AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ ಸಿನಿಮಾಗಾಗಿ ಕಾದಿದ್ದ ದಳಪತಿ ವಿಜಯ್ ಅಭಿಮಾನಿಗಳಿಗೆ ದೊಡ್ಡ ಶಾಕ್

ಸದ್ಯದಲ್ಲೇ ‘ಜನ ನಾಯಗನ್’ ಚಿತ್ರ ಬಿಡುಗಡೆ ಆಗಬಹುದು ಎಂದುಕೊಂಡಿದ್ದ ಅಭಿಮಾನಗಳಿಗೆ ಬೇಸರ ಆಗಿದೆ. ದಳಪತಿ ವಿಜಯ್ ಅಭಿನಯದ ಈ ಕೊನೆಯ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹೋಗುತ್ತಲೇ ಇದೆ. ‘ಜನ ನಾಯಗನ್’ ರಿಲೀಸ್ ಡೇಟ್ ಕುರಿತಂತೆ ವಿದೇಶಿ ವಿತರಕರಿಂದ ಒಂದು ಕಹಿ ಸುದ್ದಿ ಕೇಳಿಬಂದಿದೆ.

‘ಜನ ನಾಯಗನ್’ ಸಿನಿಮಾಗಾಗಿ ಕಾದಿದ್ದ ದಳಪತಿ ವಿಜಯ್ ಅಭಿಮಾನಿಗಳಿಗೆ ದೊಡ್ಡ ಶಾಕ್
Thalapathy Vijay
ಮದನ್​ ಕುಮಾರ್​
|

Updated on: Feb 15, 2026 | 8:27 AM

Share

ಖ್ಯಾತ ನಟ ದಳಪತಿ ವಿಜಯ್ (Thalapathy Vijay) ಅವರು ನಟಿಸಿದ ಕೊನೆಯ ಸಿನಿಮಾ ಎಂಬ ಕಾರಣಕ್ಕೆ ‘ಜನ ನಾಯಗನ್’ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಆದರೆ ಈ ಸಿನಿಮಾದ ಬಿಡುಗಡೆಗೆ ಹಲವು ವಿಘ್ನಗಳು ಎದುರಾಗಿವೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಈ ವರ್ಷದ ಆರಂಭದಲ್ಲೇ ‘ಜನ ನಾಯಗನ್’ (Jana Nayagan) ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಚಿತ್ರಕ್ಕೆ ಸೆನ್ಸಾರ್ ಸಮಸ್ಯೆ ಎದುರಾಯಿತು. ಬಳಿಕ ಈ ವಿವಾದ ಕೋರ್ಟ್ ಮೆಟ್ಟಿಲು ಏರಿತು. ಇದರಿಂದ ರಿಲೀಸ್ ದಿನಾಂಕ ಮುಂದೂಡಿಕೆ ಆಗುತ್ತಲೇ ಹೋಯಿತು. ಈಗ ವಿದೇಶಿ ವಿತರಕರಿಂದ ಒಂದು ಶಾಕಿಂಗ್ ಅಪ್​ಡೇಟ್ ಸಿಕ್ಕಿದೆ.

ಅಮೆರಿಕದಲ್ಲಿ ‘ಜನ ನಾಯಗನ್’ ಸಿನಿಮಾವನ್ನು ವಿತರಣೆ ಮಾಡುತ್ತಿರುವ ‘ಯಾರ್ಕ್ ಸಿನಿಮಾಸ್’ ಸಂಸ್ಥೆಯು ಒಂದು ಪ್ರಕಟಣೆ ಬಿಡುಗಡೆ ಮಾಡಿದೆ. ಅದರಲ್ಲಿ ಅಭಿಮಾನಿಗಳಿಗೆ ಬೇಸರ ಆಗುವ ಸುದ್ದಿ ಇದೆ. ಏಪ್ರಿಲ್ 30ರ ತನಕ ಈ ಸಿನಿಮಾ ರಿಲೀಸ್ ಆಗುವುದಿಲ್ಲ ಎಂದು ತಿಳಿಸಲಾಗಿದೆ. ಅಂದರೆ, ಈ ಸಿನಿಮಾ ನೋಡಲು ಅಭಿಮಾನಿಗಳು ಇನ್ನೂ ಹಲವು ದಿನ ಕಾಯಬೇಕು.

‘ಜನ ನಾಯಗನ್ ಸಿನಿಮಾ ಏಪ್ರಿಲ್ 30ಕ್ಕಿಂತ ಮೊದಲು ರಿಲೀಸ್ ಆಗಲ್ಲ ಎಂಬುದನ್ನು ದಯವಿಟ್ಟು ಗಮನಿಸಿ. ಈಗಾಗಲೇ ನೀವು ಖರೀದಿಸಿದ ಟಿಕೆಟ್​ಗಳಿಗೆ ಇನ್ನೂ ಹಣ ಮರುಪಾವತಿ ಆಗದೇ ಇದ್ದಲ್ಲಿ ಆದಷ್ಟು ಬೇಗ ನಮ್ಮ ಚಿತ್ರಮಂದಿರಗಳಿಗೆ ಬಂದು ಪಡೆದುಕೊಳ್ಳಿ. ನಿಮ್ಮ ತಾಳ್ಮೆಗಾಗಿ, ಬೆಂಬೆಲಕ್ಕಾಗಿ, ಅರ್ಥ ಮಾಡಿಕೊಂಡಿದ್ದಕ್ಕಾಗಿ ಧನ್ಯವಾದಗಳು’ ಎಂದು ‘ಯಾರ್ಕ್ ಸಿನಿಮಾಸ್’ ಮ್ಯಾನೇಜ್​ಮೆಂಟ್ ತಿಳಿಸಿದೆ.

ಸದ್ಯದಲ್ಲೇ ತಮಿಳುನಾಡಿನಲ್ಲಿ ಚುನಾವಣೆ ನಡೆಯಲಿದೆ. ದಳಪತಿ ವಿಜಯ್ ಅವರು ಕೂಡ ತಮ್ಮದೇ ಪಕ್ಷ ಕಟ್ಟಿಕೊಂಡಿದ್ದಾರೆ. ‘ಜನ ನಾಯಗನ್’ ಸಿನಿಮಾದಲ್ಲಿ ರಾಜಕೀಯದ ಕಥಾಹಂದರ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣೆ ಮುಗಿಯುವ ತನಕ ‘ಜನ ನಾಯಗನ್’ ಸಿನಿಮಾದ ಬಿಡುಗಡೆಗೆ ಅವಕಾಶ ಸಿಗುವುದು ಕಷ್ಟ ಎಂಬ ಪರಿಸ್ಥಿತಿ ನಿರ್ಮಾಣ ಆಗಿದೆ.

ಇದನ್ನೂ ಓದಿ: ಮದುವೆ ಫಂಕ್ಷನ್​​ಗೆ ಅಟೆಂಡ್ ಆಗಿದ್ದಕ್ಕೂ ಟೀಕೆ ಎದುರಿಸಿದ ದಳಪತಿ ವಿಜಯ್

‘ಜನ ನಾಯಗನ್’ ಸಿನಿಮಾಗೆ ಕನ್ನಡದ ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣ ಸಂಸ್ಥೆ ಬಂಡವಾಳ ಹೂಡಿದೆ. ಚಿತ್ರದ ರಿಲೀಸ್ ದಿನಾಂಕದ ಬಗ್ಗೆ ನಿರ್ಮಾಪಕರಿಂದಲೇ ಅಧಿಕೃತ ಮಾಹಿತಿ ಹೊರಬರಲಿ ಎಂದು ದಳಪತಿ ವಿಜಯ್ ಫ್ಯಾನ್ಸ್ ಕಾಯುತ್ತಿದ್ದಾರೆ. ಈ ಸಿನಿಮಾದಲ್ಲಿ ಪೂಜಾ ಹೆಗ್ಡೆ ಅವರು ನಾಯಕಿಯಾಗಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ