AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ ಹೊಸ ಟೀಸರ್ ನೋಡಿ ವಾವ್ ಎಂದ ವಿಜಯ್ ಅಭಿಮಾನಿಗಳು

ದೇಶ-ವಿದೇಶಗಳಲ್ಲಿ ಈಗಾಗಲೇ ‘ಜನ ನಾಯಗನ್’ ಚಿತ್ರದ ಮುಂಗಡ ಟಿಕೆಟ್ ಬುಕಿಂಗ್ ಭರದಿಂದ ಸಾಗುತ್ತಿದ್ದು, ದಳಪತಿ ವಿಜಯ್ ಅವರ ಈ ಅಂತಿಮ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಎಷ್ಟರ ಮಟ್ಟಿಗೆ ಧೂಳೀಪಟ ಮಾಡಲಿದೆ ಎಂಬುದನ್ನು ನೋಡಲು ಇಡೀ ಭಾರತೀಯ ಚಿತ್ರರಂಗ ಕಾಯುತ್ತಿದೆ. ಈಗ ಬಿಡುಗಡೆ ಆಗಿರುವ ಅನೌನ್ಸ್​ಮೆಂಟ್ ಟೀಸರ್​ನಿಂದ ಚಿತ್ರದ ಮೇಲಿನ ಹೈಪ್ ಹೆಚ್ಚಿದೆ.

‘ಜನ ನಾಯಗನ್’ ಹೊಸ ಟೀಸರ್ ನೋಡಿ ವಾವ್ ಎಂದ ವಿಜಯ್ ಅಭಿಮಾನಿಗಳು
Thalapathy VijayImage Credit source: KVN Productions
ಮದನ್​ ಕುಮಾರ್​
| Edited By: |

Updated on:Jul 22, 2026 | 12:23 PM

Share

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಸ್ಟಾರ್ ನಟ ದಳಪತಿ ವಿಜಯ್ (Thalapathy Vijay) ಅವರ ಬಹುನಿರೀಕ್ಷಿತ ಕೊನೆಯ ಸಿನಿಮಾ ‘ಜನ ನಾಯಗನ್’ (Jana Nayagan) ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಜುಲೈ 23ರಂದು ಜಗತ್ತಿನಾದ್ಯಂತ ಈ ಚಿತ್ರ ಅದ್ಧೂರಿಯಾಗಿ ತೆರೆಕಾಣುತ್ತಿದ್ದು, ಚಿತ್ರತಂಡ ಬಿಡುಗಡೆ ಮಾಡಿರುವ ಹೊಸ ಅನೌನ್ಸ್‌ಮೆಂಟ್ ಟೀಸರ್ ಸಾಮಾಜಿಕ ಜಾಲತಾಣಗಳಲ್ಲಿ ಧೂಳೆಬ್ಬಿಸುತ್ತಿದೆ. ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಸಂಸ್ಥೆಯು ಸೋಮವಾರ (ಜುಲೈ 20) ಈ ಟೀಸರ್ ಹಂಚಿಕೊಂಡಿದೆ.

18 ಸೆಕೆಂಡುಗಳ ಕಿರು ಟೀಸರ್ ನೋಡಿದ ವಿಜಯ್ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಟೀಸರ್‌ನಲ್ಲಿ ವಿಜಯ್ ಅವರು ಖಳರ ವಿರುದ್ಧ ಗನ್ ಹಿಡಿದು ಫೈಟ್ ಮಾಡುವ ಹಾಗೂ ಪೊಲೀಸ್ ಸಮುಸ್ತ್ರದಲ್ಲಿ ಅಬ್ಬರಿಸುವ ಆ್ಯಕ್ಷನ್ ದೃಶ್ಯಗಳಿವೆ. ಎಲ್ಲಕ್ಕಿಂತ ಹೆಚ್ಚಾಗಿ, ವಿಜಯ್ ಅವರು ಜೈಲಿನ ಕೈದಿ ಉಡುಪಿನಿಂದ ನೇರವಾಗಿ ಬಿಳಿ ಶರ್ಟ್ ಮತ್ತು ಕಪ್ಪು ಜಾಕೆಟ್ ಧರಿಸಿದ ಮುಖ್ಯಮಂತ್ರಿಯ ಲುಕ್‌ಗೆ ಬದಲಾಗುವ ದೃಶ್ಯಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.

‘ಒನ್ ಲಾಸ್ಟ್ ಡ್ಯಾನ್ಸ್’ ಎಂದ ಅಭಿಮಾನಿಗಳು:

ವಿಜಯ್ ಅವರನ್ನು ಬೆಳ್ಳಿಪರದೆಯ ಮೇಲೆ ನಟನಾಗಿ ನೋಡಲು ಇದು ಕೊನೆಯ ಅವಕಾಶ ಆಗಿರುವುದರಿಂದ, ಕಾಮೆಂಟ್ ಸೆಕ್ಷನ್‌ನಲ್ಲಿ ಅಭಿಮಾನಿಗಳ ಭಾವನಾತ್ಮಕ ಸಂದೇಶಗಳು ಹರಿದುಬರುತ್ತಿವೆ. ‘ನಟ ವಿಜಯ್‌ನಿಂದ ಹಿಡಿದು ಸಿಎಂ ವಿಜಯ್ ವರೆಗಿನ ಟ್ರಾನ್ಸಿಶನ್ ಅದ್ಭುತವಾಗಿದೆ’, ‘ಕೊನೆಯ ಬಾರಿಗೆ ದಳಪತಿ ಅಬ್ಬರ ನೋಡಲು ಸಜ್ಜಾಗಿದ್ದೇವೆ’ ಹಾಗೂ ‘ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆಯುವುದು ಗ್ಯಾರಂಟಿ’ ಎಂದು ನೆಟ್ಟಿಗರು ಬರೆದುಕೊಳ್ಳುತ್ತಿದ್ದಾರೆ.

ಸಾಕಷ್ಟು ಅಡೆತಡೆಗಳ ನಂತರ ರಿಲೀಸ್:

ಹೆಚ್. ವಿನೋದ್ ನಿರ್ದೇಶನದ ‘ಜನ ನಾಯಗನ್’ ಚಿತ್ರವು ಚಿತ್ರಮಂದಿರ ತಲುಪುವ ಮುನ್ನ ಹತ್ತಾರು ಸವಾಲುಗಳನ್ನು ಎದುರಿಸಿದೆ. ಈ ವರ್ಷದ ಜನವರಿಯಲ್ಲಿ ಸಂಕ್ರಾಂತಿ ಹಬ್ಬಕ್ಕೆ ಬಿಡುಗಡೆಯಾಗಬೇಕಿದ್ದ ಈ ಚಿತ್ರ, ಸೆನ್ಸಾರ್ ಮಂಡಳಿಯ ತಕರಾರಿನಿಂದಾಗಿ ಮುಂದೂಡಲ್ಪಟ್ಟಿತ್ತು. ಕಾನೂನು ಹೋರಾಟದ ಬಳಿಕ ಜುಲೈನಲ್ಲಿ ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ಸಿಕ್ಕಿದೆ. ದುರದೃಷ್ಟವಶಾತ್, ಕಳೆದ ಏಪ್ರಿಲ್ ತಿಂಗಳಿನಲ್ಲಿ ಈ ಚಿತ್ರದ ಎಚ್‌ಡಿ ಪ್ರಿಂಟ್ ಆನ್‌ಲೈನ್‌ನಲ್ಲಿ ಲೀಕ್ ಆಗಿತ್ತು. ಈ ಸಂಬಂಧ ಪೊಲೀಸರು ಕೆಲವರನ್ನು ಬಂಧಿಸಿದ್ದರು.

ಇದನ್ನೂ ಓದಿ: ಲೀಕ್ ಬಳಿಕ ‘ಜನ ನಾಯಗನ್’ ಚಿತ್ರದಲ್ಲಿ ಭಾರಿ ಬದಲಾವಣೆ: ಪ್ರೇಕ್ಷಕರಿಗೆ ಸಿಗಲಿದೆ ಹೊಸ ಅನುಭವ

ಚಿತ್ರದ ಬಗ್ಗೆ ಒಂದಿಷ್ಟು ಮಾಹಿತಿ:

ಇದು 2023ರ ತೆಲುಗಿನ ಸೂಪರ್ ಹಿಟ್ ಸಿನಿಮಾ ‘ಭಗವಂತ್ ಕೇಸರಿ’ ಚಿತ್ರದ ಭಾಗಶಃ ರಿಮೇಕ್ ಎನ್ನಲಾಗಿದೆ. ರಾಜಕೀಯಕ್ಕೆ ಪ್ರವೇಶಿಸುವ ಮುನ್ನ ವಿಜಯ್ ಒಪ್ಪಿಕೊಂಡಿದ್ದ ಕೊನೆಯ ಸಿನಿಮಾ ಇದಾಗಿದ್ದು, ತಮಿಳುನಾಡು ಸಿಎಂ ಆದ ಬಳಿಕ ರಿಲೀಸ್ ಆಗುತ್ತಿರುವ ಅವರ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಬಿಗ್ ಬಜೆಟ್ ಚಿತ್ರದಲ್ಲಿ ವಿಜಯ್ ಜೊತೆಗೆ ಪೂಜಾ ಹೆಗ್ಡೆ, ಬಾಬಿ ಡಿಯೋಲ್, ಮಮಿತಾ ಬೈಜು, ಗೌತಮ್ ವಾಸುದೇವ್ ಮೆನನ್, ಪ್ರಕಾಶ್ ರಾಜ್ ಹಾಗೂ ಪ್ರಿಯಾಮಣಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:01 pm, Mon, 20 July 26

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ