AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3ನೇ ದಿನ ಚೇತರಿಸಿಕೊಂಡ ‘ಜನ ನಾಯಗನ್’ ಕಲೆಕ್ಷನ್: 100 ಕೋಟಿ ರೂ. ಕ್ಲಬ್‌ನತ್ತ ವಿಜಯ್ ಸಿನಿಮಾ

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಮೊದಲ ದಿನವೇ 100 ಕೋಟಿ ರೂಪಾಯಿ ಗಳಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. 3 ದಿನಗಳ ಬಳಿಕ ಈ ಚಿತ್ರವು 100 ಕೋಟಿ ರೂಪಾಯಿ ಗಳಿಸುವತ್ತ ಹೆಜ್ಜೆ ಹಾಕುತ್ತಿದೆ. 3ನೇ ದಿನ ಬಾಕ್ಸ್ ಆಫೀಸ್​ನಲ್ಲಿ ಸ್ವಲ್ಪ ಚೇತರಿಕೆ ಕಂಡಿದೆ.

3ನೇ ದಿನ ಚೇತರಿಸಿಕೊಂಡ ‘ಜನ ನಾಯಗನ್’ ಕಲೆಕ್ಷನ್: 100 ಕೋಟಿ ರೂ. ಕ್ಲಬ್‌ನತ್ತ ವಿಜಯ್ ಸಿನಿಮಾ
Thalapathy Vijay
ಮದನ್​ ಕುಮಾರ್​
|

Updated on: Jul 26, 2026 | 9:30 AM

Share

ಮುಖ್ಯಾಂಶಗಳು

  • ಮಿಶ್ರ ಪ್ರತಿಕ್ರಿಯೆಯ ನಡುವೆಯೂ 3ನೇ ದಿನ ಭರ್ಜರಿ ಚೇತರಿಕೆ ಕಂಡು, 28.50 ಕೋಟಿ ಗಳಿಸಿದ ‘ಜನ ನಾಯಗನ್’.
  • ಮೂರು ದಿನಗಳಲ್ಲಿ ಒಟ್ಟು 92 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಆಗಿದ್ದು, 100 ಕೋಟಿ ರೂ. ಕ್ಲಬ್‌ನತ್ತ ಸಾಗಿದೆ.
  • ರಾಜಕೀಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ದಳಪತಿ ವಿಜಯ್ ಅವರ ಕೊನೆಯ ಸಿನಿಮಾ ಇದು .

ಕಾನೂನು ಸಂಘರ್ಷಗಳು, ಆನ್‌ಲೈನ್ ಲೀಕ್ ಹಾಗೂ ಸಿಬಿಎಫ್‌ಸಿ ಜೊತೆಗಿನ ಸುದೀರ್ಘ ತಿಕ್ಕಾಟದ ನಂತರ ದಳಪತಿ ವಿಜಯ್ (Thalapathy Vijay) ಅಭಿನಯದ ಬಹುನಿರೀಕ್ಷಿತ ಕೊನೆಯ ಚಿತ್ರ ‘ಜನ ನಾಯಗನ್’ (Jana Nayagan) ಜುಲೈ 23ರಂದು ವಿಶ್ವಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಯಿತು. ಚಿತ್ರಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಿಜಯ್ ಅವರ ಭರ್ಜರಿ ಫೈಟ್ಸ್, ಭಾವನಾತ್ಮಕ ದೃಶ್ಯಗಳು ಮತ್ತು ಅನಿರುದ್ಧ್ ರವಿಚಂದರ್ ಅವರ ಹಿನ್ನೆಲೆ ಸಂಗೀತಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ, ಕಥೆಯ ನಿಧಾನಗತಿಯ ಓಟ, ಸುದೀರ್ಘ ಅವಧಿ ಮತ್ತು ಬಾಬಿ ಡಿಯೋಲ್ ಅಭಿನಯದ ವಿಲನ್ ಪಾತ್ರದ ನಿರೂಪಣೆಗೆ ಕೆಲವು ಪ್ರೇಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚಿತ್ರಕ್ಕೆ ಸಿಕ್ಕಿದ ಮಿಶ್ರ ಪ್ರತಿಕ್ರಿಯೆಯು ಇದರ ಬಾಕ್ಸ್ ಆಫೀಸ್ ಗಳಿಕೆಯ ಮೇಲೆಯೂ ಪರಿಣಾಮ ಬೀರಿದೆ. ‘ಜನ ನಾಯಗನ್’ ಮೊದಲ ದಿನ ಭಾರತದಲ್ಲಿ 42.70 ಕೋಟಿ ರೂಪಾಯಿ ನೆಟ್ ಹಾಗೂ ವಿಶ್ವಾದ್ಯಂತ 78 ಕೋಟಿ ರೂಪಾಯಿ ಗ್ರಾಸ್ ಗಳಿಕೆಯೊಂದಿಗೆ ಭರ್ಜರಿ ಓಪನಿಂಗ್ ಪಡೆದುಕೊಂಡಿತ್ತು. ಆದರೆ, ಎರಡನೇ ದಿನವಾದ ಶುಕ್ರವಾರ ಗಳಿಕೆಯಲ್ಲಿ ಶೇಕಡಾ 50ಕ್ಕಿಂತಲೂ ಹೆಚ್ಚಿನ ಕುಸಿತ ಕಂಡುಬಂದಿದ್ದು, ಭಾರತದಲ್ಲಿ ಕೇವಲ 21.15 ಕೋಟಿ ರೂಪಾಯಿ ನೆಟ್ ಸಂಗ್ರಹಿಸಿತ್ತು. ಇದರಿಂದಾಗಿ ಮೊದಲ ಎರಡು ದಿನಗಳಲ್ಲಿ ದೇಶೀಯವಾಗಿ ಒಟ್ಟು 63.85 ಕೋಟಿ ರೂಪಾಯಿ ನೆಟ್ ಗಳಿಕೆಯಾಗಿತ್ತು.

ಮೂರನೇ ದಿನಕ್ಕೆ ‘ಜನ ನಾಗಯನ್’ ಕಲೆಕ್ಷನ್ ಎಷ್ಟು?

ಆದರೆ, ಮೂರನೇ ದಿನವಾದ ಶನಿವಾರದಂದು ಸಿನಿಮಾ ಮತ್ತೆ ಚೇತರಿಕೆಯ ಹಾದಿಗೆ ಮರಳಿದೆ. ಎಚ್. ವಿನೋದ್ ನಿರ್ದೇಶನದ ಈ ಚಿತ್ರವು ಶನಿವಾರ ಭಾರತದಲ್ಲಿ ಅಂದಾಜು 28.50 ಕೋಟಿ ರೂಪಾಯಿ ನೆಟ್ ಗಳಿಕೆ ಮಾಡಿದೆ. ಇದರೊಂದಿಗೆ ಮೂರು ದಿನಗಳಲ್ಲಿ ಭಾರತದ ಒಟ್ಟು ನೆಟ್ ಗಳಿಕೆ 92 ಕೋಟಿ ರೂಪಾಯಿ ದಾಟಿದ್ದು, ಮೊದಲ ವಾರಾಂತ್ಯಕ್ಕೆ ಭಾರತೀಯ ನೆಟ್ ಬಾಕ್ಸ್ ಆಫೀಸ್‌ನಲ್ಲಿ 100 ಕೋಟಿ ರೂಪಾಯಿ ಗಳಿಕೆಯ ಗಡಿಯನ್ನು ದಾಟುವತ್ತ ‘ಜನ ನಾಯಗನ್’ ದಾಪುಗಾಲು ಹಾಕುತ್ತಿದೆ.

‘ಜನ ನಾಯಗನ್’ ಸಿನಿಮಾದ ಪಾತ್ರವರ್ಗ:

ಈ ಬಹುನಿರೀಕ್ಷಿತ ಚಿತ್ರದಲ್ಲಿ ವಿಜಯ್ ಅವರೊಂದಿಗೆ ಪೂಜಾ ಹೆಗ್ಡೆ, ಬಾಬಿ ಡಿಯೋಲ್, ಮಮಿತಾ ಬೈಜು, ಗೌತಮ್ ವಾಸುದೇವ್ ಮೆನನ್, ಪ್ರಕಾಶ್ ರಾಜ್ ಮತ್ತು ನರೇನ್ ಸೇರಿದಂತೆ ಹಲವರು ಅಭಿನಯಿಸಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆಯು ಈ ಬೃಹತ್ ಸಿನಿಮಾದ ನಿರ್ಮಾಣದ ಜವಾಬ್ದಾರಿಯನ್ನು ನಿಭಾಯಿಸಿದ್ದು, ವಿಜಯ್ ಅವರ ನಟನಾ ವೃತ್ತಿಜೀವನದ ಅಂತಿಮ ಚಿತ್ರವಾಗಿ ಇದನ್ನು ಅದ್ಧೂರಿಯಾಗಿ ತೆರೆಗೆ ತರಲಾಗಿದೆ.

ಇದನ್ನೂ ಓದಿ: ಕದ್ದುಮುಚ್ಚಿ ‘ಜನ ನಾಯಗನ್’ ನೋಡಲು ಚಿತ್ರಮಂದಿರಕ್ಕೆ ಬಂದ ವಿಜಯ್ ಪತ್ನಿ ಸಂಗೀತಾ?

ದಳಪತಿ ವಿಜಯ್ ಕೊನೆಯ ಸಿನಿಮಾ: ಮೂರು ದಶಕಗಳ ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ಗಿಲ್ಲಿ, ಲಿಯೋ, ದ ಗ್ರೇಟೆಸ್ಟ್ ಆಫ್ ಆಲ್ ಟೈಮ್, ಮೆರ್ಸಲ್ ಮತ್ತು ಬಿಗಿಲ್‌ನಂತಹ ಸಾಲು ಸಾಲು ಹಿಟ್‌ಗಳನ್ನು ನೀಡಿದ್ದ ವಿಜಯ್‌ಗೆ ಇದು ಕೊನೆಯ ಸಿನಿಮಾವಾಗಿದೆ. ತಮಿಳುನಾಡು ಮುಖ್ಯಮಂತ್ರಿಯಾಗಿ ಆಯ್ಕೆಯಾದ ನಂತರ ವಿಜಯ್ ಅವರು ರಾಜಕೀಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಳ್ಳಲು ಚಿತ್ರರಂಗದಿಂದ ದೂರ ಸರಿದಿದ್ದಾರೆ. ಅಂದಹಾಗೆ, ‘ಜನ ನಾಯಗನ್’ ಚಿತ್ರವು 2023ರಲ್ಲಿ ತೆಲುಗಿನಲ್ಲಿ ನಂದಮೂರಿ ಬಾಲಕೃಷ್ಣ ಅಭಿನಯಿಸಿ, ಅನಿಲ್ ರವಿಪುಡಿ ನಿರ್ದೇಶಿಸಿದ್ದ ‘ಭಗವಂತ್ ಕೇಸರಿ’ ಚಿತ್ರದ ಅಧಿಕೃತ ರಿಮೇಕ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ