AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thalapathy Vijay: ಸೈಕಲ್​ನಲ್ಲಿ ಬಂದು ಮತದಾನ ಮಾಡಿದ ದಳಪತಿ ವಿಜಯ್​! ಪೆಟ್ರೋಲ್​ ಬೆಲೆ ಏರಿಕೆಗೆ ನಟನ ತಿರುಗೇಟು?

Tamil Nadu Assembly Election 2021: ಸಿನಿಮಾ ಮಾತ್ರವಲ್ಲದೆ ತಮ್ಮ ಸಿದ್ಧಾಂತಗಳ ಮೂಲಕವೂ ನಟ ವಿಜಯ್​ ಆಗಾಗ ಸುದ್ದಿ ಆಗುತ್ತಿರುತ್ತಾರೆ. ಈಗ ಅವರು ಮತದಾನ ಮಾಡಲು ಸೈಕಲ್​ನಲ್ಲಿ ಬಂದಿರುವುದು ಚರ್ಚೆ ಆಗುತ್ತಿದೆ.

Thalapathy Vijay: ಸೈಕಲ್​ನಲ್ಲಿ ಬಂದು ಮತದಾನ ಮಾಡಿದ ದಳಪತಿ ವಿಜಯ್​! ಪೆಟ್ರೋಲ್​ ಬೆಲೆ ಏರಿಕೆಗೆ ನಟನ ತಿರುಗೇಟು?
ದಳಪತಿ ವಿಜಯ್​
ಮದನ್​ ಕುಮಾರ್​
| Edited By: |

Updated on: Apr 06, 2021 | 1:41 PM

Share

ತಮಿಳುನಾಡು ಚುನಾವಣೆ ದೇಶಾದ್ಯಂತ ಗಮನ ಸೆಳೆದಿದೆ. ಹಲವು ದಿನಗಳಿಂದ ರಾಷ್ಟ್ರಮಟ್ಟದಲ್ಲಿ ಅಲ್ಲಿನ ರಾಜಕೀಯ ಸಂಗತಿಗಳು ಹೈಲೈಟ್​ ಆಗುತ್ತಿವೆ. ಇಂದು (ಮಾ.6) ತಮಿಳುನಾಡಿನಲ್ಲಿ ಚುನಾವಣೆ ನಡೆದಿದ್ದು, ತಮಿಳು ಚಿತ್ರರಂಗದ ಸೆಲೆಬ್ರಿಟಿಗಳೆಲ್ಲ ಮತದಾನ ಮಾಡಿದ್ದಾರೆ. ಅವರೆಲ್ಲರ ನಡುವೆ ದಳಪತಿ ವಿಜಯ್​ ಹೆಚ್ಚು ಗಮನ ಸೆಳೆದಿದ್ದಾರೆ. ಮತದಾನದ ಕೇಂದ್ರಕ್ಕೆ ಅವರು ಸೈಕಲ್​ ತುಳಿದುಕೊಂಡು ಬಂದಿರುವುದೇ ಅದಕ್ಕೆ ಕಾರಣ!

ಚೆನ್ನೈನ ನೀಲಾಂಕರೈನಲ್ಲಿ ನಟ ದಳಪತಿ ವಿಜಯ್​ ಮತದಾನ ಮಾಡಿದರು. ಅಲ್ಲಿಗೆ ಬರುವಾಗ ಅವರು ಯಾವುದೇ ಐಷಾರಾಮಿ ಕಾರು ಬಳಸಿಲ್ಲ. ಸ್ಟೈಲಿಶ್​ ಬೈಕ್​ ಕೂಡ ಮುಟ್ಟಿಲ್ಲ. ಬದಲಿಗೆ ಸಿಂಪಲ್​ ಆಗಿ ಸೈಕಲ್​ ಏರಿ ಬಂದಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ವಿಜಯ್​ ಸೈಕಲ್​ ಓಡಿಸುತ್ತಿರುವ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಅವರು ಹೀಗೆ ಸೈಕಲ್​ ತುಳಿದುಕೊಂಡು ಬಂದಿರುವುದರ ಹಿಂದೆ ದೊಡ್ಡ ಅರ್ಥವಿದೆ ಎಂದು ಎಲ್ಲೆಡೆ ಚರ್ಚೆ ಆಗುತ್ತಿದೆ.

ಸಿನಿಮಾ ಮಾತ್ರವಲ್ಲದೆ ತಮ್ಮ ಸಿದ್ಧಾಂತದ ಕಾರಣಕ್ಕಾಗಿಯೂ ವಿಜಯ್​ ಅವರು ಆಗಾಗ ಸುದ್ದಿ ಆಗುತ್ತಿರುತ್ತಾರೆ. ಸರ್ಕಾರದ ನಡೆಯ ಬಗ್ಗೆ ತಮ್ಮ ನಿಲುವು ಏನು ಎಂಬುದನ್ನು ಅವರು ಸಿನಿಮಾಗಳ ಮೂಲಕವೂ ವ್ಯಕ್ತಪಡಿಸಿದ್ದುಂಟು. ಈಗ ದೇಶದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ಜಾಸ್ತಿ ಆಗಿರುವುದನ್ನು ಟೀಕಿಸುವ ಸಲುವಾಗಿಯೇ ವಿಜಯ್​ ಸೈಕಲ್​ ಏರಿ ಬಂದಿದ್ದಾರೆ ಎಂಬ ಅಭಿಪ್ರಾಯ ಕೇಳಿಬಂದಿದೆ. ಈ ಮೂಲಕ ಕೇಂದ್ರ ಸರ್ಕಾರವನ್ನು ಅವರು ವ್ಯಂಗ್ಯ ಮಾಡಿದ್ದಾರೆ ಎನ್ನಲಾಗುತ್ತಿದೆ.

2017ರಲ್ಲಿ ವಿಜಯ್​ ನಟನೆಯ ‘ಮೆರ್ಸೆಲ್​’ ಸಿನಿಮಾ ತೆರೆಕಂಡಿತ್ತು. ಆ ಚಿತ್ರಕ್ಕೆ ಅಟ್ಲಿ ಕುಮಾರ್​ ನಿರ್ದೇಶನ ಮಾಡಿದ್ದರು. ಮೆರ್ಸೆಲ್​ ಚಿತ್ರದಲ್ಲಿ ಕೇಂದ್ರ ಸರ್ಕಾರದ ಜಿಎಸ್​ಟಿ ಬಗ್ಗೆ ಟೀಕೆಗಳಿದ್ದವು. ಹಾಗಾಗಿ ಬಿಜೆಪಿ ಬೆಂಬಲಿಗರನ್ನು ಈ ಸಿನಿಮಾ ಕೆರಳಿಸಿತ್ತು. ಈಗಲೂ ಕೂಡ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಏರಿಕೆಯ ವಿಷಯಯನ್ನು ಟೀಕಿಸುವ ಸಲುವಾಗಿಯೇ ವಿಜಯ್​ ಅವರು ಸೈಕಲ್​ ತುಳಿದುಕೊಂಡು ಬಂದು ಮತದಾನ ಮಾಡಿದ್ದಾರೆ ಎಂಬ ಅಭಿಪ್ರಾಯ ಅನೇಕರದ್ದು.

ಇನ್ನು, ಕಾಲಿವುಡ್​ನ ಸ್ಟಾರ್​ ನಟರಾದ ರಜನಿಕಾಂತ್​, ಕಮಲ್​ ಹಾಸನ್​, ಅಜಿತ್​ ಕುಮಾರ್​ ಮುಂತಾದವರು ಕೂಡ ಕುಟುಂಬದವರ ಜೊತೆ ಆಗಮಿಸಿ ಮತದಾನ ಮಾಡಿದ್ದಾರೆ. ಆ ಸಂದರ್ಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ವಿಜಯ್​ ಸೈಕಲ್​ನಲ್ಲಿ ಬಂದ ವಿಡಿಯೋವನ್ನು ಅವರ ಅಭಿಮಾನಿಗಳು ಶೇರ್​ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Tamil Nadu Election 2021 Voting LIVE: ಕುತೂಹಲ ಮೂಡಿಸಿದ ತಮಿಳುನಾಡು ವಿಧಾನಸಭಾ ಚುನಾವಣೆ

Viral Video: ಚೆನ್ನೈನಲ್ಲಿ ಆಟೋದಲ್ಲಿ ಪ್ರಯಾಣಿಸಿದ ಸ್ಟಾರ್​ ನಟನ ಸರಳತೆ ನೋಡಿ ಅಭಿಮಾನಿಗಳು ಫುಲ್​ ಖುಷ್​

(Tamil Nadu Election: Master Actor Vijay Cycles to Polling Booth to criticize petrol price hike)

ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ