AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಹಾರಾಜ’ ಸಿನಿಮಾ ನಿರ್ದೇಶಕನ ಭೇಟಿಯಾದ ದಳಪತಿ ವಿಜಯ್

‘ಮಹಾರಾಜ’ ತಮಿಳು ಸಿನಿಮಾ ಕೆಲವೇ ಕೋಟಿಗಳಲ್ಲಿ ನಿರ್ಮಾಣವಾಗಿ ಈಗ 100 ಕೋಟಿಗೂ ಹೆಚ್ಚು ಹಣ ಗಳಿಸಿದೆ. ಒಟಿಟಿಯಲ್ಲಿಯೂ ಬಿಡುಗಡೆ ಆಗಿ ಕೋಟ್ಯಂತರ ಜನರಿಂದ ವೀಕ್ಷಿಸಲ್ಪಟ್ಟಿದೆ. ಸಿನಿಮಾ ವೀಕ್ಷಿಸಿದ ದಳಪತಿ ವಿಜಯ್, ನಿರ್ದೇಶಕರನ್ನು ಮನೆಗೆ ಆಹ್ವಾನಿಸಿ ಅಭಿನಂದನೆ ಸಲ್ಲಿಸಿದ್ದಾರೆ.

‘ಮಹಾರಾಜ’ ಸಿನಿಮಾ ನಿರ್ದೇಶಕನ ಭೇಟಿಯಾದ ದಳಪತಿ ವಿಜಯ್
ಮಹಾರಾಜ ಸಿನಿಮಾ
ಮಂಜುನಾಥ ಸಿ.
|

Updated on: Jul 19, 2024 | 10:45 AM

Share

ಕಡಿಮೆ ಬಜೆಟ್​ನಲ್ಲಿ ನಿರ್ಮಾಣವಾಗಿ ತನ್ನ ಭಿನ್ನ ಕತೆ, ನಿರೂಪಣೆ ಮತ್ತು ಪಾತ್ರ ಪೋಷಣೆಯಿಂದಲೇ ಗಮನ ಸೆಳೆದಿದೆ ಇತ್ತೀಚೆಗಿನ ಸೂಪರ್ ಹಿಟ್ ತಮಿಳು ಸಿನಿಮಾ ‘ಮಹಾರಾಜ’. ಸಿನಿಮಾದಲ್ಲಿ ಕಮರ್ಷಿಯಲ್ ಕತೆಯ ಜೊತೆಗೆ ಹೆಣೆದಿರುವ ಸಾಮಾಜಿಕ ಅಂಶಗಳು ಸಿನಿಮಾವನ್ನು ಜನರಿಗೆ ಹೆಚ್ಚು ಹತ್ತಿರವಾಗಿಸಿವೆ. ಕೇವಲ 20 ಕೋಟಿ ಬಜೆಟ್​ನಲ್ಲಿ ನಿರ್ಮಾಣವಾಗಿರುವ ಈ ಸಿನಿಮಾ ಈಗಾಗಲೇ 100 ಕೋಟಿ ಕ್ಲಬ್ ಸೇರಿ ಆಗಿದೆ. ಒಟಿಟಿಯಲ್ಲಿ ಸಿನಿಮಾ ಬಿಡುಗಡೆ ಆಗಿದ್ದರೂ ಸಹ ಚೆನ್ನೈ ಸೇರಿದಂತೆ ಇನ್ನೂ ಕೆಲವು ನಗರಗಳಲ್ಲಿ ಅದ್ಧೂರಿ ಪ್ರದರ್ಶನ ಕಾಣುತ್ತಿದೆ.

‘ಮಹಾರಾಜ’ ಸಿನಿಮಾ ನೋಡಿ ಮೆಚ್ಚಿಕೊಂಡಿರುವ ದಳಪತಿ ವಿಜಯ್, ಸಿನಿಮಾದ ನಿರ್ದೇಶಕ ನಿತಿನಲ್ ಸಾಮಿನಾಥನ್ ಅವರನ್ನು ಮನೆಗೆ ಕರೆಸಿಕೊಂಡು ಅಭಿನಂದನೆ ಸಲ್ಲಿಸಿದ್ದಾರೆ. ನಿತಿನ್ ಅನ್ನು ಮನೆಗೆ ಆಹ್ವಾನಿಸಿ ಭೇಟಿಯಾಗಿರುವ ವಿಜಯ್, ನಿರ್ದೇಶಕನೊಟ್ಟಿಗೆ ಸಿನಿಮಾದ ಬಗ್ಗೆ ಹಲವು ವಿಷಯಗಳನ್ನು ಮಾತನಾಡಿದ್ದಾರೆ ಎನ್ನಲಾಗಿದೆ. ಜೊತೆಗೆ ಅತ್ಯುತ್ತಮ ಸಿನಿಮಾ ನೀಡಿರುವಕ್ಕೆ ಮೆಚ್ಚುಗೆಯನ್ನು ಸಹ ಸಲ್ಲಿಸಿದ್ದಾರಂತೆ.

ಇದನ್ನೂ ಓದಿ:‘ಆಗ್ತಿರೋದು ನೋಡಿದಾಗ ಬೇಸರ ಶುರುವಾಯ್ತು’: ದರ್ಶನ್​ ಕೇಸ್​ ಬಗ್ಗೆ ವಿಜಯ್​ ರಾಘವೇಂದ್ರ ಮಾತು

ವಿಜಯ್ ಅವರನ್ನು ಭೇಟಿಯಾಗಿರುವ ಚಿತ್ರವನ್ನು ಹಂಚಿಕೊಂಡಿರುವ ನಿರ್ದೇಶಕ ನಿತಿನಲ್ ಸಾಮಿನಾಥನ್, ‘ಈ ಅತ್ಯುತ್ತಮ ಭೇಟಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗುವ ಅವಕಾಶ ಸಿಕ್ಕಿದ್ದಕ್ಕೆ ನಾನು ಕೃತಜ್ಞನಾಗಿದ್ದೇನೆ. ‘ಮಹಾರಾಜ’ ಸಿನಿಮಾ ಬಗ್ಗೆ ನೀವು ಹೇಳಿದ ವಿವರಗಗಳು ನನ್ನನ್ನು ಚಕಿತಗೊಳಿಸಿದವು, ಸಿನಿಮಾ ಬಗ್ಗೆ ನಿಮಗಿರುವ ಸೂಕ್ಷ್ಮ ದೃಷ್ಟಿ ಚಕಿತಗೊಳಿಸಿತು. ನಿಮ್ಮಿಂದ ದೊರೆತ ಅಭಿನಂದನೆ ನನಗೆ ಒಂದು ದೊಡ್ಡ ಮೆಚ್ಚುಗೆಯಾಗಿದೆ. ನಿಮ್ಮ ಪ್ರೀತಿ, ಬೆಂಬಲ ಮತ್ತು ಪ್ರೋತ್ಸಾಹಕ್ಕೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಲವ್ ಯು ಅಣ್ಣಾ. ನನ್ನ ನಿರ್ಮಾಪಕರಿಗೂ ನಾನು ಧನ್ಯವಾದ ಹೇಳುತ್ತೇನೆ’ ಎಂದಿದ್ದಾರೆ ನಿತಿನಲ್.

‘ಮಹಾರಾಜ’ ಸಿನಿಮಾದಲ್ಲಿ ವಿಜಯ್ ಸೇತುಪತಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಒಬ್ಬ ಕ್ಷೌರಿಕ, ಆತನ ಮಗಳು ಹಾಗೂ ಒಬ್ಬ ದರೋಡೆಕೋರನ ನಡುವೆ ನಡೆಯುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ವಿಲನ್ ಪಾತ್ರದಲ್ಲಿ ಬಾಲಿವುಡ್​ನ ಜನಪ್ರಿಯ ನಿರ್ದೇಶಕ ಅನುರಾಗ್ ಕಶ್ಯಪ್ ನಟಿಸಿದ್ದಾರೆ. ಸಿನಿಮಾಕ್ಕೆ ಸಂಗೀತ ನೀಡಿರುವುದು ಕನ್ನಡಿಗ ಅಜನೀಶ್ ಲೋಕನಾಥ್, ನಿರ್ಮಾಣ ಮಾಡಿರುವುದು ಜಗದೀಶ್ ಪಳನಿಸ್ವಾಮಿ, ಸುದಾನ್ ಸುಂದರಮ್. ಸಿನಿಮಾ ಇತ್ತೀಚೆಗಷ್ಟೆ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್