AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಸ್ ಚಾಂಪಿಯನ್ ಪ್ರಜ್ಞಾನಂದ ಜೊತೆ ಚೆಸ್ ಆಡಿ 50 ಲಕ್ಷ ರೂ. ಕೊಟ್ಟ ವಿಜಯ್

ನಟ, ತಮಿಳುನಾಡು ಸಿಎಂ ದಳಪತಿ ವಿಜಯ್ ಅವರು ಭಾರತದ ಚೆಸ್ ಮಾಸ್ಟರ್ ಆರ್​. ಪ್ರಜ್ಞಾನಂದ ಅವರನ್ನು ಸನ್ಮಾನಿಸಿ, ನಾರ್ವೆ ಚೆಸ್ 2026 ಚಾಂಪಿಯನ್ ಆದ ಗೌರವಾರ್ಥವಾಗಿ 50 ಲಕ್ಷ ರೂಪಾಯಿ ಬಹುಮಾನ ನೀಡಿದ್ದಾರೆ. ಈ ವೇಳೆ ವಿಜಯ್ ಅವರು ಪ್ರಜ್ಞಾನಂದ ಜೊತೆ ಚೆಸ್ ಆಡಿದ್ದು, ಪ್ರಜ್ಞಾನಂದ ಅವರ ಅನುಭವವನ್ನು ಹಂಚಿಕೊಂಡಿದ್ದಾರೆ. ಇದು ಪ್ರಜ್ಞಾನಂದ ಅವರ ಸಾಧನೆಗೆ ದೊರೆತ ದೊಡ್ಡ ಪ್ರೋತ್ಸಾಹವಾಗಿದೆ.

ಚೆಸ್ ಚಾಂಪಿಯನ್ ಪ್ರಜ್ಞಾನಂದ ಜೊತೆ ಚೆಸ್ ಆಡಿ 50 ಲಕ್ಷ ರೂ. ಕೊಟ್ಟ ವಿಜಯ್
ವಿಜಯ್-ಪ್ರಜ್ಞಾನಂದ
ರಾಜೇಶ್ ದುಗ್ಗುಮನೆ
|

Updated on:Jun 08, 2026 | 2:43 PM

Share

ನಟ, ತಮಿಳುನಾಡು ಸಿಎಂ ದಳಪತಿ ವಿಜಯ್ ಅವರು ಭಾರತದ ಚೆಸ್ ಮಾಸ್ಟರ್ ಆರ್​. ಪ್ರಜ್ಞಾನಂದ ಅವರನ್ನು  (Praggnanandhaa) ಸನ್ಮಾನಿಸಿದ್ದಾರೆ. ಅವರಿಗೆ 50 ಲಕ್ಷ ರೂಪಾಯಿ ಬಹುಮಾನ ಮೊತ್ತವನ್ನು ಕೂಡ ನೀಡಿದ್ದಾರೆ. ನಾರ್ವೆ ಚೆಸ್ 2026 ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ ಬಳಿಕ ಅವರಿಗೆ ಈ ಗೌರವ ಸಿಕ್ಕಿದೆ. ವಿಶೇಷ ಎಂದರೆ ವಿಜಯ್ ಅವರು ಪ್ರಜ್ಞಾನಂದ ಜೊತೆ ಚೆಸ್ ಕೂಡ ಆಡಿದ್ದಾರೆ.

ಸಿಎಂ ವಿಜಯ್ ಅವರನ್ನು ಭೇಟಿ ಮಾಡಿದ ವಿಷಯವನ್ನು ಪ್ರಜ್ಞಾನಂದ ಅವರು ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದಾರೆ. ‘ನನಗೆ ಚೆಸ್ ಬೋರ್ಡ್ ಜೊತೆ ಬರಲು ಹೇಳಲಾಗಿತ್ತು. ನಾನು ಸಿಎಂ ಜೊತೆ ಚೆಸ್ ಆಡಿದೆ. ಅವರು ನನ್ನ ಜೊತೆ ಚೆಸ್ ಆಡುತ್ತಾರೆ ಎಂದು ನಾನು ಭಾವಿಸಿರಲಿಲ್ಲ. 15 ನಿಮಿಷಗಳ ಕಾಲ ಚೆಸ್ ಆಡಿದೆವು. ಗೆದ್ದಿದ್ದು ನಾನೇ. ಅವರು ತುಂಬಾನೇ ಪ್ರೋತ್ಸಾಹದಾಯಕವಾಗಿದ್ದಾರೆ’ ಎಂದಿದ್ದಾರೆ ವಿಜಯ್.

ಇದನ್ನೂ ಓದಿ: ನಾರ್ವೆಯಲ್ಲಿ ಹೊಸ ಇತಿಹಾಸ ಬರೆದ ಆರ್ ಪ್ರಜ್ಞಾನಂದ ತಮಿಳುನಾಡು ಸಿಎಂ ಕಚೇರಿ ಈ ಬಗ್ಗೆ ಟ್ವೀಟ್ ಮಾಡಿದೆ. ‘ತಮಿಳುನಾಡು ಸಿಎಂ ವಿಜಯ್ ಅವರು 50 ಲಕ್ಷ ರೂಪಾಯಿ ಹಣವನ್ನು ಪ್ರಜ್ಞಾನಂದಗೆ ನೀಡಿದ್ದಾರೆ. ನಾರ್ವೆ ಚೆಸ್ 2026 ಅಲ್ಲಿ ಈ ಸಾಧನೆ ಮಾಡಿ ಇತಿಹಾಸ ಬರೆದಿರುವುದರಿಂದ ಈ ಗೌರವ ನೀಡಲಾಗಿದೆ’ ಎಂದು ಬರೆದುಕೊಂಡಿದೆ.

ಕಳೆದ ವಾರ ನಡೆದ ಓಸ್ಲೋದಲ್ಲಿ ನಡೆದ ನಾರ್ವೆ ಚೆಸ್ 2026 ಟೂರ್ನಿಯಲ್ಲಿ ಅಂತಿಮ ಸುತ್ತಿನ ರೋಚಕ ಪಂದ್ಯದಲ್ಲಿ ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಪ್ರಜ್ಞಾನಂದ ಭರ್ಜರಿ ಜಯ ಸಾಧಿಸಿ ಈ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:42 pm, Mon, 8 June 26

Follow Us
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ