AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೀಸ್ಟ್​’ ಚೆನ್ನಾಗಿಲ್ಲ ಎಂಬ ಹತಾಶೆಯಿಂದ​ ಥಿಯೇಟರ್​ ಪರದೆಗೆ ಬೆಂಕಿ ಹಚ್ಚಿದ ವಿಜಯ್​ ಫ್ಯಾನ್ಸ್​? ವಿಡಿಯೋ ವೈರಲ್​

Beast Movie: ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗುತ್ತಿದೆ. ಅಭಿಮಾನಿಗಳು ಬೆಂಕಿ ಹಚ್ಚಿದ್ದಾರೆ ಎಂಬ ಕ್ಯಾಪ್ಷನ್​ನೊಂದಿಗೆ ಇದನ್ನು ಪೋಸ್ಟ್​ ಮಾಡಲಾಗಿದೆ.

‘ಬೀಸ್ಟ್​’ ಚೆನ್ನಾಗಿಲ್ಲ ಎಂಬ ಹತಾಶೆಯಿಂದ​ ಥಿಯೇಟರ್​ ಪರದೆಗೆ ಬೆಂಕಿ ಹಚ್ಚಿದ ವಿಜಯ್​ ಫ್ಯಾನ್ಸ್​? ವಿಡಿಯೋ ವೈರಲ್​
‘ಬೀಸ್ಟ್​’ ಸಿನಿಮಾ ಪ್ರದರ್ಶನದ ವೇಳೆ ಥಿಯೇಟರ್​ ಪರದೆಗೆ ಬೆಂಕಿ
TV9 Web
| Edited By: |

Updated on: Apr 13, 2022 | 1:57 PM

Share

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದ್ದ ‘ಬೀಸ್ಟ್​’ ಸಿನಿಮಾ (Beast Movie) ಇಂದು (ಏ.13) ಬಿಡುಗಡೆ ಆಗಿದೆ. ದೇಶದ ಹಲವು ನಗರಗಳಲ್ಲಿ ಈ ಚಿತ್ರ ತೆರೆಕಂಡಿದೆ. ತಮಿಳುನಾಡಿನಲ್ಲಿ ದಳಪತಿ ವಿಜಯ್​ (Thalapathy Vijay) ಅಭಿಮಾನಿಗಳು ಈ ಸಿನಿಮಾವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಆದರೆ ‘ಬೀಸ್ಟ್’ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಹತಾಶರಾಗಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ನೆಗೆಟಿವ್ ವಿಮರ್ಶೆ ತುಂಬಿ ತುಳುಕುತ್ತಿದೆ. #BeastDisaster ಎಂಬ ಹ್ಯಾಶ್​ ಟ್ಯಾಗ್​ ಬಳಸಿ ಜನರು ಪೋಸ್ಟ್​ ಮಾಡುತ್ತಿದ್ದಾರೆ. ಈ ನಡುವೆ ಸಿನಿಮಾ ತುಂಬ ಬೋರಿಂಗ್​ ಆಗಿದೆ ಎಂದು ಹತಾಶರಾದ ಕೆಲವು ಅಭಿಮಾನಿಗಳು (Thalapathy Vijay Fans) ಚಿತ್ರಮಂದಿರದ ಪರದೆಗೆ ಬೆಂಕಿ ಇಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತಂತೆ ಸೋಶಿಯಲ್​ ಮೀಡಿಯಾದಲ್ಲಿ ಒಂದು ವಿಡಿಯೋ ವೈರಲ್​ ಆಗುತ್ತಿದೆ. ದಳಪತಿ ವಿಜಯ್​ ಅಭಿಮಾನಿಗಳ ಕೃತ್ಯಕ್ಕೆ ಅನೇಕರು ಖಂಡನೆ ವ್ಯಕ್ತಪಡಿಸುತ್ತಿದ್ದಾರೆ. ಈ ಘಟನೆ ಕುರಿತಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಶಾರ್ಟ್​ ಸರ್ಕ್ಯೂಟ್​ ಕಾರಣದಿಂದ ಬೆಂಕಿ ತಗುಲಿರಬಹುದಾ ಅಥವಾ ಪ್ರೇಕ್ಷಕರೇ ಬೆಂಕಿ ಹಚ್ಚಿದ್ದಾರಾ ಎಂಬ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. ಆದರೆ ಅಭಿಮಾನಿಗಳು ಬೆಂಕಿ ಹಚ್ಚಿದ್ದಾರೆ ಎಂಬ ಕ್ಯಾಪ್ಷನ್​ನೊಂದಿಗೆ ಈ ವಿಡಿಯೋ ವೈರಲ್​ ಆಗುತ್ತಿದೆ.

ವಿಜಯ್​ ನಟನೆಯ ‘ಬೀಸ್ಟ್’ ಸಿನಿಮಾಗೆ ನೆಲ್ಸನ್​ ದಿಲೀಪ್​ ಕುಮಾರ್​ ನಿರ್ದೇಶನ ಮಾಡಿದ್ದಾರೆ. ಆ್ಯಕ್ಷನ್​ ಮತ್ತು ಕಾಮಿಡಿ ಮೂಲಕ ಜನರನ್ನು ರಂಜಿಸಲು ಅವರು ಪ್ರಯತ್ನಿಸಿದ್ದಾರೆ. ಫಸ್ಟ್​ ಡೇ ಫಸ್ಟ್​ ಶೋ ನೋಡಿದ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ. ನಾಯಕಿ ಪೂಜಾ ಹೆಗ್ಡೆ ಪಾತ್ರಕ್ಕೆ ಮಹತ್ವ ಇಲ್ಲ, ವಿಲನ್​ ಪಾತ್ರಗಳು ಪ್ರಬಲವಾಗಿಲ್ಲ, ಕಾಮಿಡಿ ದೃಶ್ಯಗಳು ಇದ್ದರೂ ನಗು ಬರಲ್ಲ, ದೃಶ್ಯಗಳು ರಿಪೀಟ್​ ಎನಿಸುತ್ತವೆ, ಕಥೆ ನೀರಸವಾಗಿದೆ, ಲಾಜಿಕ್​ ಇಲ್ಲ.. ಹೀಗೆ ಹತ್ತಾರು ನೆಗೆಟಿವ್​ ಪ್ರತಿಕ್ರಿಯೆ ಸಿಕ್ಕಿರುವುದು ‘ಬೀಸ್ಟ್​’ ಚಿತ್ರಕ್ಕೆ ಹಿನ್ನಡೆ ಆಗಿದೆ.

ಕಾಲಿವುಡ್​ನಲ್ಲಿ ಅಜಿತ್​ ಫ್ಯಾನ್ಸ್ ವರ್ಸಸ್​ ವಿಜಯ್​ ಫ್ಯಾನ್ಸ್ ಎಂಬ ವಾತಾವರಣ ಮೊದಲಿನಿಂದಲೂ ಇದೆ. ‘ಬೀಸ್ಟ್​’ ಚೆನ್ನಾಗಿಲ್ಲ ಎಂಬ ಮಾತನ್ನು ಕೇಳಿ ಅಜಿತ್​ ಅಭಿಮಾನಿಗಳು ಖುಷಿ ಆಗಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿರುವ ನೂರಾರು ಮೀಮ್ಸ್​ ಇದ್ದಕ್ಕೆ ಸಾಕ್ಷಿ. ಈಗ ವಿಜಯ್​ ಅಭಿಮಾನಿಗಳು ಚಿತ್ರಮಂದಿರದ ಪರದೆಗೆ ಬೆಂಕಿ ಹಚ್ಚಿದ್ದಾರೆ ಎನ್ನಲಾದ ವಿಡಿಯೋ ಕೂಡ ಅಜಿತ್​ ಅಭಿಮಾನಿಗಳ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹೆಚ್ಚು ವೈರಲ್​ ಆಗುತ್ತಿದೆ. ಘಟನೆ ಕುರಿತು ದಳಪತಿ ವಿಜಯ್​ ಅವರು ಈವರೆಗೂ ಪ್ರತಿಕ್ರಿಯೆ ನೀಡಿಲ್ಲ.

ಚಿತ್ರಮಂದಿರದ ಪರದೆಗೆ ಬೆಂಕಿ ಬಿದ್ದಿರುವುದರಿಂದ ಸಹಜವಾಗಿಯೇ ಥಿಯೇಟರ್​ ಮಾಲಿಕರಿಗೆ ನಷ್ಟ ಉಂಟಾಗಿದೆ. ಯಾವುದೇ ಪ್ರಾಣ ಹಾನಿ ಆಗಿರುವ ಬಗ್ಗೆ ವರದಿ ಆಗಿಲ್ಲ. ತನಿಖೆ ಬಳಿಕ ಸ್ಪಷ್ಟ ಚಿತ್ರಣ ಸಿಗಲಿದೆ.

ಇದನ್ನೂ ಓದಿ:

Beast Twitter Review: ‘ಬೀಸ್ಟ್’​ ನೋಡಿ ಡಿಸಾಸ್ಟರ್​ ಎಂದ ಪ್ರೇಕ್ಷಕರು; ದಳಪತಿ ವಿಜಯ್​ ಸಿನಿಮಾ ಹೇಗಿದೆ?

ದಳಪತಿ ವಿಜಯ್ ಚಿತ್ರಕ್ಕೆ ಹಿನ್ನಡೆ; ಕಲೆಕ್ಷನ್​ ವಿಚಾರದಲ್ಲಿ ‘ಕೆಜಿಎಫ್​ 2’ ಹಿಂದಿಕ್ಕಲು ಬೀಸ್ಟ್​’ಗೆ ಅಸಾಧ್ಯ?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ