AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

14 ವರ್ಷಗಳ ಬಳಿಕ ಶೂಟಿಂಗ್​ಗಾಗಿ ಕೇರಳಕ್ಕೆ ಬಂದ ದಳಪತಿ ವಿಜಯ್; ಸಿಕ್ತು ಭರ್ಜರಿ ಸ್ವಾಗತ

ವಿಜಯ್ ಹೋದಲ್ಲೆಲ್ಲ ಬಿಗಿ ಭದ್ರತೆ ಇರಲಿದೆ. ಅವರು ಈಗ ಕೇವಲ ನಟ ಮಾತ್ರ ಅಲ್ಲ. ವಿಜಯ್ ರಾಜಕೀಯಕ್ಕೂ ಕಾಲಿಡುವುದು ಖಚಿತವಾಗಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಭದ್ರತೆ ಒದಗಿಸಲಾಗಿದೆ.

14 ವರ್ಷಗಳ ಬಳಿಕ ಶೂಟಿಂಗ್​ಗಾಗಿ ಕೇರಳಕ್ಕೆ ಬಂದ ದಳಪತಿ ವಿಜಯ್; ಸಿಕ್ತು ಭರ್ಜರಿ ಸ್ವಾಗತ
ವಿಜಯ್
ರಾಜೇಶ್ ದುಗ್ಗುಮನೆ
|

Updated on: Mar 19, 2024 | 7:31 AM

Share

ನಟ ದಳಪತಿ ವಿಜಯ್ (Thalapathy Vijay) ಅವರಿಗೆ ತಮಿಳುನಾಡು ಮಾತ್ರವಲ್ಲ ಬೇರೆ ರಾಜ್ಯಗಳಲ್ಲೂ ದೊಡ್ಡ ಅಭಿಮಾನಿ ಬಳಗ ಇದೆ. ಕರ್ನಾಟಕ, ಕೇರಳದಲ್ಲಿ ಅವರನ್ನು ಆರಾಧಿಸೋರ ಸಂಖ್ಯೆ ದೊಡ್ಡದಿದೆ. ಈಗ ಅವರು 14 ವರ್ಷಗಳ ಬಳಿಕ ಶೂಟಿಂಗ್​ಗಾಗಿ ಕೇರಳಕ್ಕೆ ತೆರಳಿದ್ದಾರೆ. ವಿಜಯ್ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ವಿಮಾನ ನಿಲ್ದಾಣದಲ್ಲಿ ಅವರು ಆಗಮಿಸುವುದಕ್ಕೂ ಮೊದಲೇ ಫ್ಯಾನ್ಸ್ ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ತಿರುವನಂತಪುರ ವಿಮಾನ ನಿಲ್ದಾಣಕ್ಕೆ ವಿಜಯ್ ಆಗಮಿಸಿದ್ದಾರೆ. ಅವರ ಮುಂದಿನ ಸಿನಿಮಾ ‘GOAT’ (ಗ್ರೇಟೆಸ್ಟ್ ಆಫ್ ಆಲ್ ಟೈಮ್) ಸಿನಿಮಾ ಶೂಟ್​ನಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ವಿಜಯ್ ಹೋದಲ್ಲೆಲ್ಲ ಬಿಗಿ ಭದ್ರತೆ ಇರಲಿದೆ. ಅವರು ಈಗ ಕೇವಲ ನಟ ಮಾತ್ರ ಅಲ್ಲ. ವಿಜಯ್ ರಾಜಕೀಯಕ್ಕೂ ಕಾಲಿಡುವುದು ಖಚಿತವಾಗಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಭದ್ರತೆ ಒದಗಿಸಲಾಗಿದೆ.

ವಿಜಯ್​ಗೆ ಸಂಬಂಧಿಸಿದ ಟ್ವೀಟ್

ಈ ಮೊದಲು 2011ರಲ್ಲಿ ರಿಲೀಸ್ ಆದ ‘ಕಾವಲನ್’ ಸಿನಿಮಾದ ಶೂಟಿಂಗ್ ಕೇರಳದಲ್ಲಿ ನಡೆದಿತ್ತು. ಆ ಬಳಿಕ ಅವರ ಯಾವ ಸಿನಿಮಾದ ಶೂಟಿಂಗ್ ಕೂಡ ಕೇರಳದಲ್ಲಿ ನಡೆದಿಲ್ಲ. ಈಗ ಮತ್ತೆ ಆಗಮಿಸಿರುವ ಅವರನ್ನು ಫ್ಯಾನ್ಸ್ ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.

ಇದನ್ನೂ ಓದಿ: ಒಂದು ಕೋಟಿ ರೂಪಾಯಿ ದಾನ ನೀಡಿದ ವಿಜಯ್: ಯಾರಿಗೆ? ಏಕೆ?

‘GOAT’ ಸಿನಿಮಾದಲ್ಲಿ ವಿಜಯ್ ಜೊತೆ ಪ್ರಭುದೇವ, ಪ್ರಶಾಂತ್, ವಿನಯ್, ಮೀನಾಕ್ಷಿ ಚೌಧರಿ ಮೊದಲಾದವರು ನಟಿಸುತ್ತಿದ್ದಾರೆ. ವೆಂಕಟ್ ಪ್ರಭು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರಕ್ಕೆ ಯುವಾನ್ ಶಂಕರ್ ರಾಜ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ವಿಜಯ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಎಜಿಎಸ್ ಎಂಟರ್​ಟೇನ್​ಮೆಂಟ್ ಮೂಲಕ ಸಿನಿಮಾ ಮೂಡಿ ಬರಲಿದೆ. ಈ ಚಿತ್ರದ ಶೂಟಿಂಗ್ ಚೆನ್ನೈ, ಥೈಲ್ಯಾಂಡ್, ಹೈದರಾಬಾದ್ ಹಾಗೂ ಪಾಂಡಿಚೇರಿಯಲ್ಲಿ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್