AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lokesh Kanagaraj: ‘ಲಿಯೋ’ ನಿರ್ದೇಶಕನಿಗೆ ದಳಪತಿ ವಿಜಯ್​ ಅಭಿಮಾನಿಗಳಿಂದ ಬಹಿರಂಗ ಪತ್ರ; ಏನಿದೆ ಇದರಲ್ಲಿ?

Lokesh Kanagaraj | Leo Movie: ಕೇರಳದಲ್ಲಿನ ಅಭಿಮಾನಿಗಳು ಈ ಪತ್ರ ಬರೆದಿ​ದ್ದಾರೆ. ಆ ಮೂಲಕ ಲೋಕೇಶ್​ ಕನಗರಾಜ್​ ಅವರ ಮುಂದೆ ಒಂದು ವಿಶೇಷ ಮನವಿ ಇಡಲಾಗಿದೆ.

Lokesh Kanagaraj: ‘ಲಿಯೋ’ ನಿರ್ದೇಶಕನಿಗೆ ದಳಪತಿ ವಿಜಯ್​ ಅಭಿಮಾನಿಗಳಿಂದ ಬಹಿರಂಗ ಪತ್ರ; ಏನಿದೆ ಇದರಲ್ಲಿ?
ದಳಪತಿ ವಿಜಯ್, ಲೋಕೇಶ್ ಕನಗರಾಜ್
ಮದನ್​ ಕುಮಾರ್​
|

Updated on: Apr 30, 2023 | 1:00 PM

Share

ನಟ ದಳಪತಿ ವಿಜಯ್​ (Thalapathy Vijay) ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಅವರ ಪ್ರತಿ ಸಿನಿಮಾ ರೀಲೀಸ್​ ಆಗುವಾಗಲೂ ಕ್ರೇಜ್​ ಜೋರಾಗಿರುತ್ತದೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ದಳಪತಿ ವಿಜಯ್​ ಒಪ್ಪಿಕೊಳ್ಳುತ್ತಿದ್ದಾರೆ. ಸದ್ಯ ಅವರು ಬಹುನಿರೀಕ್ಷಿತ ‘ಲಿಯೋ’ ಸಿನಿಮಾದ (Leo Movie) ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾಗೆ ಬಹುಕೋಟಿ ರೂಪಾಯಿ ಬಂಡವಾಳ ಹೂಡಲಾಗುತ್ತಿದೆ. ಅನೇಕ ಸ್ಟಾರ್​ ಕಲಾವಿದರು ಇದರಲ್ಲಿ ನಟಿಸುತ್ತಿದ್ದಾರೆ. ಖ್ಯಾತ ನಿರ್ದೇಶಕ ಲೋಕೇಶ್​ ಕನಗರಾಜ್​ (Lokesh Kanagaraj) ಅವರು ‘ಲಿಯೋ’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈ ಚಿತ್ರದ ಬಗ್ಗೆ ಜನರಿಗೆ ಎಷ್ಟು ಕ್ರೇಜ್​ ಇದೆ ಎಂಬುದಕ್ಕೆ ಇಲ್ಲೊಂದು ಘಟನೆ ಸಾಕ್ಷಿ ಆಗಿದೆ. ಕೇರಳದಲ್ಲಿ ಇರುವ ದಳಪತಿ ವಿಜಯ್​ ಅಭಿಮಾನಿಗಳು ನಿರ್ದೇಶಕ ಲೋಕೇಶ್​ ಕನಗರಾಜ್​ಗೆ ಬಹಿರಂಗ ಪತ್ರ ಬರೆದಿದ್ದಾರೆ. ಆ ಮೂಲಕ ಒಂದು ವಿಶೇಷ ಮನವಿ ಮಾಡಿಕೊಂಡಿದ್ದಾರೆ.

ಕೇರಳದಲ್ಲಿ ದಳಪತಿ ವಿಜಯ್​ ಅವರನ್ನು ಇಷ್ಟಪಡುವ ಲಕ್ಷಾಂತರ ಅಭಿಮಾನಿಗಳು ಇದ್ದಾರೆ. ತಮ್ಮ ನೆಚ್ಚಿನ ನಟನನ್ನು ಹತ್ತಿರದಿಂದ ನೋಡಬೇಕು ಎಂಬುದು ಅಲ್ಲಿನ ಫ್ಯಾನ್ಸ್​ ಆಸೆ. ಹಾಗಾಗಿ ದಳಪತಿ ವಿಜಯ್​ ಅವರು ಕೇರಳಕ್ಕೆ ಬರಬೇಕು ಎಂದು ಅವರೆಲ್ಲರೂ ಬಯಸುತ್ತಿದ್ದಾರೆ. ಅದಕ್ಕಾಗಿ ‘ಲಿಯೋ’ ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ ಕೇರಳದಲ್ಲೇ ನಡೆಯಲಿ ಎಂದು ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ. ಬಹಿರಂಗ ಪತ್ರದಲ್ಲಿ ಈ ವಿಚಾರ ಪ್ರಸ್ತಾಪ ಆಗಿದೆ.

ಇದನ್ನೂ ಓದಿ
Image
Varisu Trailer: ಧೂಳೆಬ್ಬಿಸುತ್ತಿದೆ ‘ವಾರಿಸು’ ಸಿನಿಮಾ ಟ್ರೇಲರ್​; ಫ್ಯಾಮಿಲಿ ಪ್ರೇಕ್ಷಕರ ಮೇಲೆ ಕಣ್ಣಿಟ್ಟ ದಳಪತಿ ವಿಜಯ್​
Image
Katrina Kaif: ‘ದಳಪತಿ’ ವಿಜಯ್​ ಚಿತ್ರದ ಹಾಡಿಗೆ ಶಾಲಾ ಮಕ್ಕಳ ಜತೆ ಕತ್ರಿನಾ ಕೈಫ್ ಡ್ಯಾನ್ಸ್​; ಇಲ್ಲಿದೆ ವಿಡಿಯೋ
Image
‘ಕೆಜಿಎಫ್​ 2’ ಎದುರು ‘ಬೀಸ್ಟ್​’ ಸೋತರೂ ಪಾರ್ಟಿ ಮಾಡಿದ ದಳಪತಿ ವಿಜಯ್; ನಿರ್ದೇಶಕ ಹೇಳಿದ್ದೇನು?
Image
‘ಕೆಜಿಎಫ್​ 2’ ಎದುರು ‘ಬೀಸ್ಟ್​’ಗೆ ಹಿನ್ನಡೆ; ಚಿತ್ರರಂಗಕ್ಕೆ ದಳಪತಿ ವಿಜಯ್​ ಮಗನ ಎಂಟ್ರಿ ಬಗ್ಗೆ ಟಾಕ್​ ಶುರು

ಇನ್​ಸ್ಟಾಗ್ರಾಮ್​ನಲ್ಲಿ ಸುನಾಮಿ ಎಬ್ಬಿಸಿದ ದಳಪತಿ ವಿಜಯ್​; ಒಂದೇ ದಿನದಲ್ಲಿ ಮೋಡಿ ಮಾಡಿದ ನಟ

‘ನಾವೆಲ್ಲರೂ ಲಿಯೋ ಸಿನಿಮಾಗಾಗಿ ಕಾಯುತ್ತಿದ್ದೇವೆ. ಕೇರಳದಲ್ಲಿ ನೀವು ಈ ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ ಮಾಡಿದರೆ ಚೆನ್ನಾಗಿರುತ್ತದೆ. ವಿಜಯ್​ ಅವರು ತುಂಬ ಬ್ಯುಸಿ ಆಗಿರುವ ಕಲಾವಿದ ಎಂಬುದು ನಮಗೆ ತಿಳಿದಿದೆ. ಆದರೂ ಕೂಡ ಅವರು ಕೇರಳಕ್ಕೆ ಬಂದು ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಭಾಗವಹಿಸಿದರೆ ನಮಗೆಲ್ಲ ಸ್ಮರಣೀಯ ದಿನವಾಗಲಿದೆ’ ಎಂದು ಪತ್ರದಲ್ಲಿ ತಿಳಿಸಲಾಗಿದೆ.

Trisha: ದಳಪತಿ ವಿಜಯ್​ ಜತೆಗಿನ ‘ಲಿಯೋ’ ಚಿತ್ರದ ಸೆಟ್​ನಿಂದ ತ್ರಿಷಾ ವಾಪಸ್​ ಬಂದಿದ್ದೇಕೆ? ಇಲ್ಲಿದೆ ಅಸಲಿ ವಿಷಯ

‘ನಿಮಗೆ ಈಗಾಗಲೇ ತಿಳಿದಿರುವಂತೆ ಕೇರಳದಲ್ಲಿ ದಳಪತಿ ವಿಜಯ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು ನೇರವಾಗಿ ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಕಾದಿದ್ದಾರೆ. ನಮ್ಮ ಮನವಿಯನ್ನು ಪರಿಗಣಿಸಿ ನೀವು ಕೇರಳದಲ್ಲಿ ಪ್ರೀ-ರಿಲೀಸ್​ ಇವೆಂಟ್​ ಆಯೋಜನೆ ಮಾಡಬೇಕು ಎಂದು ಕೇಳಿಕೊಳ್ಳುತ್ತೇವೆ. ಆ ಕಾರ್ಯಕ್ರಮ ದೊಡ್ಡ ಯಶಸ್ಸು ಕಾಣಲಿದೆ ಅಂತ ನಾವು ನಿಮಗೆ ಭರವಸೆ ನೀಡುತ್ತೇವೆ. ವೇದಿಕೆ ಮೇಲೆ ದಳಪತಿ ವಿಜಯ್​ ಅವರ ಮೋಡಿಯನ್ನು ನೋಡಲು ಕೇರಳದ ಅಭಿಮಾನಿಗಳಿಗೆ ಒಳ್ಳೆಯ ಅವಕಾಶ ಸಿಕ್ಕಂತೆ ಆಗುತ್ತೆ’ ಎಂದು ಪತ್ರದಲ್ಲಿ ಬರೆಯಲಾಗಿದೆ.

‘ಬಿಡುವು ಮಾಡಿಕೊಂಡು ಈ ಪತ್ರ ಓದಿದ್ದಕ್ಕೆ ಧನ್ಯವಾದಗಳು. ನಿಮ್ಮಿಂದ ಉತ್ತರ ನಿರೀಕ್ಷಿಸಿದ್ದೇವೆ’ ಎಂದು ಅಭಿಮಾನಿಗಳು ಪತ್ರವನ್ನು ಪೂರ್ಣಗೊಳಿಸಿದ್ದಾರೆ. ಇದಕ್ಕೆ ‘ಲಿಯೋ’ ಚಿತ್ರತಂಡದ ಕಡೆಯಿಂದ ಯಾವ ರೀತಿಯ ಪ್ರತಿಕ್ರಿಯೆ ಬರಲಿದೆ ಎಂಬುದನ್ನು ಕಾದು ನೋಡಬೇಕು. ಅಕ್ಟೋಬರ್​ 19ರಂದು ಈ ಸಿನಿಮಾ ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!