AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ ನೋಡಲು ಮರದಿಂದ ಜಿಗಿದ ಹುಚ್ಚು ಅಭಿಮಾನಿ; ವಿಡಿಯೋ ವೈರಲ್

ದಳಪತಿ ವಿಜಯ್ ಅವರನ್ನು ಭೇಟಿಯಾಗಬೇಕು ಎಂಬ ಆಸೆಯಿಂದ ಹುಚ್ಚು ಅಭಿಮಾನಿಯೊಬ್ಬ ಈ ರೀತಿ ಮಾಡಿದ್ದಾನೆ. ವಿಜಯ್ ಅವರು ತಮ್ಮ ರಾಜಕೀಯ ಪಕ್ಷದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾಗ ಅಭಿಮಾನಿಗಳು ಅತಿರೇಕದ ವರ್ತನೆ ತೋರಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಕಮೆಂಟ್ ಮೂಲಕ ಟೀಕೆ ವ್ಯಕ್ತಪಡಿಸುತ್ತಿದ್ದಾರೆ.

ದಳಪತಿ ವಿಜಯ್ ನೋಡಲು ಮರದಿಂದ ಜಿಗಿದ ಹುಚ್ಚು ಅಭಿಮಾನಿ; ವಿಡಿಯೋ ವೈರಲ್
Thalapathy Vijay
ಮದನ್​ ಕುಮಾರ್​
|

Updated on:Apr 27, 2025 | 7:12 AM

Share

ಕಾಲಿವುಡ್ ನಟ ದಳಪತಿ ವಿಜಯ್ (Thalapathy Vijay) ಅವರು ಈಗ ಸಿನಿಮಾಗಿಂತಲೂ ರಾಜಕೀಯದ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ. ಈಗಾಗಲೇ ಅವರು ಪ್ರಚಾರದಲ್ಲಿ ಭಾಗಿಯಾಗುತ್ತಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇರುವುದರಿಂದ ಹೋದಲ್ಲೆಲ್ಲ ಜನರು ಸೇರುತ್ತಿದ್ದಾರೆ. ಇನ್ನು, ಅವರನ್ನು ಹತ್ತಿರದಿಂದ ನೋಡಬೇಕು ಎಂಬ ಆಸೆ ಇರುವ ಹುಚ್ಚು ಅಭಿಮಾನಿಗಳು (Thalapathy Vijay Fans) ಪ್ರಾಣವನ್ನೇ ಪಣಕ್ಕಿಟ್ಟು ಸಾಹಸ ಮಾಡುತ್ತಿದ್ದಾರೆ. ಅದಕ್ಕೆ ಇಲ್ಲೊಂದು ಲೇಟೆಸ್ಟ್ ಉದಾಹರಣೆ ಇದೆ. ವಿಜಯ್ ಅವರನ್ನು ನೋಡಲು ಅಭಿಮಾನಿಯೊಬ್ಬ ಮರದಿಂದ ಜಿಗಿದಿದ್ದಾನೆ!

ದಳಪತಿ ವಿಜಯ್ ಅವರು ಶನಿವಾರ (ಏಪ್ರಿಲ್ 26) ಕೊಯಮತ್ತೂರಿನಲ್ಲಿ ತಮ್ಮ ಪಕ್ಷದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ವ್ಯಾನ್​ ಮೇಲೆ ನಿಂತು ಅವರು ಜನರತ್ತ ಕೈ ಬೀಸುತ್ತಿದ್ದರು. ಆ ಸಂದರ್ಭದಲ್ಲಿ ಅಭಿಮಾನಿಯೊಬ್ಬ ಮರದಿಂದ ಜಿಗಿದು ವಾನ್​ ಏರಿದ್ದಾನೆ. ಆತನ ವರ್ತನೆಯಿಂದ ವಿಜಯ್ ಅವರಿಗೆ ಒಂದು ಕ್ಷಣ ಶಾಕ್ ಆಯಿತು. ಬಳಿಕ ಪಕ್ಷದ ಸ್ಕಾರ್ಫ್ ನೀಡಿ, ಆತನನ್ನು ಸಮಾಧಾನ ಮಾಡಿ ಕಳಿಸಲಾಯಿತು.

ಇದನ್ನೂ ಓದಿ
Image
ಇಫ್ತಾರ್ ಕೂಟದಲ್ಲಿ ಭಾಗಿ ಆಗಿ ಪ್ರಾರ್ಥನೆ ಮಾಡಿದ ದಳಪತಿ ವಿಜಯ್
Image
ದಳಪತಿ ವಿಜಯ್ ಕೊನೆಯ ಚಿತ್ರಕ್ಕೆ ‘ಜನ ನಾಯಗನ್’ ಶೀರ್ಷಿಕೆ; ರಾಜಕೀಯದ ಕಥೆ  
Image
‘ದಳಪತಿ ವಿಜಯ್ ಅವರು ಡಾರ್ಲಿಂಗ್’; ಮನು ಭಾಕರ್ ಪ್ರೀತಿಯ ನುಡಿಗಳು
Image
ದಳಪತಿ ವಿಜಯ್ ಒಟ್ಟೂ ಆಸ್ತಿ ಎಷ್ಟು? ಯಾವೆಲ್ಲ ಕಾರುಗಳಿವೆ? ಇಲ್ಲಿದೆ ವಿವರ

ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಇದನ್ನು ನೋಡಿದ ಅನೇಕರು ಬೇರೆ ಬೇರೆ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರಿಗೆ ಇದು ಸಂಪೂರ್ಣ ನಾಟಕ ಎನಿಸಿದೆ. ‘ಈ ರೀತಿ ಮೊದಲೇ ಪ್ಲ್ಯಾನ್ ಮಾಡಿಕೊಂಡು ಕಾರ್ಯರೂಪಕ್ಕೆ ತರಲಾಗಿದೆ’ ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ. ಇದು ಗಿಮಿಕ್ ಎಂದು ಕೂಡ ಜನರು ಹೇಳುತ್ತಿದ್ದಾರೆ.

ಇನ್ನೂ ಕೆಲವು ನೆಟ್ಟಿಗರು ವಿಜಯ್ ಅಭಿಮಾನಿಯ ಈ ಕೆಲಸವನ್ನು ಟೀಕಿಸಿದ್ದಾರೆ. ‘ಇದೊಂಥ ಹುಚ್ಚಾಟ. ನಟ, ರಾಜಕಾರಣಿ ವಿಜಯ್ ಅವರನ್ನು ನೋಡಲು ಮರದಿಂದ ಜಿಗಿಯಲಾಗಿದೆ. ವಿಜಯ್ ಅಭಿಮಾನಿಗಳಿಗೆ ಬುದ್ಧಿ ಇದೆಯೇ? ಇಂಥ ಮೂರ್ಖತನವನ್ನು ನಾನು ದ್ವೇಷಿಸುತ್ತೇನೆ’ ಎಂಬ ಕಮೆಂಟ್ ಕೂಡ ಬಂದಿದೆ.

ಇದನ್ನೂ ಓದಿ: ‘ಸಿನಿಮಾದಲ್ಲಿ ಮುಸ್ಲಿಮರನ್ನು ಉಗ್ರರನ್ನಾಗಿ ತೋರಿಸಿದ ನಿಮಗೆ ಈಗ ನಮ್ಮ ವೋಟ್ ಬೇಕೇ?’; ದಳಪತಿ ವಿಜಯ್​ಗೆ ಮುಸ್ಲಿಮರ ಪ್ರಶ್ನೆ

ಸಿನಿಮಾ ವಿಚಾರಕ್ಕೆ ಬರುವುದಾದರೆ, ವಿಜಯ್ ನಟನೆಯ ಕೊನೇ ಸಿನಿಮಾ ‘ಜನ ನಾಯಗನ್’ ಮೇಲೆ ಅಭಿಮಾನಿಗಳು ನಿರೀಕ್ಷೆ ಹೊಂದಿದ್ದಾರೆ. ಈ ಸಿನಿಮಾಗೆ ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ಬಂಡವಾಳ ಹೂಡುತ್ತಿದೆ. ಎಚ್. ವಿನೋದ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ವಿಜಯ್ ಜೊತೆ ಪೂಜಾ ಹೆಗ್ಡೆ, ಬಾಬಿ ಡಿಯೋಲ್ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:11 am, Sun, 27 April 25

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು