AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thalapathy Vijay: ‘ವಾರಿಸು’ ಸಿನಿಮಾದಲ್ಲಿ ನಟಿಸಲು 150 ಕೋಟಿ ರೂಪಾಯಿ ಸಂಭಾವನೆ ಪಡೆದ ದಳಪತಿ ವಿಜಯ್​

Thalapathy Vijay Salary | Varisu Movie: ದಳಪತಿ ವಿಜಯ್​ ಅವರು ‘ವಾರಿಸು’ ಚಿತ್ರಕ್ಕೆ ಪಡೆದ ಸಂಭಾವನೆ ಮೊತ್ತ ಕೇಳಿ ಬಾಲಿವುಡ್​ ಮಂದಿಗೂ ಅಚ್ಚರಿ ಆಗಿದೆ. ಈ ಸಿನಿಮಾ ಮೊದಲ ದಿನ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

Thalapathy Vijay: ‘ವಾರಿಸು’ ಸಿನಿಮಾದಲ್ಲಿ ನಟಿಸಲು 150 ಕೋಟಿ ರೂಪಾಯಿ ಸಂಭಾವನೆ ಪಡೆದ ದಳಪತಿ ವಿಜಯ್​
ದಳಪತಿ ವಿಜಯ್
Follow us
TV9 Web
| Updated By: ಮದನ್​ ಕುಮಾರ್​

Updated on: Jan 11, 2023 | 7:30 AM

ದಕ್ಷಿಣ ಭಾರತದ ಖ್ಯಾತ ನಟ ದಳಪತಿ ವಿಜಯ್​ (Thalapathy Vijay) ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಕೇವಲ ತಮಿಳುನಾಡಿಗೆ ಮಾತ್ರ ಅವರ ಜನಪ್ರಿಯತೆ ಸೀಮಿತವಾಗಿಲ್ಲ. ಅವರ ಚಿತ್ರಗಳು ಹಿಂದಿಗೂ ಡಬ್​ ಆಗಿ ಉತ್ತರ ಭಾರತದ ಜನರನ್ನು ರಂಜಿಸಿವೆ. ಈಗ ದಳಪತಿ ವಿಜಯ್​ ನಟನೆಯ ‘ವಾರಿಸು’ ಸಿನಿಮಾ (Varisu Movie) ಬಿಡುಗಡೆ ಆಗಿದೆ. ಇಂದು (ಜ.11) ಅದ್ದೂರಿಯಾಗಿ ರಿಲೀಸ್​ ಮಾಡಲಾಗಿದೆ. ಅಭಿಮಾನಿಗಳು ಭರ್ಜರಿಯಾಗಿ ಈ ಚಿತ್ರವನ್ನು ಸ್ವಾಗತಿಸಿದ್ದಾರೆ. ‘ವಾರಿಸು’ ಚಿತ್ರದಲ್ಲಿನ ನಟನೆಗೆ ದಳಪತಿ ವಿಜಯ್​ ಅವರು ಬರೋಬ್ಬರಿ 150 ಕೋಟಿ ರೂಪಾಯಿ ಸಂಭಾವನೆ (Thalapathy Vijay Remuneration) ಪಡೆದುಕೊಂಡಿದ್ದಾರೆ ಎಂದು ‘ಪಿಂಕ್​ ವಿಲ್ಲಾ’ ವರದಿ ಮಾಡಿದೆ. ಈ ವಿಷಯ ಕೇಳಿ ಬಾಲಿವುಡ್​ ಮಂದಿ ಕೂಡ ಬೆರಗಾಗಿದ್ದಾರೆ.

ದಳಪತಿ ವಿಜಯ್​ ಅವರ ಸಿನಿಮಾಗಳಿಗೆ ಬಂಡವಾಳ ಹೂಡಿದರೆ ಮಿನಿಮಮ್​​ ಲಾಭ ಗ್ಯಾರಂಟಿ ಎಂಬ ನಂಬಿಕೆ ನಿರ್ಮಾಪಕರ ವಲಯದಲ್ಲಿ ಇದೆ. ಹಾಗಾಗಿ ವಿಜಯ್​ ಅವರು ಕೇಳಿದಷ್ಟು ಸಂಭಾವನೆಯನ್ನು ನೀಡಲು ನಿರ್ಮಾಪಕರು ಮುಂದೆ ಬರುತ್ತಾರೆ. ‘ವಾರಿಸು’ ಚಿತ್ರದ ವಿಚಾರದಲ್ಲೂ ಹಾಗೆಯೇ ಆಗಿದೆ. ಈ ಸಿನಿಮಾದಲ್ಲಿ ನಟಿಸಿದ್ದಕ್ಕಾಗಿ ವಿಜಯ್​ ಅವರು 150 ಕೋಟಿ ರೂಪಾಯಿ ಜೇಬಿಗೆ ಇಳಿಸಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Thalapathy Vijay: ದಳಪತಿ ವಿಜಯ್​ ಕುಟುಂಬದಲ್ಲಿ ಕಲಹ? ‘ವಾರಿಸು’ ರಿಲೀಸ್​ ಸಮಯದಲ್ಲಿ ಹಬ್ಬಿದೆ ಡಿವೋರ್ಸ್​ ಸುದ್ದಿ

ಇದನ್ನೂ ಓದಿ
Image
Varisu Trailer: ಧೂಳೆಬ್ಬಿಸುತ್ತಿದೆ ‘ವಾರಿಸು’ ಸಿನಿಮಾ ಟ್ರೇಲರ್​; ಫ್ಯಾಮಿಲಿ ಪ್ರೇಕ್ಷಕರ ಮೇಲೆ ಕಣ್ಣಿಟ್ಟ ದಳಪತಿ ವಿಜಯ್​
Image
Katrina Kaif: ‘ದಳಪತಿ’ ವಿಜಯ್​ ಚಿತ್ರದ ಹಾಡಿಗೆ ಶಾಲಾ ಮಕ್ಕಳ ಜತೆ ಕತ್ರಿನಾ ಕೈಫ್ ಡ್ಯಾನ್ಸ್​; ಇಲ್ಲಿದೆ ವಿಡಿಯೋ
Image
‘ಕೆಜಿಎಫ್​ 2’ ಎದುರು ‘ಬೀಸ್ಟ್​’ ಸೋತರೂ ಪಾರ್ಟಿ ಮಾಡಿದ ದಳಪತಿ ವಿಜಯ್; ನಿರ್ದೇಶಕ ಹೇಳಿದ್ದೇನು?
Image
‘ಕೆಜಿಎಫ್​ 2’ ಎದುರು ‘ಬೀಸ್ಟ್​’ಗೆ ಹಿನ್ನಡೆ; ಚಿತ್ರರಂಗಕ್ಕೆ ದಳಪತಿ ವಿಜಯ್​ ಮಗನ ಎಂಟ್ರಿ ಬಗ್ಗೆ ಟಾಕ್​ ಶುರು

2022ರಲ್ಲಿ ದಳಪತಿ ವಿಜಯ್​ ನಟನೆಯ ‘ಬೀಸ್ಟ್​’ ಸಿನಿಮಾ ತೆರೆಕಂಡಿತ್ತು. ಆ ಸಿನಿಮಾ ನೂರು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿತು. ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಎದುರು ‘ಬೀಸ್ಟ್​’ ಬಿಡುಗಡೆ ಆಗಿದ್ದರಿಂದ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಲಿಲ್ಲ. ಸೂಕ್ತ ಸಮಯದಲ್ಲಿ ರಿಲೀಸ್​ ಮಾಡಿದ್ದರೆ ವಿಜಯ್​ ನಟನೆಯ ಆ ಸಿನಿಮಾ ಇನ್ನೂ ಹೆಚ್ಚು ಕಲೆಕ್ಷನ್​ ಮಾಡುತ್ತಿತ್ತು. ಇನ್ನು, ಕಿರುತೆರೆ ಪ್ರಸಾರ ಹಕ್ಕು, ಒಟಿಟಿ ರೈಟ್ಸ್​ ಇತ್ಯಾದಿಯಿಂದಲೂ ಆ ಚಿತ್ರಕ್ಕೆ ಬಹುಕೋಟಿ ರೂಪಾಯಿ ಆದಾಯ ಬಂದಿತ್ತು.

ಇದನ್ನೂ ಓದಿ: Thalapathy Vijay: ‘ವಾರಿಸು’ ಟ್ರೇಲರ್‌ಗೆ ಸಖತ್ ಪ್ರತಿಕ್ರಿಯೆ; ಗೆಲುವಿನ ನಿರೀಕ್ಷೆಯಲ್ಲಿ ದಳಪತಿ ವಿಜಯ್

ಈಗ ‘ವಾರಿಸು’ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಖ್ಯಾತ ನಿರ್ದೇಶಕ ವಂಶಿ ಪೈಡಿಪಲ್ಲಿ ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ತಮಿಳು, ತೆಲುಗು ಮತ್ತು ಹಿಂದಿ ಅವತರಣಿಕೆಯಲ್ಲಿ ಈ ಸಿನಿಮಾ ತೆರೆಕಾಣುತ್ತಿದೆ. ಜನವರಿ 11ರಂದು ತಮಿಳು, 13ರಂದು ಹಿಂದಿ ಹಾಗೂ ಜನವರಿ 14ರಂದು ತೆಲುಗು ವರ್ಷನ್​ ರಿಲೀಸ್​ ಆಗಲಿದೆ.

‘ವಾರಿಸು’ ಸಿನಿಮಾದಲ್ಲಿ ದಳಪತಿ ವಿಜಯ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಅವರಿಗೂ ಈ ಸಿನಿಮಾದ ಗೆಲುವು ಬಹಳ ಮುಖ್ಯ ಆಗಲಿದೆ. ಈ ಚಿತ್ರ ಗೆದ್ದರೆ ತಮಿಳು ಚಿತ್ರರಂಗದಲ್ಲಿ ಅವರು ಡಿಮ್ಯಾಂಡ್​ ಹೆಚ್ಚಾಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ