇದೆ. ಈ ಚಿತ್ರ ಏಪ್ರಿಲ್​ ತಿಂಗಳಲ್ಲಿ ತೆರೆಗೆ ಬರುತ್ತಿದೆ. ಈ ವರೆಗೆ ಚಿತ್ರತಂಡ ರಿಲೀಸ್​ ದಿನಾಂಕ ಘೋಷಣೆ ಮಾಡಿಲ್ಲ. ‘ಕೆಜಿಎಫ್​ 2’ ಎದುರು ಈ ಸಿನಿಮಾ ತೆರೆಗೆ ಬರುತ್ತಿದೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ರಿಲೀಸ್​ ಆದ ‘ಬೀಸ್ಟ್​’ ಸಿನಿಮಾದ ‘ಅರೇಬಿಕ್​ ಕುಥು..’ ಹಾಡು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಪೂಜಾ ಹೆಗ್ಡೆ ಹಾಗೂ ವಿಜಯ್​ ಸ್ಟೆಪ್​ ಹಾಕಿರೋದು ಅಭಿಮಾನಿಗಳಿಗೆ ಇಷ್ಟವಾಗಿದೆ. ಈ ಸಿನಿಮಾದ ಹಾಡಿಗೆ ಅನೇಕರು ಸ್ಟೆಪ್​ ಹಾಕುತ್ತಿದ್ದಾರೆ. ನಟಿ ಸಮಂತಾ ಅವರು ಏರ್​ಪೋರ್ಟ್​ನಲ್ಲಿ ಈ ಹಾಡಿಗೆ ಸಖತ್​ ಆಗಿ ಡ್ಯಾನ್ಸ್​ ಮಾಡಿದ್ದರು.

ಇದನ್ನೂ ಓದಿ: ತಂದೆ-ತಾಯಿ ವಿರುದ್ಧವೇ ಕೋರ್ಟ್​ ಮೆಟ್ಟಿಲೇರಿದ ನಟ ದಳಪತಿ ವಿಜಯ್; ಇದು ಸರಿ ಇದೆ ಎಂದ ಫ್ಯಾನ್ಸ್​​

ದಳಪತಿ ವಿಜಯ್​ ಮನೆಗೆ ಬಾಂಬ್​ ಇಟ್ಟಿದ್ದೇವೆಂದು ಬೆದರಿಕೆ; ಮುಂದೇನಾಯ್ತು?

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!