AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಸ್ ಚಾಂಪಿಯನ್ ಪ್ರಜ್ಞಾನಂದ ಜೊತೆ ಚೆಸ್ ಆಡಿ 50 ಲಕ್ಷ ರೂ. ಕೊಟ್ಟ ವಿಜಯ್

ನಟ, ತಮಿಳುನಾಡು ಸಿಎಂ ದಳಪತಿ ವಿಜಯ್ ಅವರು ಭಾರತದ ಚೆಸ್ ಮಾಸ್ಟರ್ ಆರ್​. ಪ್ರಜ್ಞಾನಂದ ಅವರನ್ನು ಸನ್ಮಾನಿಸಿ, ನಾರ್ವೆ ಚೆಸ್ 2026 ಚಾಂಪಿಯನ್ ಆದ ಗೌರವಾರ್ಥವಾಗಿ 50 ಲಕ್ಷ ರೂಪಾಯಿ ಬಹುಮಾನ ನೀಡಿದ್ದಾರೆ. ಈ ವೇಳೆ ವಿಜಯ್ ಅವರು ಪ್ರಜ್ಞಾನಂದ ಜೊತೆ ಚೆಸ್ ಆಡಿದ್ದು, ಪ್ರಜ್ಞಾನಂದ ಅವರ ಅನುಭವವನ್ನು ಹಂಚಿಕೊಂಡಿದ್ದಾರೆ. ಇದು ಪ್ರಜ್ಞಾನಂದ ಅವರ ಸಾಧನೆಗೆ ದೊರೆತ ದೊಡ್ಡ ಪ್ರೋತ್ಸಾಹವಾಗಿದೆ.

ಚೆಸ್ ಚಾಂಪಿಯನ್ ಪ್ರಜ್ಞಾನಂದ ಜೊತೆ ಚೆಸ್ ಆಡಿ 50 ಲಕ್ಷ ರೂ. ಕೊಟ್ಟ ವಿಜಯ್
ವಿಜಯ್-ಪ್ರಜ್ಞಾನಂದ
ರಾಜೇಶ್ ದುಗ್ಗುಮನೆ
|

Updated on:Jun 08, 2026 | 2:43 PM

Share

ನಟ, ತಮಿಳುನಾಡು ಸಿಎಂ ದಳಪತಿ ವಿಜಯ್ ಅವರು ಭಾರತದ ಚೆಸ್ ಮಾಸ್ಟರ್ ಆರ್​. ಪ್ರಜ್ಞಾನಂದ ಅವರನ್ನು  (Praggnanandhaa) ಸನ್ಮಾನಿಸಿದ್ದಾರೆ. ಅವರಿಗೆ 50 ಲಕ್ಷ ರೂಪಾಯಿ ಬಹುಮಾನ ಮೊತ್ತವನ್ನು ಕೂಡ ನೀಡಿದ್ದಾರೆ. ನಾರ್ವೆ ಚೆಸ್ 2026 ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ ಬಳಿಕ ಅವರಿಗೆ ಈ ಗೌರವ ಸಿಕ್ಕಿದೆ. ವಿಶೇಷ ಎಂದರೆ ವಿಜಯ್ ಅವರು ಪ್ರಜ್ಞಾನಂದ ಜೊತೆ ಚೆಸ್ ಕೂಡ ಆಡಿದ್ದಾರೆ.

ಸಿಎಂ ವಿಜಯ್ ಅವರನ್ನು ಭೇಟಿ ಮಾಡಿದ ವಿಷಯವನ್ನು ಪ್ರಜ್ಞಾನಂದ ಅವರು ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದಾರೆ. ‘ನನಗೆ ಚೆಸ್ ಬೋರ್ಡ್ ಜೊತೆ ಬರಲು ಹೇಳಲಾಗಿತ್ತು. ನಾನು ಸಿಎಂ ಜೊತೆ ಚೆಸ್ ಆಡಿದೆ. ಅವರು ನನ್ನ ಜೊತೆ ಚೆಸ್ ಆಡುತ್ತಾರೆ ಎಂದು ನಾನು ಭಾವಿಸಿರಲಿಲ್ಲ. 15 ನಿಮಿಷಗಳ ಕಾಲ ಚೆಸ್ ಆಡಿದೆವು. ಗೆದ್ದಿದ್ದು ನಾನೇ. ಅವರು ತುಂಬಾನೇ ಪ್ರೋತ್ಸಾಹದಾಯಕವಾಗಿದ್ದಾರೆ’ ಎಂದಿದ್ದಾರೆ ವಿಜಯ್.

ಇದನ್ನೂ ಓದಿ: ನಾರ್ವೆಯಲ್ಲಿ ಹೊಸ ಇತಿಹಾಸ ಬರೆದ ಆರ್ ಪ್ರಜ್ಞಾನಂದ ತಮಿಳುನಾಡು ಸಿಎಂ ಕಚೇರಿ ಈ ಬಗ್ಗೆ ಟ್ವೀಟ್ ಮಾಡಿದೆ. ‘ತಮಿಳುನಾಡು ಸಿಎಂ ವಿಜಯ್ ಅವರು 50 ಲಕ್ಷ ರೂಪಾಯಿ ಹಣವನ್ನು ಪ್ರಜ್ಞಾನಂದಗೆ ನೀಡಿದ್ದಾರೆ. ನಾರ್ವೆ ಚೆಸ್ 2026 ಅಲ್ಲಿ ಈ ಸಾಧನೆ ಮಾಡಿ ಇತಿಹಾಸ ಬರೆದಿರುವುದರಿಂದ ಈ ಗೌರವ ನೀಡಲಾಗಿದೆ’ ಎಂದು ಬರೆದುಕೊಂಡಿದೆ.

ಕಳೆದ ವಾರ ನಡೆದ ಓಸ್ಲೋದಲ್ಲಿ ನಡೆದ ನಾರ್ವೆ ಚೆಸ್ 2026 ಟೂರ್ನಿಯಲ್ಲಿ ಅಂತಿಮ ಸುತ್ತಿನ ರೋಚಕ ಪಂದ್ಯದಲ್ಲಿ ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಪ್ರಜ್ಞಾನಂದ ಭರ್ಜರಿ ಜಯ ಸಾಧಿಸಿ ಈ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:42 pm, Mon, 8 June 26

Follow Us
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ