ದಳಪತಿ ವಿಜಯ್ ಕೊನೆಯ ಚಿತ್ರಕ್ಕೆ ಸಂಭಾವನೆ ಕೇಳಿ ದೂರವೇ ಸರಿದ ನಿರ್ಮಾಪಕ

ವಿಜಯ್ ನಟಿಸುತ್ತಿರುವ ಎರಡು ಚಿತ್ರಗಳಲ್ಲಿ ಮೊದಲನೆಯದು ‘ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್'. ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾ ಸೆಪ್ಟೆಂಬರ್ 5 ರಂದು ಬಿಡುಗಡೆಯಾಗಲಿದೆ. ಅವರ ಎರಡನೇ ಚಿತ್ರದ ಶೀರ್ಷಿಕೆ ಇನ್ನೂ ಅಂತಿಮಗೊಂಡಿಲ್ಲ. ಕೆಲವು ವರದಿಗಳ ಪ್ರಕಾರ ಅವರ ಕೊನೆಯ ಚಿತ್ರಕ್ಕೆ ನಿರ್ಮಾಪಕರೇ ಸಿಗುತ್ತಿಲ್ಲವಂತೆ.

ದಳಪತಿ ವಿಜಯ್ ಕೊನೆಯ ಚಿತ್ರಕ್ಕೆ ಸಂಭಾವನೆ ಕೇಳಿ ದೂರವೇ ಸರಿದ ನಿರ್ಮಾಪಕ
ವಿಜಯ್
Follow us
| Updated By: ರಾಜೇಶ್ ದುಗ್ಗುಮನೆ

Updated on:Jun 03, 2024 | 2:30 PM

ನಟ ವಿಜಯ್ ಅವರು ಸಿನಿಮಾ ರಂಗದಲ್ಲಿ ಕೊನೆಯ ದಿನಗಳನ್ನು ಕಳೆಯುತ್ತಿದ್ದಾರೆ. ಸದ್ಯ ಅವರು ‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ (GOAT) ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಫಾರೆನ್​ನಲ್ಲಿ ನಡೆಯುತ್ತಿದೆ. ಅವರು ಇತ್ತೀಚೆಗೆ ರಾಜಕೀಯ ಸೇರೋ ಘೋಷಣೆ ಮಾಡಿದ್ದಾರೆ. ಅವರು ರಾಜಕೀಯ ಪಕ್ಷ ಕೂಡ ಅನೌನ್ಸ್. ಅವರು ನಟನೆಯನ್ನೂ ಬಿಡುವುದಾಗಿ ಹೇಳಿದ್ದಾರೆ. ಆದರೆ, ಚಿತ್ರರಂಗದಿಂದ ಹೊರಬರುವ ಮುನ್ನ ಅಭಿಮಾನಿಗಳಿಗೆ ಎರಡು ಸಿನಿಮಾಗಳನ್ನು ಉಡುಗೊರೆಯಾಗಿ ಅವರು ನೀಡಲಿದ್ದಾರೆ. ಆದರೆ, ಈಗ ಅವರ ಕೊನೆಯ ಸಿನಿಮಾ ಸಂಕಷ್ಟಕ್ಕೆ ಸಿಲುಕಿದೆಯಂತೆ. ಅವರ ಚಿತ್ರಕ್ಕೆ ನಿರ್ಮಾಪಕರು ಸಿಗುತ್ತಿಲ್ಲ ಎನ್ನಲಾಗುತ್ತಿದೆ.

ವಿಜಯ್ ನಟಿಸುತ್ತಿರುವ ಎರಡು ಚಿತ್ರಗಳಲ್ಲಿ ಮೊದಲನೆಯದು ‘ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್’. ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾ ಸೆಪ್ಟೆಂಬರ್ 5 ರಂದು ಬಿಡುಗಡೆಯಾಗಲಿದೆ. ಅವರ ಎರಡನೇ ಚಿತ್ರದ ಶೀರ್ಷಿಕೆ ಇನ್ನೂ ಅಂತಿಮಗೊಂಡಿಲ್ಲ. ಸದ್ಯ ಆ ಯೋಜನೆಗೆ ‘ದಳಪತಿ 69’ ಎಂದು ಹೆಸರಿಡಲಾಗಿದೆ. ಈ ಚಿತ್ರಕ್ಕೆ ಅಟ್ಲಿ ನಿರ್ದೇಶನ ಮಾಡುತ್ತಾರೆ ಎನ್ನಲಾಗಿದೆ. ಕೆಲವು ವರದಿಗಳ ಪ್ರಕಾರ ಅವರ ಕೊನೆಯ ಚಿತ್ರಕ್ಕೆ ನಿರ್ಮಾಪಕರೇ ಸಿಗುತ್ತಿಲ್ಲವಂತೆ.

ವಿಜಯ್ ಚಿತ್ರಕ್ಕೆ ನಿರ್ಮಾಪಕರು ಯಾಕೆ ಸಿಗುತ್ತಿಲ್ಲ?

ವಿಜಯ್ ಅವರ 69ನೇ ಸಿನಿಮಾನ ಈ ಹಿಂದೆ ‘ಆರ್‌ಆರ್‌ಆರ್’ ಚಿತ್ರದ ಡಿವಿವಿ ದಾನಯ್ಯ ನಿರ್ಮಿಸಲಿದ್ದಾರೆ ಎಂದು ವರದಿಯಾಗಿತ್ತು. ಆದರೆ ಈಗ ಅವರು ಹಿಂದೆ ಸರಿದಿದ್ದಾರೆ. ದೊಡ್ಡ ಬಜೆಟ್ ಚಿತ್ರಗಳನ್ನು ನಿರ್ಮಾಣ ಮಾಡಲು ದಾನಯ್ಯ ಸಖತ್ ಫೇಮಸ್. ಆದಾಗ್ಯೂ ಅವರು ಈ ಸಿನಿಮಾ ನಿರ್ಮಾಣ ಮಾಡಲು ಆಸಕ್ತಿ ತೋರಿಸುತ್ತಿಲ್ಲ. ವಿಜಯ್ ಸಂಭಾವನೆಯೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ.

ಸದ್ಯ ವಿಜಯ್ ಪ್ರತಿ ಚಿತ್ರಕ್ಕೆ 200 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ, ಆಗ ಅವರು 250 ಕೋಟಿ ರೂಪಾಯಿ ಸಂಭಾವನೆ ಪಡೆಯುವುದರ ಜೊತೆಗೆ ಎಚ್. ವಿನೋದ್ ಅವರನ್ನು ನಿರ್ದೇಶಕರನ್ನಾಗಿ ಸೇರಿಸಿಕೊಳ್ಳಲು ಸಲಹೆ ನೀಡಿದ್ದಾರೆ. ಆದರೆ, ವಿನೋದ್​ನ ನಂಬಿ ಇಷ್ಟು ದೊಡ್ಡ ಹಣ ಹೂಡಲು ನಿರ್ಮಾಪಕರು ರೆಡಿ ಇಲ್ಲವಂತೆ.

ಇದನ್ನೂ ಓದಿ: ‘GOAT’ ಸಿನಿಮಾ ಅಭಿಮಾನಿಗಳಿಗೆ ದಳಪತಿ ವಿಜಯ್ ಸರ್​ಪ್ರೈಸ್; ಎರಡು ಹಾಡು ಹಾಡಿದ ನಟ

ಸದ್ಯ ದಕ್ಷಿಣ ಭಾರತದಲ್ಲಿ ಈ ಬಗ್ಗೆ ಚರ್ಚೆ ಜೋರಾಗಿದೆ. ವಿಜಯ್ ಅವರು ತಮ್ಮ ಸಂಭಾವನೆಯನ್ನು ತಗ್ಗಿಸಿಕೊಳ್ಳುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ. ವಿಜಯ್ ಸಂಭಾವನೆಗೆ 250 ಕೋಟಿ ರೂಪಾಯಿ ಖರ್ಚಾದರೆ ಮುಂದೇನು ಎನ್ನುವ ಪ್ರಶ್ನೆ ಮೂಡಿದೆ.

ವಿಜಯ್ ನಟನೆ ಬಿಡಲು ಕಾರಣವೇನು?

ವಿಜಯ್ ಈಗ ಸಂಪೂರ್ಣವಾಗಿ ರಾಜಕೀಯಕ್ಕೆ ಸಮರ್ಪಿಸಿಕೊಳ್ಳಲು ಬಯಸುತ್ತಿರುವ ಕಾರಣ ನಟನೆಯನ್ನು ಬಿಡುತ್ತಿದ್ದಾರೆ. 2026ರಲ್ಲಿ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯತ್ತ ಗಮನ ಹರಿಸಲು ಬಯಸಿದ್ದಾರೆ. ತಾವು ಹುಟ್ಟು ಹಾಕಿರುವ ಪಕ್ಷಕ್ಕೆ ‘ತಮಿಳಗ ವೆಟ್ರಿ ಕಳಗಂ’ ಎಂದು ಹೆಸರಿಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:17 pm, Mon, 3 June 24

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ