‘ಕೆಜಿಎಫ್​ 2’ ಎದುರು ‘ಬೀಸ್ಟ್​’ ಸೋತರೂ ಪಾರ್ಟಿ ಮಾಡಿದ ದಳಪತಿ ವಿಜಯ್; ನಿರ್ದೇಶಕ ಹೇಳಿದ್ದೇನು?

‘ಬೀಸ್ಟ್​’ ತಂಡಕ್ಕೆ ದಳಪತಿ ವಿಜಯ್ ಪಾರ್ಟಿ ನೀಡಿದ್ದಾರೆ. ಇದರಲ್ಲಿ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​, ನಾಯಕಿ ಪೂಜಾ ಹೆಗ್ಡೆ ಸೇರಿದಂತೆ ಅನೇಕರು ಭಾಗಿ ಆಗಿದ್ದಾರೆ.

‘ಕೆಜಿಎಫ್​ 2’ ಎದುರು ‘ಬೀಸ್ಟ್​’ ಸೋತರೂ ಪಾರ್ಟಿ ಮಾಡಿದ ದಳಪತಿ ವಿಜಯ್; ನಿರ್ದೇಶಕ ಹೇಳಿದ್ದೇನು?
‘ಬೀಸ್ಟ್’ ತಂಡ
Follow us
| Updated By: ಮದನ್​ ಕುಮಾರ್​

Updated on: Apr 27, 2022 | 9:07 AM

ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಲು ‘ಬೀಸ್ಟ್​’ (Beast Movie) ಚಿತ್ರಕ್ಕೆ ಸಾಧ್ಯವಾಗಿಲ್ಲ. ಸನ್​ ಪಿಕ್ಚರ್ಸ್​ ನಿರ್ಮಾಣ ಮಾಡಿದ ಈ ಸಿನಿಮಾ ಬಗ್ಗೆ ಅಭಿಮಾನಿಗಳು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದರು. ‘ದಳಪತಿ’ ವಿಜಯ್​ (Thalapathy Vijay) ಅಭಿನಯದ ಸಿನಿಮಾ ಎಂಬ ಕಾರಣದಿಂದಲೂ ಇದು ಹೈಪ್​ ಪಡೆದುಕೊಂಡಿತ್ತು. ಬಿಡುಗಡೆಗೂ ಮುನ್ನ ಹಾಡುಗಳ ಮೂಲಕ ಸಖತ್​ ಸೌಂಡು ಮಾಡಿತ್ತು. ಆದರೆ ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರಕ್ಕೆ ಹಿನ್ನಡೆ ಆಯಿತು. ಅದಕ್ಕೆ ಕಾರಣ ಹಲವು. ‘ಕೆಜಿಎಫ್​: ಚಾಪ್ಟರ್​ 2’ (KGF: Chapter 2) ಎಂಬ ಸುನಾಮಿಯ ಎದುರಿನಲ್ಲಿ ರಿಲೀಸ್​ ಆಗಿದ್ದೇ ‘ಬೀಸ್ಟ್​’ ಚಿತ್ರದ ಹಿನ್ನಡೆಗೆ ಮುಖ್ಯ ಕಾರಣ ಎಂದರೆ ತಪ್ಪಿಲ್ಲ. ಅದೇನೇ ಇರಲಿ, ಈ ಕಹಿ ಅನುಭವವನ್ನು ಬದಿಗಿಟ್ಟು ಇಡೀ ‘ಬೀಸ್ಟ್​’ ತಂಡ ಈಗ ಪಾರ್ಟಿ ಮಾಡಿದೆ. ಅದು ಕೂಡ ದಳಪತಿ ವಿಜಯ್​ ಮನೆಯಲ್ಲಿ ಎಂಬುದು ವಿಶೇಷ. ಪಾರ್ಟಿ ಸಂದರ್ಭದ ಫೋಟೋ ವೈರಲ್​ ಆಗಿದೆ. ಈ ಪಾರ್ಟಿಯಲ್ಲಿ ಭಾಗಿ ಆಗಿದ್ದರ ಕುರಿತು ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ಬಿಡುಗಡೆ ಆಗುವುದಕ್ಕಿಂತ ಒಂದು ದಿನ ಮುಂಚೆ, ಅಂದರೆ ಏ.13ರಂದು ‘ಬೀಸ್ಟ್​’ ತೆರೆಕಂಡಿತು. ಮೊದಲ ಶೋ ನೋಡಿಬಂದ ಪ್ರೇಕ್ಷಕರಿಂದ ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿತು. ನಾಯಕಿ ಪಾತ್ರಕ್ಕೆ ಮಹತ್ವ ಇಲ್ಲ, ಕಥೆಯಲ್ಲಿ ಲಾಜಿಕ್​ ಇಲ್ಲ, ಖಳ ನಾಯಕರ ಪಾತ್ರಗಳು ಬಲಿಷ್ಠವಾಗಿಲ್ಲ, ಕಾಮಿಡಿ ದೃಶ್ಯಗಳಿದ್ದರೂ ನಗು ಬರಲ್ಲ ಎಂಬಿತ್ಯಾದಿ ನೆಗೆಟಿವ್​ ವಿಮರ್ಶೆ ವ್ಯಕ್ತವಾಗಿದ್ದರಿಂದ ಈ ಸಿನಿಮಾಗೆ ನಿರೀಕ್ಷಿತ ಮಟ್ಟದ ಗೆಲುವು ಸಿಗಲಿಲ್ಲ. ಆದರೂ ಕೂಡ ದಳಪತಿ ವಿಜಯ್​ ಅವರು ತಮ್ಮ ತಂಡವನ್ನು ಬಿಟ್ಟುಕೊಟ್ಟಿಲ್ಲ. ಎಲ್ಲರನ್ನೂ ಕರೆದು ಔತಣ ನೀಡಿದ್ದಾರೆ.

ಈ ಪಾರ್ಟಿಯಲ್ಲಿ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​, ನಾಯಕಿ ಪೂಜಾ ಹೆಗ್ಡೆ, ಸಂಗೀತ ನಿರ್ದೇಶಕ ಅನಿರುದ್ಧ್​ ರವಿಚಂದರ್​, ಸ್ಟೈಲಿಸ್ಟ್​ ಪಲ್ಲವಿ ಸೇರಿದಂತೆ ಅನೇಕರು ಭಾಗಿ ಆಗಿದ್ದಾರೆ. ‘ಈ ಪಾರ್ಟಿ ಆಯೋಜಿಸಿದ್ದಕ್ಕೆ ವಿಜಯ್​ ಸರ್​ಗೆ ಧನ್ಯವಾದಗಳು. ಇಡೀ ತಂಡದ ಜೊತೆ ಇದು ಸ್ಮರಣೀಯ ಸಮಯ ಆಗಿತ್ತು. ವಿಜಯ್​ ಅವರ ಪ್ರೀತಿ ಮತ್ತು ಪ್ರೋತ್ಸಾಹಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ. ನಿಮ್ಮ ಜೊತೆ ಕೆಲಸ ಮಾಡಲು ಖುಷಿ ಆಗುತ್ತದೆ. ಈ ಕ್ಷಣವನ್ನು ನಾನು ಜೀವನವಿಡೀ ನೆನೆದು ಖುಷಿಪಡುತ್ತೇನೆ’ ಎಂದು ನೆಲ್ಸನ್​ ದಿಲೀಪ್​ ಕುಮಾರ್​ ಬರೆದುಕೊಂಡಿದ್ದಾರೆ.

ದಳಪತಿ ವಿಜಯ್​ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಹಲವು ವರ್ಷಗಳಿಂದ ಅವರು ತಮ್ಮ ಚಾರ್ಮ್​ ಉಳಿಸಿಕೊಂಡು ಬಂದಿದ್ದಾರೆ. ‘ಬೀಸ್ಟ್​’ ಚಿತ್ರಕ್ಕೆ ನೆಗೆಟಿವ್​ ಪ್ರತಿಕ್ರಿಯೆ ಸಿಕ್ಕಿದ್ದರೂ ಕೂಡ ತಕ್ಕಮಟ್ಟಿನ ಕಲೆಕ್ಷನ್​ ಮಾಡಿದೆ. ವಿಶ್ವಾದ್ಯಂತ ಈ ಚಿತ್ರಕ್ಕೆ 230 ಕೋಟಿ ರೂ. ಕಮಾಯಿ​ ಆಗಿದೆ ಎಂದು ವರದಿ ಆಗಿದೆ. ಎರಡು ವಾರದ ಬಳಿಕ ಚಿತ್ರದ ಕಲೆಕ್ಷನ್​ ಗಣನೀಯವಾಗಿ ಕುಸಿದಿದೆ. ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಎದುರು ‘ಬೀಸ್ಟ್​’ ಸಂಪೂರ್ಣ ಮಂಕಾಗಿದೆ. ಸ್ವತಃ ತಮಿಳುನಾಡಿನ ಪ್ರೇಕ್ಷಕರು ಕೂಡ ‘ಬೀಸ್ಟ್​’ ಬದಲು ‘ಕೆಜಿಎಫ್​ 2’ ಚಿತ್ರಕ್ಕೆ ಹೆಚ್ಚು ಅಂಕ ನೀಡಿದ್ದಾರೆ.

ಇದನ್ನೂ ಓದಿ:

‘ಕೆಜಿಎಫ್​ 2’ ಎದುರು ಸೋತ ‘ಬೀಸ್ಟ್​’ ಚಿತ್ರಕ್ಕೆ ಈಗ ಉಳಿದಿದ್ದು ಒಟಿಟಿ ಆಯ್ಕೆ ಮಾತ್ರ; ಯಾವಾಗ ರಿಲೀಸ್​?

‘ಬೀಸ್ಟ್​’ ಚೆನ್ನಾಗಿಲ್ಲ ಎಂಬ ಹತಾಶೆಯಿಂದ​ ಥಿಯೇಟರ್​ ಪರದೆಗೆ ಬೆಂಕಿ ಹಚ್ಚಿದ ವಿಜಯ್​ ಫ್ಯಾನ್ಸ್​? ವಿಡಿಯೋ ವೈರಲ್

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ