AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ನಟಿಗಾಗಿ ಎರಡು ಐಪಿಎಲ್ ಟಿಕೆಟ್ ಖರೀದಿಸಿದ ದಳಪತಿ ವಿಜಯ್

ವಿಜಯ್ ಅವರು ‘ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್ಸ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೇ. 80 ಶೂಟಿಂಗ್ ರಷ್ಯಾದಲ್ಲಿ ನಡೆಯಲಿದೆ. ಈ ಚಿತ್ರದಲ್ಲಿ ಮೀನಾಕ್ಷಿ ಚೌಧರಿ, ಮೋಹನ್, ಜಯರಾಮ್ ಮೊದಲಾದವರು ನಟಿಸಿದ್ದಾರೆ. ಅವರು ನಟಿಯೊಬ್ಬರಿಗೆ ಎರಡು ಐಪಿಲ್ ಟಿಕೆಟ್ ಖರೀದಿ ಮಾಡಿದ್ದರು.

ಈ ನಟಿಗಾಗಿ ಎರಡು ಐಪಿಎಲ್ ಟಿಕೆಟ್ ಖರೀದಿಸಿದ ದಳಪತಿ ವಿಜಯ್
ದಳಪತಿ ವಿಜಯ್
ರಾಜೇಶ್ ದುಗ್ಗುಮನೆ
|

Updated on: May 10, 2024 | 2:39 PM

Share

ದಳಪತಿ ವಿಜಯ್ (Thalapathy Vijay) ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರು ರಾಜಕೀಯ ಸೇರುವ ಬಗ್ಗೆ ಈಗಾಗಲೇ ಘೋಷಣೆ ಮಾಡಿದ್ದಾರೆ. ಶೀಘ್ರವೇ ಅವರು ಸಿನಿಮಾ ರಂಗಕ್ಕೆ ಗುಡ್​ಬೈ ಹೇಳಲಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಅವರು ಸ್ಟಾರ್ ನಟಿಗಾಗಿ ಎರಡು ಐಪಿಎಲ್ ಟಿಕೆಟ್ ಖರೀದಿ ಮಾಡಿದ್ದರು ಎನ್ನುವ ವಿಚಾರ ರಿವೀಲ್ ಆಗಿದೆ. ಆ ಬಗ್ಗೆ ಈ ಸ್ಟೋರಿಯಲ್ಲಿದೆ ಮಾಹಿತಿ.

ವಿಜಯ್ ಅವರು ಈ ವರ್ಷ ಎರಡು ದುಬಾರಿ ಐಪಿಎಲ್ ಟಿಕೆಟ್ ಖರೀದಿ ಮಾಡಿದ್ದರು. ಅದು ವರಲಕ್ಷ್ಮಿ ಶರತ್​ಕುಮಾರ್ ಅವರಿಗಾಗಿ. ವರಲಕ್ಷ್ಮೀ ಅವರೇ ಇತ್ತೀಚಿಗಿನ ಸಂದರ್ಶನ ಒಂದರಲ್ಲಿ ಈ ವಿಚಾರ ರಿವೀಲ್ ಮಾಡಿದ್ದರು. ‘ನಾನು ನೋಡಿದ ಮೊದಲ ಎರಡು ಐಪಿಎಲ್ ಮ್ಯಾಚ್​ಗೆ ದಳಪತಿ ವಿಜಯ್ ಅವರು ಟಿಕೆಟ್ ಖರೀದಿ ಮಾಡಿದ್ದರು’ ಎಂದಿದ್ದಾರೆ ವರಲಕ್ಷ್ಮಿ. ಮೊದಲ ಪಂದ್ಯ ಚೆನ್ನೈನಲ್ಲಿ ನಡೆದಿತ್ತು. ಆರ್​ಸಿಬಿ vs ಸಿಎಸ್​ಕೆ ಮಧ್ಯೆ ಫೈಟ್ ನಡೆದಿತ್ತು.

ವರಲಕ್ಷ್ಮಿ ಶರತ್​ಕುಮಾರ್ ಅವರು ತಮಿಳು, ತೆಲುಗು, ಕನ್ನಡ, ಮಲಯಾಳಂ ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. 2014ರಲ್ಲಿ ರಿಲೀಸ್ ಆದ ಮಾಣಿಕ್ಯ ಚಿತ್ರದಲ್ಲಿ ಅವರು ನಟಿಸಿದರು. ನಂತರ ‘ರನ್ನ’ ಚಿತ್ರದಲ್ಲೂ ಅಭಿನಯಿಸಿದರು. ‘ವಿಸ್ಮಯ’ ಮೊದಲಾದ ಕನ್ನಡ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.  ಇತ್ತೀಚೆಗೆ ಅವರು ಕನ್ನಡ ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ. ಅವರು ‘ಹನುಮಾನ್’ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ ಸೂಪರ್ ಹಿಟ್ ಎನಿಸಿಕೊಂಡಿದೆ. ‘ರಾಯನ್’ ಹೆಸರಿನ ಸಿನಿಮಾ ಕೂಡ ಅವರು ಮಾಡುತ್ತಿದ್ದಾರೆ. ವೈಯಕ್ತಿಕ ವಿಚಾರದ ಬಗ್ಗೆ ಹೇಳಬೇಕು ಎಂದರೆ ವರಲಕ್ಷ್ಮಿ ಶರತ್​ಕುಮಾರ್ ಅವರು ನಿಕೋಲೈ ಸಹದೇವ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ನಿರ್ದೇಶಕ ವೆಟ್ರಿಮಾರನ್​ ಹೇಳಿಕೆಯಿಂದ ದಳಪತಿ ವಿಜಯ್​ ಅಭಿಮಾನಿಗಳಿಗೆ ಬೇಸರ

ವಿಜಯ್ ಅವರು ‘ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್ಸ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೇ. 80 ಶೂಟಿಂಗ್ ರಷ್ಯಾದಲ್ಲಿ ನಡೆಯಲಿದೆ. ಈ ಚಿತ್ರದಲ್ಲಿ ಮೀನಾಕ್ಷಿ ಚೌಧರಿ, ಮೋಹನ್, ಜಯರಾಮ್ ಮೊದಲಾದವರು ನಟಿಸಿದ್ದಾರೆ. ವಿಜಯ್ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್