AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಸ್ಟಾಗ್ರಾಮ್​ನಲ್ಲಿ ಸುನಾಮಿ ಎಬ್ಬಿಸಿದ ದಳಪತಿ ವಿಜಯ್​; ಒಂದೇ ದಿನದಲ್ಲಿ ಮೋಡಿ ಮಾಡಿದ ನಟ

Thalapathy Vijay Instagram Account: ದಳಪತಿ ವಿಜಯ್​ ಅವರು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಈವರೆಗೂ ಅಪ್​ಲೋಡ್​ ಮಾಡಿರುವುದು ಒಂದು ಫೋಟೋ ಹಾಗೂ ಇನ್ನೊಂದು ಸ್ಟೋರಿ ಮಾತ್ರ. ಅದಕ್ಕೆ ಸಿಕ್ಕಿರುವ ಪ್ರತಿಕ್ರಿಯೆ ಭರ್ಜರಿ ಆಗಿದೆ.

ಇನ್​ಸ್ಟಾಗ್ರಾಮ್​ನಲ್ಲಿ ಸುನಾಮಿ ಎಬ್ಬಿಸಿದ ದಳಪತಿ ವಿಜಯ್​; ಒಂದೇ ದಿನದಲ್ಲಿ ಮೋಡಿ ಮಾಡಿದ ನಟ
ದಳಪತಿ ವಿಜಯ್
ಮದನ್​ ಕುಮಾರ್​
|

Updated on:Apr 03, 2023 | 1:35 PM

Share

ನಟ ದಳಪತಿ ವಿಜಯ್​ (Thalapathy Vijay) ಅವರಿಗೆ ಇರುವ ಅಭಿಮಾನಿ ಬಳಗ ಬಹುದೊಡ್ಡದು. ಅದಕ್ಕೆ ಸೋಶಿಯಲ್​ ಮೀಡಿಯಾದಲ್ಲಿ ಅವರಿಗೆ ಇರುವ ಫಾಲೋವರ್ಸ್​ ಸಂಖ್ಯೆಯೇ ಸಾಕ್ಷಿ. ಇಷ್ಟು ದಿನ ಕೇವಲ ಟ್ವಿಟರ್​ ಮತ್ತು ಫೇಸ್​ಬುಕ್​ನಲ್ಲಿ ಖಾತೆ ಹೊಂದಿದ್ದ ದಳಪತಿ ವಿಜಯ್​ ಅವರು ಈಗ ಇನ್​ಸ್ಟಾಗ್ರಾಮ್​ (Thalapathy Vijay Instagram) ಲೋಕಕ್ಕೂ ಕಾಲಿಟ್ಟಿದ್ದಾರೆ. ಬರುಬರುತ್ತಿದ್ದಂತೆಯೇ ಅವರು ಈ ಸೋಶಿಯಲ್​ ಮೀಡಿಯಾ ಪ್ಲಾಟ್​ಫಾರ್ಮ್​ನಲ್ಲಿ ಸುನಾಮಿ ಎಬ್ಬಿಸಿದ್ದಾರೆ. ಅತಿ ವೇಗವಾಗಿ ಒಂದು ಮಿಲಿಯನ್​ (10 ಲಕ್ಷ) ಹಿಂಬಾಲಕರನ್ನು ಪಡೆದ ಭಾರತದ ಸೆಲೆಬ್ರಿಟಿ ಎಂಬ ದಾಖಲೆ ವಿಜಯ್​ ಹೆಸರಿನಲ್ಲಿದೆ. ಒಂದು ದಿನ ಕಳೆಯುವುದರೊಳಗೆ ಅವರನ್ನು 45 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡಲು ಆರಂಭಿಸಿದ್ದಾರೆ.

ಏಪ್ರಿಲ್​ 2ರಂದು ದಳಪತಿ ವಿಜಯ್​ ಅವರು ಇನ್​ಸ್ಟಾಗ್ರಾಮ್​ ಖಾತೆ ತೆರೆದರು. ಅದರಲ್ಲಿ ಅವರು ಈವರೆಗೂ ಅಪ್​ಲೋಡ್​ ಮಾಡಿರುವುದು ಒಂದೇ ಒಂದು ಫೋಟೋ ಮಾತ್ರ. 20 ಗಂಟೆ ಕಳೆಯುವುದರೊಳಗೆ ಈ ಫೋಟೋವನ್ನು 45 ಲಕ್ಷ ಮಂದಿ ಲೈಕ್​ ಮಾಡಿದ್ದಾರೆ. ಐದು ಲಕ್ಷಕ್ಕೂ ಅಧಿಕ ಕಮೆಂಟ್​ಗಳ ಮೂಲಕ ಅಭಿಮಾನಿಗಳು ಸ್ವಾಗತ ಕೋರಿದ್ದಾರೆ. ಅಭಿಮಾನಿಗಳ ಪ್ರೀತಿ ಕಂಡು ಫಿದಾ ಆಗಿರುವ ದಳಪತಿ ವಿಜಯ್​ ಅವರು ಸ್ಟೋರಿಯಲ್ಲಿ ಮತ್ತೊಂದು ಫೋಟೋ ಹಂಚಿಕೊಂಡಿದ್ದಾರೆ. ಅದು ‘ಲಿಯೋ’ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ಕ್ಲಿಕ್ಕಿಸಿದ ಫೋಟೋ ಎಂಬುದು ವಿಶೇಷ.

ಇದನ್ನೂ ಓದಿ
Image
Varisu Trailer: ಧೂಳೆಬ್ಬಿಸುತ್ತಿದೆ ‘ವಾರಿಸು’ ಸಿನಿಮಾ ಟ್ರೇಲರ್​; ಫ್ಯಾಮಿಲಿ ಪ್ರೇಕ್ಷಕರ ಮೇಲೆ ಕಣ್ಣಿಟ್ಟ ದಳಪತಿ ವಿಜಯ್​
Image
Katrina Kaif: ‘ದಳಪತಿ’ ವಿಜಯ್​ ಚಿತ್ರದ ಹಾಡಿಗೆ ಶಾಲಾ ಮಕ್ಕಳ ಜತೆ ಕತ್ರಿನಾ ಕೈಫ್ ಡ್ಯಾನ್ಸ್​; ಇಲ್ಲಿದೆ ವಿಡಿಯೋ
Image
‘ಕೆಜಿಎಫ್​ 2’ ಎದುರು ‘ಬೀಸ್ಟ್​’ ಸೋತರೂ ಪಾರ್ಟಿ ಮಾಡಿದ ದಳಪತಿ ವಿಜಯ್; ನಿರ್ದೇಶಕ ಹೇಳಿದ್ದೇನು?
Image
‘ಕೆಜಿಎಫ್​ 2’ ಎದುರು ‘ಬೀಸ್ಟ್​’ಗೆ ಹಿನ್ನಡೆ; ಚಿತ್ರರಂಗಕ್ಕೆ ದಳಪತಿ ವಿಜಯ್​ ಮಗನ ಎಂಟ್ರಿ ಬಗ್ಗೆ ಟಾಕ್​ ಶುರು
View this post on Instagram

A post shared by Vijay (@actorvijay)

ದಳಪತಿ ವಿಜಯ್​ ಅವರು ಇನ್​ಸ್ಟಾಗ್ರಾಮ್​ಗೆ ಬರಬೇಕು ಎಂಬುದು ಅಭಿಮಾನಿಗಳ ಬಹುದಿನಗಳ ಆಸೆ ಆಗಿತ್ತು. ಅದು ಈಡೇರಿದ ಖುಷಿಯಲ್ಲಿ ಎಲ್ಲರೂ ಅವರನ್ನು ಫಾಲೋ ಮಾಡಲು ಆರಂಭಿಸಿದ್ದಾರೆ. ಪ್ರತಿ ಗಂಟೆಯೂ ಲಕ್ಷಾಂತರ ಹಿಂಬಾಲಕರು ಸೇರ್ಪಡೆ ಆಗುತ್ತಿದ್ದಾರೆ. ಮ್ಯಾಜಿಕ್​ ರೀತಿಯಲ್ಲಿ ಫಾಲೋವರ್ಸ್​ ಸಂಖ್ಯೆ ಹೆಚ್ಚುತ್ತಿದೆ.

ಇದನ್ನೂ ಓದಿ: Trisha: ದಳಪತಿ ವಿಜಯ್​ ಜತೆಗಿನ ‘ಲಿಯೋ’ ಚಿತ್ರದ ಸೆಟ್​ನಿಂದ ತ್ರಿಷಾ ವಾಪಸ್​ ಬಂದಿದ್ದೇಕೆ? ಇಲ್ಲಿದೆ ಅಸಲಿ ವಿಷಯ

ಚಿತ್ರರಂಗದಲ್ಲಿ ದಳಪತಿ ವಿಜಯ್​ ಅವರಿಗೆ ಇರುವ ಅನುಭವ ಅಪಾರ. ಬಾಲನಟನಾಗಿ 1984ರಲ್ಲೇ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಹೀರೋ ಆದ ನಂತರವೂ ಅವರು ಅಭಿಮಾನಿಗಳ ಹೃದಯದಲ್ಲಿ ಜಾಗ ಪಡೆದುಕೊಂಡರು. ಇಂದಿಗೂ ಅವರು ಅದೇ ಚಾರ್ಮ್​ ಕಾಪಾಡಿಕೊಂಡಿದ್ದಾರೆ. ಬಹುಕೋಟಿ ರೂಪಾಯಿ ಸಂಭಾವನೆ ಪಡೆಯುತ್ತ, ಬಾಕ್ಸ್​ ಆಫೀಸ್​ನಲ್ಲಿ ಜಾದೂ ಮಾಡುತ್ತ ಅವರು ಮುನ್ನುಗ್ಗುತ್ತಿದ್ದಾರೆ. ಅವರ ಜೊತೆ ಸಿನಿಮಾ ಮಾಡಲು ಅನೇಕ ನಿರ್ಮಾಪಕರು, ನಿರ್ದೇಶಕರು ಕಾಯುತ್ತಿದ್ದಾರೆ.

ಪ್ರಸ್ತುತ ವಿಜಯ್​ ಅವರು ‘ಲಿಯೋ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಲೋಕೇಶ್​ ಕನಗರಾಜ್​ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಬಹುತಾರಾಗಣ ಇರುವ ಈ ಸಿನಿಮಾದ ಶೂಟಿಂಗ್​ ಕಾಶ್ಮೀರದಲ್ಲಿ ನಡೆಯುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:35 pm, Mon, 3 April 23

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ