AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಫಂಕ್ಷನ್​​ಗೆ ಅಟೆಂಡ್ ಆಗಿದ್ದಕ್ಕೂ ಟೀಕೆ ಎದುರಿಸಿದ ದಳಪತಿ ವಿಜಯ್

ಚೆನ್ನೈನಲ್ಲಿ ನಡೆದ ಮದುವೆಯಲ್ಲಿ ದಳಪತಿ ವಿಜಯ್ ಭಾಗಿ ಆಗಿದ್ದಾರೆ. ಇದು ಹೈ ಪ್ರಾಫೈಲ್ ಮದುವೆ ಆಗಿತ್ತು. ಈ ಕಾರಣಕ್ಕೆ ಸಾಕಷ್ಟು ಗಣ್ಯರು ಹಾಜರಿ ಹಾಕಿದ್ದರು. ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಸೇರಿದಂತೆ ಅನೇಕ ಗಣ್ಯರು ಇದರಲ್ಲಿ ಭಾಗಿ ಆಗಿದ್ದಾರೆ. ಈ ಬಗ್ಗೆ ಚರ್ಚೆ ನಡೆದಿದೆ. ಅನೇಕರು ವಿಜಯ್ ಅವರನ್ನು ಟೀಕಿಸಿದ್ದಾರೆ.

ಮದುವೆ ಫಂಕ್ಷನ್​​ಗೆ ಅಟೆಂಡ್ ಆಗಿದ್ದಕ್ಕೂ ಟೀಕೆ ಎದುರಿಸಿದ ದಳಪತಿ ವಿಜಯ್
ವಿಜಯ್
ರಾಜೇಶ್ ದುಗ್ಗುಮನೆ
|

Updated on: Feb 09, 2026 | 9:09 AM

Share

ದಳಪತಿ ವಿಜಯ್ (vijay) ಅವರು ಸದ್ಯ ಸುದ್ದಿಯಲ್ಲಿದ್ದಾರೆ. ಅವರು ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಅವರ ನಟನೆಯ ‘ಜನ ನಾಯಗನ್’ ರಿಲೀಸ್ ಬಗ್ಗೆ ಇನ್ನೂ ಯಾವುದೇ ಅಪ್​​ಡೇಟ್ ಸಿಕ್ಕಿಲ್ಲ. ಕಾಲ್ತುಳಿತದ ವೇಳೆ 41 ಜನ ಸತ್ತ ಪ್ರಕರಣದಲ್ಲಿ ಅವರು ವಿಚಾರಣೆ ಎದುರಿಸುತ್ತಿದ್ದಾರೆ. ಈ ಮಧ್ಯೆ ಅವರು ಒಂದು ವಿಷಯಕ್ಕೆ ಟೀಕೆ ಎದುರಿಸಿದ್ದಾರೆ. ಇದಕ್ಕೆ ಕಾರಣ ಮದುವೆಯಲ್ಲಿ ಭಾಗಿ ಆಗಿದ್ದು.

ಚೆನ್ನೈನಲ್ಲಿ ನಡೆದ ಮದುವೆಯಲ್ಲಿ ದಳಪತಿ ವಿಜಯ್ ಭಾಗಿ ಆಗಿದ್ದಾರೆ. ಇದು ಹೈ ಪ್ರಾಫೈಲ್ ಮದುವೆ ಆಗಿತ್ತು. ಈ ಕಾರಣಕ್ಕೆ ಸಾಕಷ್ಟು ಗಣ್ಯರು ಹಾಜರಿ ಹಾಕಿದ್ದರು. ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಸೇರಿದಂತೆ ಅನೇಕ ಗಣ್ಯರು ಇದರಲ್ಲಿ ಭಾಗಿ ಆಗಿದ್ದಾರೆ. ಈ ಬಗ್ಗೆ ಚರ್ಚೆ ನಡೆದಿದೆ. ಅನೇಕರು ವಿಜಯ್ ಅವರನ್ನು ಟೀಕಿಸಿದ್ದಾರೆ.

ಕರೂರಿನಲ್ಲಿ ಕಳೆದ ವರ್ಷ ವಿಜಯ್ ನಡೆಸಿದ ರ್ಯಾಲಿ ವೇಳೆ ಸಾಕಷ್ಟು ಮಂದಿ ಮೃತಪಟ್ಟರು. ಈ ಕಾಲ್ತುಳಿತಕ್ಕೆ ವಿಜಯ್ ಹೊಣೆ ಎಂಬ ಆರೋಪ ಇದೆ. ವಿಜಯ್ ವಿವಾಹ ಫಂಕ್ಷನ್​​ಗೆ ಹಾಜರಿ ಹಾಕಿದ್ದನ್ನು ಈ ರೀತಿ ಆರೋಪ ಮಾಡಿದವರು ಖಂಡಿಸಿದ್ದಾರೆ. ಇದು ಸರಿ ಅಲ್ಲ ಎಂದು ಹೇಳಿದ್ದಾರೆ. ‘ಕರೂರು ಕಾಲ್ತುಳಿತದ ಮೃತರ ಕುಟುಂಬಕ್ಕೆ ಭೇಟಿ ನೀಡಲು ವಿಜಯ್ ಬಳಿ ಸಮಯವಿಲ್ಲ. ಮದುವೆ ಮನೆಗೆ ತೆರಳಲು ಅವರ ಬಳಿ ಸಮಯವಿದೆ’ ಎಂಬುದು ಅನೇಕರ ಟೀಕೆ.

ಇದನ್ನೂ ಓದಿ: ದಳಪತಿ ವಿಜಯ್​​ಗೆ ಮತ್ತೊಂದು ಶಾಕ್; ಕಟ್ಟಬೇಕಿದೆ ಒಂದೂವರೆ ಕೊಟಿ ರೂ. ದಂಡ

ಇನ್ನು, ವಿಜಯ್ ನಟನೆಯ ‘ಜನ ನಾಯಗನ್’ ರಿಲೀಸ್ ದಿನಾಂಕ ಇನ್ನೂ ಫಿಕ್ಸ್ ಆಗಿಲ್ಲ. ಸಿನಿಮಾದಲ್ಲಿರುವ ರಾಜಕೀಯ ವಿಷಯವೇ ರಿಲೀಸ್ ವಿಳಂಬಕ್ಕೆ ಕಾರಣ ಎಂಬ ಮಾತುಗಳು ವ್ಯಕ್ತವಾಗಿದೆ. ಈ ಚಿತ್ರವನ್ನು ಕನ್ನಡದ ಕೆವಿಎನ್ ಸಂಸ್ಥೆ ನಿರ್ಮಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!