AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​ 2’ ಎದುರು ‘ಬೀಸ್ಟ್​’ ಸೋತರೂ ಪಾರ್ಟಿ ಮಾಡಿದ ದಳಪತಿ ವಿಜಯ್; ನಿರ್ದೇಶಕ ಹೇಳಿದ್ದೇನು?

‘ಬೀಸ್ಟ್​’ ತಂಡಕ್ಕೆ ದಳಪತಿ ವಿಜಯ್ ಪಾರ್ಟಿ ನೀಡಿದ್ದಾರೆ. ಇದರಲ್ಲಿ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​, ನಾಯಕಿ ಪೂಜಾ ಹೆಗ್ಡೆ ಸೇರಿದಂತೆ ಅನೇಕರು ಭಾಗಿ ಆಗಿದ್ದಾರೆ.

‘ಕೆಜಿಎಫ್​ 2’ ಎದುರು ‘ಬೀಸ್ಟ್​’ ಸೋತರೂ ಪಾರ್ಟಿ ಮಾಡಿದ ದಳಪತಿ ವಿಜಯ್; ನಿರ್ದೇಶಕ ಹೇಳಿದ್ದೇನು?
‘ಬೀಸ್ಟ್’ ತಂಡ
TV9 Web
| Edited By: |

Updated on: Apr 27, 2022 | 9:07 AM

Share

ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಲು ‘ಬೀಸ್ಟ್​’ (Beast Movie) ಚಿತ್ರಕ್ಕೆ ಸಾಧ್ಯವಾಗಿಲ್ಲ. ಸನ್​ ಪಿಕ್ಚರ್ಸ್​ ನಿರ್ಮಾಣ ಮಾಡಿದ ಈ ಸಿನಿಮಾ ಬಗ್ಗೆ ಅಭಿಮಾನಿಗಳು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದರು. ‘ದಳಪತಿ’ ವಿಜಯ್​ (Thalapathy Vijay) ಅಭಿನಯದ ಸಿನಿಮಾ ಎಂಬ ಕಾರಣದಿಂದಲೂ ಇದು ಹೈಪ್​ ಪಡೆದುಕೊಂಡಿತ್ತು. ಬಿಡುಗಡೆಗೂ ಮುನ್ನ ಹಾಡುಗಳ ಮೂಲಕ ಸಖತ್​ ಸೌಂಡು ಮಾಡಿತ್ತು. ಆದರೆ ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರಕ್ಕೆ ಹಿನ್ನಡೆ ಆಯಿತು. ಅದಕ್ಕೆ ಕಾರಣ ಹಲವು. ‘ಕೆಜಿಎಫ್​: ಚಾಪ್ಟರ್​ 2’ (KGF: Chapter 2) ಎಂಬ ಸುನಾಮಿಯ ಎದುರಿನಲ್ಲಿ ರಿಲೀಸ್​ ಆಗಿದ್ದೇ ‘ಬೀಸ್ಟ್​’ ಚಿತ್ರದ ಹಿನ್ನಡೆಗೆ ಮುಖ್ಯ ಕಾರಣ ಎಂದರೆ ತಪ್ಪಿಲ್ಲ. ಅದೇನೇ ಇರಲಿ, ಈ ಕಹಿ ಅನುಭವವನ್ನು ಬದಿಗಿಟ್ಟು ಇಡೀ ‘ಬೀಸ್ಟ್​’ ತಂಡ ಈಗ ಪಾರ್ಟಿ ಮಾಡಿದೆ. ಅದು ಕೂಡ ದಳಪತಿ ವಿಜಯ್​ ಮನೆಯಲ್ಲಿ ಎಂಬುದು ವಿಶೇಷ. ಪಾರ್ಟಿ ಸಂದರ್ಭದ ಫೋಟೋ ವೈರಲ್​ ಆಗಿದೆ. ಈ ಪಾರ್ಟಿಯಲ್ಲಿ ಭಾಗಿ ಆಗಿದ್ದರ ಕುರಿತು ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ಬಿಡುಗಡೆ ಆಗುವುದಕ್ಕಿಂತ ಒಂದು ದಿನ ಮುಂಚೆ, ಅಂದರೆ ಏ.13ರಂದು ‘ಬೀಸ್ಟ್​’ ತೆರೆಕಂಡಿತು. ಮೊದಲ ಶೋ ನೋಡಿಬಂದ ಪ್ರೇಕ್ಷಕರಿಂದ ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿತು. ನಾಯಕಿ ಪಾತ್ರಕ್ಕೆ ಮಹತ್ವ ಇಲ್ಲ, ಕಥೆಯಲ್ಲಿ ಲಾಜಿಕ್​ ಇಲ್ಲ, ಖಳ ನಾಯಕರ ಪಾತ್ರಗಳು ಬಲಿಷ್ಠವಾಗಿಲ್ಲ, ಕಾಮಿಡಿ ದೃಶ್ಯಗಳಿದ್ದರೂ ನಗು ಬರಲ್ಲ ಎಂಬಿತ್ಯಾದಿ ನೆಗೆಟಿವ್​ ವಿಮರ್ಶೆ ವ್ಯಕ್ತವಾಗಿದ್ದರಿಂದ ಈ ಸಿನಿಮಾಗೆ ನಿರೀಕ್ಷಿತ ಮಟ್ಟದ ಗೆಲುವು ಸಿಗಲಿಲ್ಲ. ಆದರೂ ಕೂಡ ದಳಪತಿ ವಿಜಯ್​ ಅವರು ತಮ್ಮ ತಂಡವನ್ನು ಬಿಟ್ಟುಕೊಟ್ಟಿಲ್ಲ. ಎಲ್ಲರನ್ನೂ ಕರೆದು ಔತಣ ನೀಡಿದ್ದಾರೆ.

ಈ ಪಾರ್ಟಿಯಲ್ಲಿ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​, ನಾಯಕಿ ಪೂಜಾ ಹೆಗ್ಡೆ, ಸಂಗೀತ ನಿರ್ದೇಶಕ ಅನಿರುದ್ಧ್​ ರವಿಚಂದರ್​, ಸ್ಟೈಲಿಸ್ಟ್​ ಪಲ್ಲವಿ ಸೇರಿದಂತೆ ಅನೇಕರು ಭಾಗಿ ಆಗಿದ್ದಾರೆ. ‘ಈ ಪಾರ್ಟಿ ಆಯೋಜಿಸಿದ್ದಕ್ಕೆ ವಿಜಯ್​ ಸರ್​ಗೆ ಧನ್ಯವಾದಗಳು. ಇಡೀ ತಂಡದ ಜೊತೆ ಇದು ಸ್ಮರಣೀಯ ಸಮಯ ಆಗಿತ್ತು. ವಿಜಯ್​ ಅವರ ಪ್ರೀತಿ ಮತ್ತು ಪ್ರೋತ್ಸಾಹಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ. ನಿಮ್ಮ ಜೊತೆ ಕೆಲಸ ಮಾಡಲು ಖುಷಿ ಆಗುತ್ತದೆ. ಈ ಕ್ಷಣವನ್ನು ನಾನು ಜೀವನವಿಡೀ ನೆನೆದು ಖುಷಿಪಡುತ್ತೇನೆ’ ಎಂದು ನೆಲ್ಸನ್​ ದಿಲೀಪ್​ ಕುಮಾರ್​ ಬರೆದುಕೊಂಡಿದ್ದಾರೆ.

ದಳಪತಿ ವಿಜಯ್​ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಹಲವು ವರ್ಷಗಳಿಂದ ಅವರು ತಮ್ಮ ಚಾರ್ಮ್​ ಉಳಿಸಿಕೊಂಡು ಬಂದಿದ್ದಾರೆ. ‘ಬೀಸ್ಟ್​’ ಚಿತ್ರಕ್ಕೆ ನೆಗೆಟಿವ್​ ಪ್ರತಿಕ್ರಿಯೆ ಸಿಕ್ಕಿದ್ದರೂ ಕೂಡ ತಕ್ಕಮಟ್ಟಿನ ಕಲೆಕ್ಷನ್​ ಮಾಡಿದೆ. ವಿಶ್ವಾದ್ಯಂತ ಈ ಚಿತ್ರಕ್ಕೆ 230 ಕೋಟಿ ರೂ. ಕಮಾಯಿ​ ಆಗಿದೆ ಎಂದು ವರದಿ ಆಗಿದೆ. ಎರಡು ವಾರದ ಬಳಿಕ ಚಿತ್ರದ ಕಲೆಕ್ಷನ್​ ಗಣನೀಯವಾಗಿ ಕುಸಿದಿದೆ. ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಎದುರು ‘ಬೀಸ್ಟ್​’ ಸಂಪೂರ್ಣ ಮಂಕಾಗಿದೆ. ಸ್ವತಃ ತಮಿಳುನಾಡಿನ ಪ್ರೇಕ್ಷಕರು ಕೂಡ ‘ಬೀಸ್ಟ್​’ ಬದಲು ‘ಕೆಜಿಎಫ್​ 2’ ಚಿತ್ರಕ್ಕೆ ಹೆಚ್ಚು ಅಂಕ ನೀಡಿದ್ದಾರೆ.

ಇದನ್ನೂ ಓದಿ:

‘ಕೆಜಿಎಫ್​ 2’ ಎದುರು ಸೋತ ‘ಬೀಸ್ಟ್​’ ಚಿತ್ರಕ್ಕೆ ಈಗ ಉಳಿದಿದ್ದು ಒಟಿಟಿ ಆಯ್ಕೆ ಮಾತ್ರ; ಯಾವಾಗ ರಿಲೀಸ್​?

‘ಬೀಸ್ಟ್​’ ಚೆನ್ನಾಗಿಲ್ಲ ಎಂಬ ಹತಾಶೆಯಿಂದ​ ಥಿಯೇಟರ್​ ಪರದೆಗೆ ಬೆಂಕಿ ಹಚ್ಚಿದ ವಿಜಯ್​ ಫ್ಯಾನ್ಸ್​? ವಿಡಿಯೋ ವೈರಲ್

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!