AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

14 ವರ್ಷಗಳ ಬಳಿಕ ಶೂಟಿಂಗ್​ಗಾಗಿ ಕೇರಳಕ್ಕೆ ಬಂದ ದಳಪತಿ ವಿಜಯ್; ಸಿಕ್ತು ಭರ್ಜರಿ ಸ್ವಾಗತ

ವಿಜಯ್ ಹೋದಲ್ಲೆಲ್ಲ ಬಿಗಿ ಭದ್ರತೆ ಇರಲಿದೆ. ಅವರು ಈಗ ಕೇವಲ ನಟ ಮಾತ್ರ ಅಲ್ಲ. ವಿಜಯ್ ರಾಜಕೀಯಕ್ಕೂ ಕಾಲಿಡುವುದು ಖಚಿತವಾಗಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಭದ್ರತೆ ಒದಗಿಸಲಾಗಿದೆ.

14 ವರ್ಷಗಳ ಬಳಿಕ ಶೂಟಿಂಗ್​ಗಾಗಿ ಕೇರಳಕ್ಕೆ ಬಂದ ದಳಪತಿ ವಿಜಯ್; ಸಿಕ್ತು ಭರ್ಜರಿ ಸ್ವಾಗತ
ವಿಜಯ್
ರಾಜೇಶ್ ದುಗ್ಗುಮನೆ
|

Updated on: Mar 19, 2024 | 7:31 AM

Share

ನಟ ದಳಪತಿ ವಿಜಯ್ (Thalapathy Vijay) ಅವರಿಗೆ ತಮಿಳುನಾಡು ಮಾತ್ರವಲ್ಲ ಬೇರೆ ರಾಜ್ಯಗಳಲ್ಲೂ ದೊಡ್ಡ ಅಭಿಮಾನಿ ಬಳಗ ಇದೆ. ಕರ್ನಾಟಕ, ಕೇರಳದಲ್ಲಿ ಅವರನ್ನು ಆರಾಧಿಸೋರ ಸಂಖ್ಯೆ ದೊಡ್ಡದಿದೆ. ಈಗ ಅವರು 14 ವರ್ಷಗಳ ಬಳಿಕ ಶೂಟಿಂಗ್​ಗಾಗಿ ಕೇರಳಕ್ಕೆ ತೆರಳಿದ್ದಾರೆ. ವಿಜಯ್ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ವಿಮಾನ ನಿಲ್ದಾಣದಲ್ಲಿ ಅವರು ಆಗಮಿಸುವುದಕ್ಕೂ ಮೊದಲೇ ಫ್ಯಾನ್ಸ್ ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ತಿರುವನಂತಪುರ ವಿಮಾನ ನಿಲ್ದಾಣಕ್ಕೆ ವಿಜಯ್ ಆಗಮಿಸಿದ್ದಾರೆ. ಅವರ ಮುಂದಿನ ಸಿನಿಮಾ ‘GOAT’ (ಗ್ರೇಟೆಸ್ಟ್ ಆಫ್ ಆಲ್ ಟೈಮ್) ಸಿನಿಮಾ ಶೂಟ್​ನಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ವಿಜಯ್ ಹೋದಲ್ಲೆಲ್ಲ ಬಿಗಿ ಭದ್ರತೆ ಇರಲಿದೆ. ಅವರು ಈಗ ಕೇವಲ ನಟ ಮಾತ್ರ ಅಲ್ಲ. ವಿಜಯ್ ರಾಜಕೀಯಕ್ಕೂ ಕಾಲಿಡುವುದು ಖಚಿತವಾಗಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಭದ್ರತೆ ಒದಗಿಸಲಾಗಿದೆ.

ವಿಜಯ್​ಗೆ ಸಂಬಂಧಿಸಿದ ಟ್ವೀಟ್

ಈ ಮೊದಲು 2011ರಲ್ಲಿ ರಿಲೀಸ್ ಆದ ‘ಕಾವಲನ್’ ಸಿನಿಮಾದ ಶೂಟಿಂಗ್ ಕೇರಳದಲ್ಲಿ ನಡೆದಿತ್ತು. ಆ ಬಳಿಕ ಅವರ ಯಾವ ಸಿನಿಮಾದ ಶೂಟಿಂಗ್ ಕೂಡ ಕೇರಳದಲ್ಲಿ ನಡೆದಿಲ್ಲ. ಈಗ ಮತ್ತೆ ಆಗಮಿಸಿರುವ ಅವರನ್ನು ಫ್ಯಾನ್ಸ್ ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.

ಇದನ್ನೂ ಓದಿ: ಒಂದು ಕೋಟಿ ರೂಪಾಯಿ ದಾನ ನೀಡಿದ ವಿಜಯ್: ಯಾರಿಗೆ? ಏಕೆ?

‘GOAT’ ಸಿನಿಮಾದಲ್ಲಿ ವಿಜಯ್ ಜೊತೆ ಪ್ರಭುದೇವ, ಪ್ರಶಾಂತ್, ವಿನಯ್, ಮೀನಾಕ್ಷಿ ಚೌಧರಿ ಮೊದಲಾದವರು ನಟಿಸುತ್ತಿದ್ದಾರೆ. ವೆಂಕಟ್ ಪ್ರಭು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರಕ್ಕೆ ಯುವಾನ್ ಶಂಕರ್ ರಾಜ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ವಿಜಯ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಎಜಿಎಸ್ ಎಂಟರ್​ಟೇನ್​ಮೆಂಟ್ ಮೂಲಕ ಸಿನಿಮಾ ಮೂಡಿ ಬರಲಿದೆ. ಈ ಚಿತ್ರದ ಶೂಟಿಂಗ್ ಚೆನ್ನೈ, ಥೈಲ್ಯಾಂಡ್, ಹೈದರಾಬಾದ್ ಹಾಗೂ ಪಾಂಡಿಚೇರಿಯಲ್ಲಿ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ