AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thalapathy Vijay: ಸೈಕಲ್​ನಲ್ಲಿ ಬಂದು ಮತದಾನ ಮಾಡಿದ ದಳಪತಿ ವಿಜಯ್​! ಪೆಟ್ರೋಲ್​ ಬೆಲೆ ಏರಿಕೆಗೆ ನಟನ ತಿರುಗೇಟು?

Tamil Nadu Assembly Election 2021: ಸಿನಿಮಾ ಮಾತ್ರವಲ್ಲದೆ ತಮ್ಮ ಸಿದ್ಧಾಂತಗಳ ಮೂಲಕವೂ ನಟ ವಿಜಯ್​ ಆಗಾಗ ಸುದ್ದಿ ಆಗುತ್ತಿರುತ್ತಾರೆ. ಈಗ ಅವರು ಮತದಾನ ಮಾಡಲು ಸೈಕಲ್​ನಲ್ಲಿ ಬಂದಿರುವುದು ಚರ್ಚೆ ಆಗುತ್ತಿದೆ.

Thalapathy Vijay: ಸೈಕಲ್​ನಲ್ಲಿ ಬಂದು ಮತದಾನ ಮಾಡಿದ ದಳಪತಿ ವಿಜಯ್​! ಪೆಟ್ರೋಲ್​ ಬೆಲೆ ಏರಿಕೆಗೆ ನಟನ ತಿರುಗೇಟು?
ದಳಪತಿ ವಿಜಯ್​
ಮದನ್​ ಕುಮಾರ್​
| Updated By: Digi Tech Desk|

Updated on: Apr 06, 2021 | 1:41 PM

Share

ತಮಿಳುನಾಡು ಚುನಾವಣೆ ದೇಶಾದ್ಯಂತ ಗಮನ ಸೆಳೆದಿದೆ. ಹಲವು ದಿನಗಳಿಂದ ರಾಷ್ಟ್ರಮಟ್ಟದಲ್ಲಿ ಅಲ್ಲಿನ ರಾಜಕೀಯ ಸಂಗತಿಗಳು ಹೈಲೈಟ್​ ಆಗುತ್ತಿವೆ. ಇಂದು (ಮಾ.6) ತಮಿಳುನಾಡಿನಲ್ಲಿ ಚುನಾವಣೆ ನಡೆದಿದ್ದು, ತಮಿಳು ಚಿತ್ರರಂಗದ ಸೆಲೆಬ್ರಿಟಿಗಳೆಲ್ಲ ಮತದಾನ ಮಾಡಿದ್ದಾರೆ. ಅವರೆಲ್ಲರ ನಡುವೆ ದಳಪತಿ ವಿಜಯ್​ ಹೆಚ್ಚು ಗಮನ ಸೆಳೆದಿದ್ದಾರೆ. ಮತದಾನದ ಕೇಂದ್ರಕ್ಕೆ ಅವರು ಸೈಕಲ್​ ತುಳಿದುಕೊಂಡು ಬಂದಿರುವುದೇ ಅದಕ್ಕೆ ಕಾರಣ!

ಚೆನ್ನೈನ ನೀಲಾಂಕರೈನಲ್ಲಿ ನಟ ದಳಪತಿ ವಿಜಯ್​ ಮತದಾನ ಮಾಡಿದರು. ಅಲ್ಲಿಗೆ ಬರುವಾಗ ಅವರು ಯಾವುದೇ ಐಷಾರಾಮಿ ಕಾರು ಬಳಸಿಲ್ಲ. ಸ್ಟೈಲಿಶ್​ ಬೈಕ್​ ಕೂಡ ಮುಟ್ಟಿಲ್ಲ. ಬದಲಿಗೆ ಸಿಂಪಲ್​ ಆಗಿ ಸೈಕಲ್​ ಏರಿ ಬಂದಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ವಿಜಯ್​ ಸೈಕಲ್​ ಓಡಿಸುತ್ತಿರುವ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಅವರು ಹೀಗೆ ಸೈಕಲ್​ ತುಳಿದುಕೊಂಡು ಬಂದಿರುವುದರ ಹಿಂದೆ ದೊಡ್ಡ ಅರ್ಥವಿದೆ ಎಂದು ಎಲ್ಲೆಡೆ ಚರ್ಚೆ ಆಗುತ್ತಿದೆ.

ಸಿನಿಮಾ ಮಾತ್ರವಲ್ಲದೆ ತಮ್ಮ ಸಿದ್ಧಾಂತದ ಕಾರಣಕ್ಕಾಗಿಯೂ ವಿಜಯ್​ ಅವರು ಆಗಾಗ ಸುದ್ದಿ ಆಗುತ್ತಿರುತ್ತಾರೆ. ಸರ್ಕಾರದ ನಡೆಯ ಬಗ್ಗೆ ತಮ್ಮ ನಿಲುವು ಏನು ಎಂಬುದನ್ನು ಅವರು ಸಿನಿಮಾಗಳ ಮೂಲಕವೂ ವ್ಯಕ್ತಪಡಿಸಿದ್ದುಂಟು. ಈಗ ದೇಶದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ಜಾಸ್ತಿ ಆಗಿರುವುದನ್ನು ಟೀಕಿಸುವ ಸಲುವಾಗಿಯೇ ವಿಜಯ್​ ಸೈಕಲ್​ ಏರಿ ಬಂದಿದ್ದಾರೆ ಎಂಬ ಅಭಿಪ್ರಾಯ ಕೇಳಿಬಂದಿದೆ. ಈ ಮೂಲಕ ಕೇಂದ್ರ ಸರ್ಕಾರವನ್ನು ಅವರು ವ್ಯಂಗ್ಯ ಮಾಡಿದ್ದಾರೆ ಎನ್ನಲಾಗುತ್ತಿದೆ.

2017ರಲ್ಲಿ ವಿಜಯ್​ ನಟನೆಯ ‘ಮೆರ್ಸೆಲ್​’ ಸಿನಿಮಾ ತೆರೆಕಂಡಿತ್ತು. ಆ ಚಿತ್ರಕ್ಕೆ ಅಟ್ಲಿ ಕುಮಾರ್​ ನಿರ್ದೇಶನ ಮಾಡಿದ್ದರು. ಮೆರ್ಸೆಲ್​ ಚಿತ್ರದಲ್ಲಿ ಕೇಂದ್ರ ಸರ್ಕಾರದ ಜಿಎಸ್​ಟಿ ಬಗ್ಗೆ ಟೀಕೆಗಳಿದ್ದವು. ಹಾಗಾಗಿ ಬಿಜೆಪಿ ಬೆಂಬಲಿಗರನ್ನು ಈ ಸಿನಿಮಾ ಕೆರಳಿಸಿತ್ತು. ಈಗಲೂ ಕೂಡ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಏರಿಕೆಯ ವಿಷಯಯನ್ನು ಟೀಕಿಸುವ ಸಲುವಾಗಿಯೇ ವಿಜಯ್​ ಅವರು ಸೈಕಲ್​ ತುಳಿದುಕೊಂಡು ಬಂದು ಮತದಾನ ಮಾಡಿದ್ದಾರೆ ಎಂಬ ಅಭಿಪ್ರಾಯ ಅನೇಕರದ್ದು.

ಇನ್ನು, ಕಾಲಿವುಡ್​ನ ಸ್ಟಾರ್​ ನಟರಾದ ರಜನಿಕಾಂತ್​, ಕಮಲ್​ ಹಾಸನ್​, ಅಜಿತ್​ ಕುಮಾರ್​ ಮುಂತಾದವರು ಕೂಡ ಕುಟುಂಬದವರ ಜೊತೆ ಆಗಮಿಸಿ ಮತದಾನ ಮಾಡಿದ್ದಾರೆ. ಆ ಸಂದರ್ಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ವಿಜಯ್​ ಸೈಕಲ್​ನಲ್ಲಿ ಬಂದ ವಿಡಿಯೋವನ್ನು ಅವರ ಅಭಿಮಾನಿಗಳು ಶೇರ್​ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Tamil Nadu Election 2021 Voting LIVE: ಕುತೂಹಲ ಮೂಡಿಸಿದ ತಮಿಳುನಾಡು ವಿಧಾನಸಭಾ ಚುನಾವಣೆ

Viral Video: ಚೆನ್ನೈನಲ್ಲಿ ಆಟೋದಲ್ಲಿ ಪ್ರಯಾಣಿಸಿದ ಸ್ಟಾರ್​ ನಟನ ಸರಳತೆ ನೋಡಿ ಅಭಿಮಾನಿಗಳು ಫುಲ್​ ಖುಷ್​

(Tamil Nadu Election: Master Actor Vijay Cycles to Polling Booth to criticize petrol price hike)

Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​