AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamizhaga Vetri Kazhagam: ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ, ಹೊಸ ಪಕ್ಷ ತಮಿಳಗ ವೆಟ್ರಿ ಕಳಗಂ

Thalapathy Vijay Party Name: ತಮಿಳು ನಟ ದಳಪತಿ ವಿಜಯ್ ರಾಜಕೀಯ ಪ್ರವೇಶಿಸಿದ್ದು, ತಮ್ಮ ಪಕ್ಷಕ್ಕೆ ತಮಿಳಗ ವೆಟ್ರಿ ಕಳಗಂ ಎಂದು ನಾಮಕರಣ ಮಾಡಿದ್ದಾರೆ. ನಟ ವಿಜಯ್ ತಮಿಳುನಾಡು ಮತ್ತು ಕೇರಳದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ ಮತ್ತು ಹಲವಾರು ಸಾರ್ವಜನಿಕ ಕಲ್ಯಾಣ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.

Tamizhaga Vetri Kazhagam: ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ, ಹೊಸ ಪಕ್ಷ ತಮಿಳಗ ವೆಟ್ರಿ ಕಳಗಂ
Follow us
ನಯನಾ ರಾಜೀವ್
|

Updated on:Feb 02, 2024 | 2:04 PM

ತಮಿಳು ನಟ ದಳಪತಿ ವಿಜಯ್(Thalapathy Vijay)ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ತಮಿಳಗ ವೆಟ್ರಿ ಕಳಗಂ ಎಂದು ಪಕ್ಷಕ್ಕೆ ನಾಮಕರಣ ಮಾಡಿದ್ದಾರೆ. ದಳಪತಿ ವಿಜಯ್ ಅವರು ರಾಜಕೀಯಕ್ಕೆ ಧುಮುಕಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ. ಇದು ತಮಿಳುನಾಡಿನ ಸಿನಿಮಾ ಹಾಗೂ ರಾಜಕೀಯದಲ್ಲಿ ಹೊಸ ತಿರುವು ತರಲಿದೆ ಎಂದು ಭಾವಿಸಲಾಗಿದೆ.

ವಿಜಯ್ ಅವರು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆ(Tamil Nadu Assembly Elaction)ಯ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ವಿಜಯ್ ಅವರ ಪಕ್ಷವು 2026ರ ತಮಿಳುನಾಡು ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ನಟ ವಿಜಯ್ ಅವರು ಅವರನ್ನು ತಮ್ಮ ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು, ಚುನಾವಣಾ ಆಯೋಗದಲ್ಲಿ ಪಕ್ಷದ ಹೆಸರನ್ನು ನೋಂದಣಿ ಮಾಡಿದ್ದಾರೆ. ಮಾರು 200 ಸದಸ್ಯರು ಪಾಲ್ಗೊಂಡಿದ್ದ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ನಟ ವಿಜಯ್ ತಮಿಳುನಾಡು ಮತ್ತು ಕೇರಳದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ ಮತ್ತು ಹಲವಾರು ಸಾರ್ವಜನಿಕ ಕಲ್ಯಾಣ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು 2018 ರಲ್ಲಿ ತುತ್ತುಕುಡಿ ಪೊಲೀಸ್ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು, ಇದು ಅವರ ರಾಜಕೀಯ ಗಂಭೀರತೆಯನ್ನು ಸೂಚಿಸುತ್ತದೆ. ನಟ ಡಿಸೆಂಬರ್‌ನಲ್ಲಿ ಪ್ರವಾಹದಿಂದ ಜರ್ಜರಿತವಾಗಿರುವ ತಮಿಳುನಾಡಿನ ದಕ್ಷಿಣ ಜಿಲ್ಲೆಗಳಿಗೆ ಭೇಟಿ ನೀಡಿದ್ದರು .

ಮತ್ತಷ್ಟು ಓದಿ: ಕೊಟ್ಟ ಸೂಚನೆ ನಿರ್ಲಕ್ಷಿಸಿದ ಖ್ಯಾತ ನಿರ್ದೇಶಕ; ಇದುವೇ ಸಿನಿಮಾ ಸೋಲಿಗೆ ಕಾರಣ ಆಯ್ತು?

2024ರ ಚುನಾವಣೆಯಲ್ಲಿ ನಮ್ಮ ಪಕ್ಷ  ಸ್ಪರ್ಧಿಸುವುದಿಲ್ಲ ಮತ್ತು ನಾವು ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ್ದರು, ಸಾಮಾನ್ಯ ಮತ್ತು ಕಾರ್ಯಕಾರಿ ಮಂಡಳಿ ಸಭೆಗಾಗಿ ನಾವು ಈ ನಿರ್ಧಾರವನ್ನು ಮಾಡಿದ್ದೇವೆ ಎಂದು ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:50 pm, Fri, 2 February 24

ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್