AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚಾರಕ್ಕಾಗಿ ಕಳ್ಳ ಹಾದಿ ಹಿಡಿದ ‘ವಲಿಮೈ’ ತಂಡ? ಸೋಶಿಯಲ್ ಮೀಡಿಯಾದಲ್ಲಿ ಜೋರಾಯ್ತು ಚರ್ಚೆ

‘ವಲಿಮೈ’ ಚಿತ್ರದ ಟ್ರೇಲರ್​ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಜಿತ್​ ಮಾಡಿರುವ ಬೈಕ್​ ಸ್ಟಂಟ್ಸ್ ಮೈ ನವಿರೇಳಿಸುವಂತಿದೆ. ಬೈಕ್ ಸ್ಟಂಟ್​ಗಳ ಪೈಕಿ ಅನೇಕ ಸ್ಟಂಟ್​​ಗಳನ್ನು ಡೂಪ್​ ಬಳಸದೇ ಅಜಿತ್​ ಅವರೇ ಮಾಡಿದ್ದಾರೆ.

ಪ್ರಚಾರಕ್ಕಾಗಿ ಕಳ್ಳ ಹಾದಿ ಹಿಡಿದ ‘ವಲಿಮೈ’ ತಂಡ? ಸೋಶಿಯಲ್ ಮೀಡಿಯಾದಲ್ಲಿ ಜೋರಾಯ್ತು ಚರ್ಚೆ
ವಲಿಮೈ
TV9 Web
| Edited By: |

Updated on: Feb 15, 2022 | 6:04 AM

Share

ಅಜಿತ್​ ಕುಮಾರ್​ (Ajith Kumar) ನಟನೆಯ ‘ವಲಿಮೈ’ ಚಿತ್ರ (Valimai Movie) ರಿಲೀಸ್​ಗೆ ರೆಡಿ ಆಗಿದೆ. ಫೆಬ್ರವರಿ 24ರಂದು ವಿಶ್ವಾದ್ಯಂತ ಈ ಸಿನಿಮಾ ತೆರೆಗೆ ಬರುತ್ತಿದೆ. ಅಜಿತ್ ಈ ಚಿತ್ರದಲ್ಲಿ ಪೊಲೀಸ್​ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ರಿಲೀಸ್​ ಆಗಿರುವ ಚಿತ್ರದ ಟ್ರೇಲರ್ ದೊಡ್ಡ ಮಟ್ಟದಲ್ಲಿ ಹೈಪ್​ ಸೃಷ್ಟಿ ಮಾಡಿದೆ. ಚಿತ್ರದ ಟ್ರೇಲರ್​ ನೋಡಿದ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ. ಈಗ ಸಿನಿಮಾ ತಂಡ ಗಂಭೀರ ಆರೋಪ ಒಂದಕ್ಕೆ ತುತ್ತಾಗಿದೆ. ಪ್ರಚಾರಕ್ಕಾಗಿ ಈ ತಂಡ ಕಳ್ಳ ಹಾದಿ ಹಿಡಿದಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಈ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಸ್ಪಷ್ಟನೆ ಬರಬೇಕಿದೆ.  

‘ವಲಿಮೈ’ ಚಿತ್ರದ ಟ್ರೇಲರ್​ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಜಿತ್​ ಮಾಡಿರುವ ಬೈಕ್​ ಸ್ಟಂಟ್ಸ್ ಮೈ ನವಿರೇಳಿಸುವಂತಿದೆ. ಬೈಕ್ ಸ್ಟಂಟ್​ಗಳ ಪೈಕಿ ಅನೇಕ ಸ್ಟಂಟ್​​ಗಳನ್ನು ಡೂಪ್​ ಬಳಸದೇ ಅಜಿತ್​ ಅವರೇ ಮಾಡಿದ್ದಾರೆ. ಇದಕ್ಕೆ ಅವರು ಸಾಕಷ್ಟು ಶ್ರಮ ಹಾಕಿದ್ದಾರೆ. ಇದು ಎಲ್ಲರ ಗಮನ ಸೆಳೆಯುತ್ತಿದೆ. ಇತ್ತೀಚೆಗೆ ಚಿತ್ರತಂಡ ಪ್ರೋಮೋ ವಿಡಿಯೋ ಒಂದನ್ನು ಹಂಚಿಕೊಂಡಿತ್ತು. ಈ ವಿಡಿಯೋ ಸಾಕಷ್ಟು ಗಮನ ಸೆಳೆದಿತ್ತು. ಈ ವಿಡಿಯೋಗೆ ಜನ ಮನ್ನಣೆ ಸಿಕ್ಕಿತ್ತು. ಇದುವೇ ಈಗ ಚಿತ್ರತಂಡಕ್ಕೆ ಸಮಸ್ಯೆ ತಂದೊಡ್ಡಿದೆ.

ಇತ್ತೀಚೆಗೆ ರಿಲೀಸ್​ ಆದ ಗ್ಲಿಂಪ್ಸ್​ ವಿಡಿಯೋ ಒಂದೇ ಗಂಟೆಯಲ್ಲಿ 30 ಸಾವಿರ ಲೈಕ್ಸ್​ ಹಾಗೂ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ಬಾಟ್​​ಗಳನ್ನು ಬಳಸಿ ಚಿತ್ರತಂಡ ಈ ರೀತಿಯ ಲೈಕ್ಸ್​ ಪಡೆದುಕೊಂಡಿದೆ ಎಂದು ‘ದಳಪತಿ’ ವಿಜಯ್​ ಅಭಿಮಾನಿಗಳು ಗಂಭೀರ ಆರೋಪವನ್ನು ಮಾಡಿದ್ದಾರೆ! ಈ ವಿಚಾರ ಅಜಿತ್ ಅಭಿಮಾನಿಗಳ ಸಿಟ್ಟನ್ನು ಕೆರಳಿಸಿದೆ. ಅವರು ವಿಜಯ್​ ಅಭಿಮಾನಿಗಳಿಗೆ ತಿರುಗೇಟು ನೀಡಿದ್ದಾರೆ.

ಅಜಿತ್​ ಹಾಗೂ ವಿಜಯ್ ಅಭಿಮಾನಿಗಳ ನಡುವೆ ಕಿತ್ತಾಟ ನಡೆಯುತ್ತಿರುವುದು ಇಂದು ನಿನ್ನೆಯ ವಿಚಾರವಲ್ಲ ಈ ಮೊದಲೂ ಕೂಡ ಅನೇಕ ಬಾರಿ ಈ ಅಭಿಮಾನಿಗಳು ಕಿತ್ತಾಡಿಕೊಂಡಿದ್ದಿದೆ. ಈಗ ‘ವಲಿಮೈ’ ಚಿತ್ರದ ವಿಚಾರ ಇಟ್ಟುಕೊಂಡು ಜಗಳ ಮಾಡಿಕೊಂಡಿದ್ದಾರೆ. ValimaiPaidLikesExposed ಎನ್ನುವ ಹ್ಯಾಶ್​ಟ್ಯಾಗ್​ ಟ್ರೆಂಡ್ ಆಗಿದೆ.

ಈ ಚಿತ್ರಕ್ಕೆ ಖ್ಯಾತ ನಿರ್ಮಾಪಕ ಬೋನಿ ಕಪೂರ್ ಅವರು ಬಂಡವಾಳ ಹೂಡಿದ್ದಾರೆ. ​ಎಚ್​. ವಿನೋದ್​ ನಿರ್ದೇಶನ ಮಾಡಿದ್ದು, ಆ್ಯಕ್ಷನ್​ ಅವತಾರದಲ್ಲಿ ಅಜಿತ್​ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚೆಗೆ ರಿಲೀಸ್​ ದಿನಾಂಕದ ಬಗ್ಗೆ ಟ್ವೀಟ್​ ಮಾಡಿದ್ದ ಬೋನಿ ಕಪೂರ್​ ನಿರೀಕ್ಷೆ ಹೆಚ್ಚಿಸಿದ್ದರು. ‘ಪದಗಳಿಗಿಂತಲೂ ಕೆಲಸ ಹೆಚ್ಚು ಮಾತನಾಡುತ್ತದೆ. ಕಾಯುವಿಕೆಗೆ ಈಗ ತೆರೆಬಿದ್ದಿದೆ. ಫೆ.24ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಫೀಲ್​ ದ ಪವರ್​’ ಎಂದು ಬೋನಿ ಕಪೂರ್​ ಟ್ವೀಟ್​ ಮಾಡಿದ್ದರು.

ಇದನ್ನೂ ಓದಿ: Valimai: ಬೈಕ್​ ಸ್ಟಂಟ್​ ಮಾಡುತ್ತ ಫ್ಯಾನ್ಸ್​ ಎದೆಬಡಿತ ಹೆಚ್ಚಿಸಿದ ಅಜಿತ್​; ಹೇಗಿದೆ ಗೊತ್ತಾ ‘ವಲಿಮೈ’ ಝಲಕ್​​?

ರಿಲೀಸ್ ಡೇಟ್​​ ಘೋಷಿಸಿಕೊಂಡ ಅಜಿತ್​ ‘ವಲಿಮೈ’ ಚಿತ್ರ; ಕನ್ನಡ ಸಿನಿಮಾಗಳು ನೀಡಲಿವೆ ಪೈಪೋಟಿ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ