AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ ನೋಡಲು ಮರದಿಂದ ಜಿಗಿದ ಹುಚ್ಚು ಅಭಿಮಾನಿ; ವಿಡಿಯೋ ವೈರಲ್

ದಳಪತಿ ವಿಜಯ್ ಅವರನ್ನು ಭೇಟಿಯಾಗಬೇಕು ಎಂಬ ಆಸೆಯಿಂದ ಹುಚ್ಚು ಅಭಿಮಾನಿಯೊಬ್ಬ ಈ ರೀತಿ ಮಾಡಿದ್ದಾನೆ. ವಿಜಯ್ ಅವರು ತಮ್ಮ ರಾಜಕೀಯ ಪಕ್ಷದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾಗ ಅಭಿಮಾನಿಗಳು ಅತಿರೇಕದ ವರ್ತನೆ ತೋರಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಕಮೆಂಟ್ ಮೂಲಕ ಟೀಕೆ ವ್ಯಕ್ತಪಡಿಸುತ್ತಿದ್ದಾರೆ.

ದಳಪತಿ ವಿಜಯ್ ನೋಡಲು ಮರದಿಂದ ಜಿಗಿದ ಹುಚ್ಚು ಅಭಿಮಾನಿ; ವಿಡಿಯೋ ವೈರಲ್
Thalapathy Vijay
ಮದನ್​ ಕುಮಾರ್​
|

Updated on:Apr 27, 2025 | 7:12 AM

Share

ಕಾಲಿವುಡ್ ನಟ ದಳಪತಿ ವಿಜಯ್ (Thalapathy Vijay) ಅವರು ಈಗ ಸಿನಿಮಾಗಿಂತಲೂ ರಾಜಕೀಯದ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ. ಈಗಾಗಲೇ ಅವರು ಪ್ರಚಾರದಲ್ಲಿ ಭಾಗಿಯಾಗುತ್ತಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇರುವುದರಿಂದ ಹೋದಲ್ಲೆಲ್ಲ ಜನರು ಸೇರುತ್ತಿದ್ದಾರೆ. ಇನ್ನು, ಅವರನ್ನು ಹತ್ತಿರದಿಂದ ನೋಡಬೇಕು ಎಂಬ ಆಸೆ ಇರುವ ಹುಚ್ಚು ಅಭಿಮಾನಿಗಳು (Thalapathy Vijay Fans) ಪ್ರಾಣವನ್ನೇ ಪಣಕ್ಕಿಟ್ಟು ಸಾಹಸ ಮಾಡುತ್ತಿದ್ದಾರೆ. ಅದಕ್ಕೆ ಇಲ್ಲೊಂದು ಲೇಟೆಸ್ಟ್ ಉದಾಹರಣೆ ಇದೆ. ವಿಜಯ್ ಅವರನ್ನು ನೋಡಲು ಅಭಿಮಾನಿಯೊಬ್ಬ ಮರದಿಂದ ಜಿಗಿದಿದ್ದಾನೆ!

ದಳಪತಿ ವಿಜಯ್ ಅವರು ಶನಿವಾರ (ಏಪ್ರಿಲ್ 26) ಕೊಯಮತ್ತೂರಿನಲ್ಲಿ ತಮ್ಮ ಪಕ್ಷದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ವ್ಯಾನ್​ ಮೇಲೆ ನಿಂತು ಅವರು ಜನರತ್ತ ಕೈ ಬೀಸುತ್ತಿದ್ದರು. ಆ ಸಂದರ್ಭದಲ್ಲಿ ಅಭಿಮಾನಿಯೊಬ್ಬ ಮರದಿಂದ ಜಿಗಿದು ವಾನ್​ ಏರಿದ್ದಾನೆ. ಆತನ ವರ್ತನೆಯಿಂದ ವಿಜಯ್ ಅವರಿಗೆ ಒಂದು ಕ್ಷಣ ಶಾಕ್ ಆಯಿತು. ಬಳಿಕ ಪಕ್ಷದ ಸ್ಕಾರ್ಫ್ ನೀಡಿ, ಆತನನ್ನು ಸಮಾಧಾನ ಮಾಡಿ ಕಳಿಸಲಾಯಿತು.

ಇದನ್ನೂ ಓದಿ
Image
ಇಫ್ತಾರ್ ಕೂಟದಲ್ಲಿ ಭಾಗಿ ಆಗಿ ಪ್ರಾರ್ಥನೆ ಮಾಡಿದ ದಳಪತಿ ವಿಜಯ್
Image
ದಳಪತಿ ವಿಜಯ್ ಕೊನೆಯ ಚಿತ್ರಕ್ಕೆ ‘ಜನ ನಾಯಗನ್’ ಶೀರ್ಷಿಕೆ; ರಾಜಕೀಯದ ಕಥೆ  
Image
‘ದಳಪತಿ ವಿಜಯ್ ಅವರು ಡಾರ್ಲಿಂಗ್’; ಮನು ಭಾಕರ್ ಪ್ರೀತಿಯ ನುಡಿಗಳು
Image
ದಳಪತಿ ವಿಜಯ್ ಒಟ್ಟೂ ಆಸ್ತಿ ಎಷ್ಟು? ಯಾವೆಲ್ಲ ಕಾರುಗಳಿವೆ? ಇಲ್ಲಿದೆ ವಿವರ

ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಇದನ್ನು ನೋಡಿದ ಅನೇಕರು ಬೇರೆ ಬೇರೆ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರಿಗೆ ಇದು ಸಂಪೂರ್ಣ ನಾಟಕ ಎನಿಸಿದೆ. ‘ಈ ರೀತಿ ಮೊದಲೇ ಪ್ಲ್ಯಾನ್ ಮಾಡಿಕೊಂಡು ಕಾರ್ಯರೂಪಕ್ಕೆ ತರಲಾಗಿದೆ’ ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ. ಇದು ಗಿಮಿಕ್ ಎಂದು ಕೂಡ ಜನರು ಹೇಳುತ್ತಿದ್ದಾರೆ.

ಇನ್ನೂ ಕೆಲವು ನೆಟ್ಟಿಗರು ವಿಜಯ್ ಅಭಿಮಾನಿಯ ಈ ಕೆಲಸವನ್ನು ಟೀಕಿಸಿದ್ದಾರೆ. ‘ಇದೊಂಥ ಹುಚ್ಚಾಟ. ನಟ, ರಾಜಕಾರಣಿ ವಿಜಯ್ ಅವರನ್ನು ನೋಡಲು ಮರದಿಂದ ಜಿಗಿಯಲಾಗಿದೆ. ವಿಜಯ್ ಅಭಿಮಾನಿಗಳಿಗೆ ಬುದ್ಧಿ ಇದೆಯೇ? ಇಂಥ ಮೂರ್ಖತನವನ್ನು ನಾನು ದ್ವೇಷಿಸುತ್ತೇನೆ’ ಎಂಬ ಕಮೆಂಟ್ ಕೂಡ ಬಂದಿದೆ.

ಇದನ್ನೂ ಓದಿ: ‘ಸಿನಿಮಾದಲ್ಲಿ ಮುಸ್ಲಿಮರನ್ನು ಉಗ್ರರನ್ನಾಗಿ ತೋರಿಸಿದ ನಿಮಗೆ ಈಗ ನಮ್ಮ ವೋಟ್ ಬೇಕೇ?’; ದಳಪತಿ ವಿಜಯ್​ಗೆ ಮುಸ್ಲಿಮರ ಪ್ರಶ್ನೆ

ಸಿನಿಮಾ ವಿಚಾರಕ್ಕೆ ಬರುವುದಾದರೆ, ವಿಜಯ್ ನಟನೆಯ ಕೊನೇ ಸಿನಿಮಾ ‘ಜನ ನಾಯಗನ್’ ಮೇಲೆ ಅಭಿಮಾನಿಗಳು ನಿರೀಕ್ಷೆ ಹೊಂದಿದ್ದಾರೆ. ಈ ಸಿನಿಮಾಗೆ ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ಬಂಡವಾಳ ಹೂಡುತ್ತಿದೆ. ಎಚ್. ವಿನೋದ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ವಿಜಯ್ ಜೊತೆ ಪೂಜಾ ಹೆಗ್ಡೆ, ಬಾಬಿ ಡಿಯೋಲ್ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:11 am, Sun, 27 April 25

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ