AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಳಪತಿ ವಿಜಯ್ ಅವರು ಡಾರ್ಲಿಂಗ್’; ಮನು ಭಾಕರ್ ಪ್ರೀತಿಯ ನುಡಿಗಳು

ದಳಪತಿ ವಿಜಯ್ ಅವರು ಅನೇಕರ ಫೇರವರಿಟ್ ಎನಿಸಿಕೊಂಡಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಒಲಂಪಿಕ್​ನಲ್ಲಿ ಪದಕ ಗೆದ್ದ ಮನು ಭಾಕರ್​ ಅವರಿಗೂ ದಳಪತಿ ವಿಜಯ್ ಬಗ್ಗೆ ಗೊತ್ತು. ಅವರು ಚೆನ್ನೈನಲ್ಲಿ ವಿಜಯ್ ಬಗ್ಗೆ ಮಾತನಾಡಿದ್ದರು.

‘ದಳಪತಿ ವಿಜಯ್ ಅವರು ಡಾರ್ಲಿಂಗ್’; ಮನು ಭಾಕರ್ ಪ್ರೀತಿಯ ನುಡಿಗಳು
ಮನು-ವಿಜಯ್
ರಾಜೇಶ್ ದುಗ್ಗುಮನೆ
|

Updated on:Aug 21, 2024 | 11:52 AM

Share

ಮನು ಭಾಕರ್ ಅವರು ಮೂಲತಃ ಹರಿಯಾಣದವರು. ಅವರಿಗೆ ಇನ್ನೂ 22 ವರ್ಷ ವಯಸ್ಸು. ಇಷ್ಟು ಸಣ್ಣ ವಯಸ್ಸಿನಲ್ಲೇ ಅವರು ಸಾಕಷ್ಟು ಸಾಧನೆ ಮಾಡಿದ್ದಾರೆ. ಈ ವರ್ಷ ನಡೆದ ಒಲಂಪಿಕ್​ನಲ್ಲಿ ಶೂಟಿಂಗ್​ ವಿಭಾಗದಲ್ಲಿ ಅವರು ಭಾರತಕ್ಕೆ ಎರಡು ಪದಕ ತಂದುಕೊಟ್ಟಿದ್ದಾರೆ. ಅವರು ಈಗ ದಳಪತಿ ವಿಜಯ್ ಬಗ್ಗೆ ಮಾತನಾಡಿದ್ದಾರೆ. ‘ದಳಪತಿ ವಿಜಯ್ ಡಾರ್ಲಿಂಗ್​’ ಎಂದು ಅವರು ಪ್ರೀತಿಯಿಂದ ಕರೆದಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ಇತ್ತೀಚೆಗೆ ಮನು ಭಾಕರ್ ಅವರು ಚೆನ್ನೈಗೆ ತೆರಳಿದ್ದರು. ಅಲ್ಲಿ ಅವರನ್ನು ಗೌರವಿಸಲಾಗಿದೆ. ತಮಿಳುನಾಡಿನ ಅನೇಕ ಸೆಲೆಬ್ರಿಟಿಗಳ ಬಗ್ಗೆ ಅವರಿಗೆ ಕೇಳಲಾಗಿದೆ. ಆದರೆ, ಅವರನ್ನು ಪತ್ತೆ ಹಚ್ಚೋಕೆ ಅವರಿಗೆ ಸಾಧ್ಯವಾಗಿಲ್ಲ. ಆದರೆ ದಳಪತಿ ವಿಜಯ್ ಅವರ ಪರಿಚಯ ಮನು ಭಾಕರ್​ಗೆ ಇತ್ತು. ವಿಜಯ್ ಅವರ ಹೆಸರು ಹೇಳುತ್ತಿದ್ದಂತೆ ಅವರು ನಕ್ಕಿದ್ದಾರೆ. ‘ಅವರು ಡಾರ್ಲಿಂಗ್’ ಎಂದು ಕರೆದಿದ್ದಾರೆ. ಇದು ದಳಪತಿ ವಿಜಯ್ ಅವರ ಜನಪ್ರಿಯತೆಗೆ ಹಿಡಿದ ಸಾಕ್ಷಿ.

ದಳಪತಿ ವಿಜಯ್ ಅವರು ಅನೇಕರ ಫೇರವರಿಟ್ ಎನಿಸಿಕೊಂಡಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಅವರ ಬಗ್ಗೆ ಅನೇಕರಿಗೆ ತಿಳಿದಿದೆ. ಅವರ ಜೊತೆ ನಟಿಸಬೇಕು ಎನ್ನುವ ಆಸೆಯನ್ನು ಅನೇಕರು ವ್ಯಕ್ತಪಡಿಸಿದ್ದೂ ಇದೆ. ಆದರೆ, ಎಲ್ಲರಿಗೂ ಈ ಅವಕಾಶ ಸಿಕ್ಕಿಲ್ಲ.

ಇದನ್ನೂ ಓದಿ:  ‘ಎಷ್ಟೇ ವಯಸ್ಸಾದರೂ ಸಿಂಹ ಎಂದಿಗೂ ಸಿಂಹ’: ಅಬ್ಬರಿಸಲು ಸಜ್ಜಾದ ದಳಪತಿ ವಿಜಯ್

ದಳಪತಿ ವಿಜಯ್ ಅವರು ಸದ್ಯ ‘ಗೋಟ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರ ಸೆಪ್ಟೆಂಬರ್ 5ರಂದು ರಿಲೀಸ್ ಆಗಲಿದೆ. ಇತ್ತೀಚೆಗೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ದಳಪತಿ ವಿಜಯ್ ಅವರು ಎರಡು ಪಾರ್ಟ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಟ್ರೇಲರ್ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:51 am, Wed, 21 August 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ