AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thalapathy Vijay: ‘ವಾರಿಸು’ ಸಿನಿಮಾದಲ್ಲಿ ನಟಿಸಲು 150 ಕೋಟಿ ರೂಪಾಯಿ ಸಂಭಾವನೆ ಪಡೆದ ದಳಪತಿ ವಿಜಯ್​

Thalapathy Vijay Salary | Varisu Movie: ದಳಪತಿ ವಿಜಯ್​ ಅವರು ‘ವಾರಿಸು’ ಚಿತ್ರಕ್ಕೆ ಪಡೆದ ಸಂಭಾವನೆ ಮೊತ್ತ ಕೇಳಿ ಬಾಲಿವುಡ್​ ಮಂದಿಗೂ ಅಚ್ಚರಿ ಆಗಿದೆ. ಈ ಸಿನಿಮಾ ಮೊದಲ ದಿನ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

Thalapathy Vijay: ‘ವಾರಿಸು’ ಸಿನಿಮಾದಲ್ಲಿ ನಟಿಸಲು 150 ಕೋಟಿ ರೂಪಾಯಿ ಸಂಭಾವನೆ ಪಡೆದ ದಳಪತಿ ವಿಜಯ್​
ದಳಪತಿ ವಿಜಯ್
TV9 Web
| Edited By: |

Updated on: Jan 11, 2023 | 7:30 AM

Share

ದಕ್ಷಿಣ ಭಾರತದ ಖ್ಯಾತ ನಟ ದಳಪತಿ ವಿಜಯ್​ (Thalapathy Vijay) ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಕೇವಲ ತಮಿಳುನಾಡಿಗೆ ಮಾತ್ರ ಅವರ ಜನಪ್ರಿಯತೆ ಸೀಮಿತವಾಗಿಲ್ಲ. ಅವರ ಚಿತ್ರಗಳು ಹಿಂದಿಗೂ ಡಬ್​ ಆಗಿ ಉತ್ತರ ಭಾರತದ ಜನರನ್ನು ರಂಜಿಸಿವೆ. ಈಗ ದಳಪತಿ ವಿಜಯ್​ ನಟನೆಯ ‘ವಾರಿಸು’ ಸಿನಿಮಾ (Varisu Movie) ಬಿಡುಗಡೆ ಆಗಿದೆ. ಇಂದು (ಜ.11) ಅದ್ದೂರಿಯಾಗಿ ರಿಲೀಸ್​ ಮಾಡಲಾಗಿದೆ. ಅಭಿಮಾನಿಗಳು ಭರ್ಜರಿಯಾಗಿ ಈ ಚಿತ್ರವನ್ನು ಸ್ವಾಗತಿಸಿದ್ದಾರೆ. ‘ವಾರಿಸು’ ಚಿತ್ರದಲ್ಲಿನ ನಟನೆಗೆ ದಳಪತಿ ವಿಜಯ್​ ಅವರು ಬರೋಬ್ಬರಿ 150 ಕೋಟಿ ರೂಪಾಯಿ ಸಂಭಾವನೆ (Thalapathy Vijay Remuneration) ಪಡೆದುಕೊಂಡಿದ್ದಾರೆ ಎಂದು ‘ಪಿಂಕ್​ ವಿಲ್ಲಾ’ ವರದಿ ಮಾಡಿದೆ. ಈ ವಿಷಯ ಕೇಳಿ ಬಾಲಿವುಡ್​ ಮಂದಿ ಕೂಡ ಬೆರಗಾಗಿದ್ದಾರೆ.

ದಳಪತಿ ವಿಜಯ್​ ಅವರ ಸಿನಿಮಾಗಳಿಗೆ ಬಂಡವಾಳ ಹೂಡಿದರೆ ಮಿನಿಮಮ್​​ ಲಾಭ ಗ್ಯಾರಂಟಿ ಎಂಬ ನಂಬಿಕೆ ನಿರ್ಮಾಪಕರ ವಲಯದಲ್ಲಿ ಇದೆ. ಹಾಗಾಗಿ ವಿಜಯ್​ ಅವರು ಕೇಳಿದಷ್ಟು ಸಂಭಾವನೆಯನ್ನು ನೀಡಲು ನಿರ್ಮಾಪಕರು ಮುಂದೆ ಬರುತ್ತಾರೆ. ‘ವಾರಿಸು’ ಚಿತ್ರದ ವಿಚಾರದಲ್ಲೂ ಹಾಗೆಯೇ ಆಗಿದೆ. ಈ ಸಿನಿಮಾದಲ್ಲಿ ನಟಿಸಿದ್ದಕ್ಕಾಗಿ ವಿಜಯ್​ ಅವರು 150 ಕೋಟಿ ರೂಪಾಯಿ ಜೇಬಿಗೆ ಇಳಿಸಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Thalapathy Vijay: ದಳಪತಿ ವಿಜಯ್​ ಕುಟುಂಬದಲ್ಲಿ ಕಲಹ? ‘ವಾರಿಸು’ ರಿಲೀಸ್​ ಸಮಯದಲ್ಲಿ ಹಬ್ಬಿದೆ ಡಿವೋರ್ಸ್​ ಸುದ್ದಿ

ಇದನ್ನೂ ಓದಿ
Image
Varisu Trailer: ಧೂಳೆಬ್ಬಿಸುತ್ತಿದೆ ‘ವಾರಿಸು’ ಸಿನಿಮಾ ಟ್ರೇಲರ್​; ಫ್ಯಾಮಿಲಿ ಪ್ರೇಕ್ಷಕರ ಮೇಲೆ ಕಣ್ಣಿಟ್ಟ ದಳಪತಿ ವಿಜಯ್​
Image
Katrina Kaif: ‘ದಳಪತಿ’ ವಿಜಯ್​ ಚಿತ್ರದ ಹಾಡಿಗೆ ಶಾಲಾ ಮಕ್ಕಳ ಜತೆ ಕತ್ರಿನಾ ಕೈಫ್ ಡ್ಯಾನ್ಸ್​; ಇಲ್ಲಿದೆ ವಿಡಿಯೋ
Image
‘ಕೆಜಿಎಫ್​ 2’ ಎದುರು ‘ಬೀಸ್ಟ್​’ ಸೋತರೂ ಪಾರ್ಟಿ ಮಾಡಿದ ದಳಪತಿ ವಿಜಯ್; ನಿರ್ದೇಶಕ ಹೇಳಿದ್ದೇನು?
Image
‘ಕೆಜಿಎಫ್​ 2’ ಎದುರು ‘ಬೀಸ್ಟ್​’ಗೆ ಹಿನ್ನಡೆ; ಚಿತ್ರರಂಗಕ್ಕೆ ದಳಪತಿ ವಿಜಯ್​ ಮಗನ ಎಂಟ್ರಿ ಬಗ್ಗೆ ಟಾಕ್​ ಶುರು

2022ರಲ್ಲಿ ದಳಪತಿ ವಿಜಯ್​ ನಟನೆಯ ‘ಬೀಸ್ಟ್​’ ಸಿನಿಮಾ ತೆರೆಕಂಡಿತ್ತು. ಆ ಸಿನಿಮಾ ನೂರು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿತು. ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಎದುರು ‘ಬೀಸ್ಟ್​’ ಬಿಡುಗಡೆ ಆಗಿದ್ದರಿಂದ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಲಿಲ್ಲ. ಸೂಕ್ತ ಸಮಯದಲ್ಲಿ ರಿಲೀಸ್​ ಮಾಡಿದ್ದರೆ ವಿಜಯ್​ ನಟನೆಯ ಆ ಸಿನಿಮಾ ಇನ್ನೂ ಹೆಚ್ಚು ಕಲೆಕ್ಷನ್​ ಮಾಡುತ್ತಿತ್ತು. ಇನ್ನು, ಕಿರುತೆರೆ ಪ್ರಸಾರ ಹಕ್ಕು, ಒಟಿಟಿ ರೈಟ್ಸ್​ ಇತ್ಯಾದಿಯಿಂದಲೂ ಆ ಚಿತ್ರಕ್ಕೆ ಬಹುಕೋಟಿ ರೂಪಾಯಿ ಆದಾಯ ಬಂದಿತ್ತು.

ಇದನ್ನೂ ಓದಿ: Thalapathy Vijay: ‘ವಾರಿಸು’ ಟ್ರೇಲರ್‌ಗೆ ಸಖತ್ ಪ್ರತಿಕ್ರಿಯೆ; ಗೆಲುವಿನ ನಿರೀಕ್ಷೆಯಲ್ಲಿ ದಳಪತಿ ವಿಜಯ್

ಈಗ ‘ವಾರಿಸು’ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಖ್ಯಾತ ನಿರ್ದೇಶಕ ವಂಶಿ ಪೈಡಿಪಲ್ಲಿ ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ತಮಿಳು, ತೆಲುಗು ಮತ್ತು ಹಿಂದಿ ಅವತರಣಿಕೆಯಲ್ಲಿ ಈ ಸಿನಿಮಾ ತೆರೆಕಾಣುತ್ತಿದೆ. ಜನವರಿ 11ರಂದು ತಮಿಳು, 13ರಂದು ಹಿಂದಿ ಹಾಗೂ ಜನವರಿ 14ರಂದು ತೆಲುಗು ವರ್ಷನ್​ ರಿಲೀಸ್​ ಆಗಲಿದೆ.

‘ವಾರಿಸು’ ಸಿನಿಮಾದಲ್ಲಿ ದಳಪತಿ ವಿಜಯ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಅವರಿಗೂ ಈ ಸಿನಿಮಾದ ಗೆಲುವು ಬಹಳ ಮುಖ್ಯ ಆಗಲಿದೆ. ಈ ಚಿತ್ರ ಗೆದ್ದರೆ ತಮಿಳು ಚಿತ್ರರಂಗದಲ್ಲಿ ಅವರು ಡಿಮ್ಯಾಂಡ್​ ಹೆಚ್ಚಾಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು