AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

400 ಜನರಿಗೆ ಚಿನ್ನದ ಉಂಗುರ ಉಡುಗೊರೆ ನೀಡಿದ್ದರು ದಳಪತಿ ವಿಜಯ್

Thalapathy Vijay movie: ವಿಜಯ್ ರಾಜಕೀಯ ಪಕ್ಷ ಸ್ಥಾಪಿಸಿ ಎರಡೇ ವರ್ಷಗಳಾಗಿದ್ದರೂ, ಅವರು ಸಾಮಾಜಿಕ ಕಾರ್ಯವನ್ನು ಎರಡು ದಶಕದಿಂದಲೂ ಮಾಡುತ್ತಲೇ ಬಂದಿದ್ದಾರೆ. ಅದರಲ್ಲೂ ಉದಾರವಾಗಿ ದಾನಗಳನ್ನು ಮಾಡುತ್ತಲೇ ಇರುತ್ತಾರೆ. ಹಿಂದೊಮ್ಮೆ ಒಂದೇ ಬಾರಿಗೆ 400 ಮಂದಿಗೆ ಚಿನ್ನದ ಉಂಗುರಗಳನ್ನು ಉಡುಗೊರೆಯಾಗಿ ನೀಡಿದ್ದರು ವಿಜಯ್.

400 ಜನರಿಗೆ ಚಿನ್ನದ ಉಂಗುರ ಉಡುಗೊರೆ ನೀಡಿದ್ದರು ದಳಪತಿ ವಿಜಯ್
Thalapathy Vijay
ಮಂಜುನಾಥ ಸಿ.
|

Updated on: May 10, 2026 | 9:48 PM

Share

ದಳಪತಿ ವಿಜಯ್ (Thalapathy Vijay) ಈಗ ತಮಿಳುನಾಡಿನ ಸಿಎಂ. ಮೊದಲ ರಾಜಕೀಯ ಪ್ರಯತ್ನದಲ್ಲಿಯೇ ಯಶಸ್ವಿಯಾಗಿರುವ ವಿಜಯ್ ಇಂದು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಜಯ್ ರಾಜಕೀಯ ಪಕ್ಷ ಸ್ಥಾಪಿಸಿ ಎರಡೇ ವರ್ಷಗಳಾಗಿದ್ದರೂ, ಅವರು ಸಾಮಾಜಿಕ ಕಾರ್ಯವನ್ನು ಎರಡು ದಶಕದಿಂದಲೂ ಮಾಡುತ್ತಲೇ ಬಂದಿದ್ದಾರೆ. ಅದರಲ್ಲೂ ಉದಾರವಾಗಿ ದಾನಗಳನ್ನು ಮಾಡುತ್ತಲೇ ಇರುತ್ತಾರೆ. ಹಿಂದೊಮ್ಮೆ ಒಂದೇ ಬಾರಿಗೆ 400 ಮಂದಿಗೆ ಚಿನ್ನದ ಉಂಗುರಗಳನ್ನು ಉಡುಗೊರೆಯಾಗಿ ನೀಡಿದ್ದರು ವಿಜಯ್.

ವಿಜಯ್ ಅವರು ವಿಶೇಷ ಸಂದರ್ಭಗಳಲ್ಲಿ ಚಿನ್ನದ ಆಭರಣಗಳನ್ನು ನೀಡುತ್ತಾರೆ. ತಮ್ಮ ಹುಟ್ಟಿದ ದಿನದಂದು ಸರ್ಕಾರಿ ಆಸ್ಪತ್ರೆಯಲ್ಲಿ ಹುಟ್ಟಿದ ಹೆಣ್ಣು ಮಕ್ಕಳಿಗೆ ಚಿನ್ನದ ಉಂಗುರಗಳನ್ನು ಕೆಲ ವರ್ಷ ನೀಡಿದ್ದರು. ತಮ್ಮ ಅಭಿಮಾನಿ ಸಂಘದ ಪ್ರಮುಖರ ಹುಟ್ಟುಹಬ್ಬಗಳಿಗೆ ಚಿನ್ನದ ಆಭರಣಗಳನ್ನು ಅವರು ನೀಡುತ್ತಿದ್ದರು. ಆದರೆ ಒಮ್ಮೆ ಏಕಕಾಲಕ್ಕೆ ಒಟ್ಟಿಗೆ 400 ಮಂದಿಗೆ ಚಿನ್ನದ ಉಂಗುರ ನೀಡಿದ್ದರು.

ಇದನ್ನೂ ಓದಿ:ವಿಜಯ್ ಬಗ್ಗೆ ಸ್ಟಾಲಿನ್ ಮಾತು, ವೈರಲ್ ಆಗುತ್ತಿದೆ ಹಳೆ ವಿಡಿಯೋ

ವಿಜಯ್ ನಟಿಸಿದ್ದ ‘ಬಿಗಿಲ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಯಶಸ್ಸಾಗಿತ್ತು. ಆ ಸಂದರ್ಭದಲ್ಲಿ ವಿಜಯ್ ಅವರು ‘ಬಿಗಿಲ್’ ಹೆಸರು ಅಚ್ಚು ಹಾಕಿಸಿ, ಸಿನಿಮಾಕ್ಕಾಗಿ ಕೆಲಸ ಮಾಡಿದ ಎಲ್ಲ ತಂತ್ರಜ್ಞರು, ನಟ-ನಟಿಯರು ಮತ್ತು ಇತರೆ ಸಿಬ್ಬಂದಿಗಳಿಗೆ ಚಿನ್ನದ ಉಂಗುರ ಕೊಟ್ಟಿದ್ದರು. ಸಾಮಾನ್ಯ ಲೈಟ್ ಬಾಯ್ ಇಂದ ಹಿಡಿದು ಎಲ್ಲರಿಗೂ ಚಿನ್ನದ ಉಂಗುರಗಳನ್ನು ವಿಜಯ್ ಅವರು ಕೊಟ್ಟಿದ್ದರು. ಆ ಚಿನ್ನದ ಉಂಗುರಗಳ ಚಿತ್ರಗಳನ್ನು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಆಗ ಹಂಚಿಕೊಂಡಿದ್ದರು.

ಈಗ ವಿಜಯ್ ಸಿಎಂ ಆಗಿದ್ದಾರೆ. ಚುನಾವಣೆಗೆ ಮುಂಚೆ ಅವರ ಟಿವಿಕೆ ಪಕ್ಷದಿಂದ ಹೊರತಂದಿದ್ದ ಪ್ರಣಾಳಿಕೆಯಲ್ಲೂ ಸಹ ಅವರು ಮಹಿಳೆಯರಿಗೆ ಚಿನ್ನದ ಆಭರಣಗಳನ್ನು ನೀಡುವ ಭರವಸೆಯನ್ನು ನೀಡಿದ್ದಾರೆ. ಮದುವೆ ಆಗುವ ಪ್ರತಿ ಮಹಿಳೆಗೆ 8 ಗ್ರಾಂ ಚಿನ್ನವನ್ನು ನೀಡುವುದಾಗಿ ವಿಜಯ್ ಅವರು ಭರವಸೆ ನೀಡಿದ್ದಾರೆ. ಇದರ ಜೊತೆಗೆ ವರ್ಷಕ್ಕೆ ಆರು ಉಚಿತ ಸಿಲಿಂಡರ್, ತಿಂಗಳಿಗೆ 2500 ರೂಪಾಯಿ ಹಣ. ಮಹಿಳಾ ಸುರಕ್ಷತೆಗಾಗಿ ವಿಶೇಷ ದಳ ಹೀಗೆ ಹಲವು ಭರವಸೆಗಳನ್ನು ಅವರು ನೀಡಿದ್ದಾರೆ. ಇದೆಲ್ಲವನ್ನೂ ಈಡೇರಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​