AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್​ ಮನೆಗೆ ಬಾಂಬ್​ ಇಟ್ಟಿದ್ದೇವೆಂದು ಬೆದರಿಕೆ; ಮುಂದೇನಾಯ್ತು?

ಕಳೆದ ವಾರಾಂತ್ಯದಲ್ಲಿ ವಿಜಯ್​ ಅವರು ಅಭಿಮಾನಿಗಳ ಜತೆ ಫೋಟೋ ಕ್ಲಿಕ್​ ಮಾಡಿಕೊಳ್ಳುವುದರಲ್ಲಿ ಬ್ಯುಸಿ ಇದ್ದರು. ಈ ವೇಳೆ ಪೊಲೀಸರಿಗೆ ದೂರವಾಣಿ ಕರೆ ಒಂದು ಬಂದಿತ್ತು. ಅದರಲ್ಲಿ ಬಾಂಬ್​ ದಾಳಿ ನಡೆಯಲಿದೆ ಎನ್ನುವ ಎಚ್ಚರಿಕೆ ಇತ್ತು.

ದಳಪತಿ ವಿಜಯ್​ ಮನೆಗೆ ಬಾಂಬ್​ ಇಟ್ಟಿದ್ದೇವೆಂದು ಬೆದರಿಕೆ; ಮುಂದೇನಾಯ್ತು?
ದಳಪತಿ ವಿಜಯ್
TV9 Web
| Edited By: |

Updated on:Nov 15, 2021 | 8:26 PM

Share

ದಳಪತಿ ವಿಜಯ್​ಗೆ (Thalapathy Vijay) ದೊ ಡ್ಡ ಅಭಿಮಾನಿ ಬಳಗ ಇದೆ. ಅವರನ್ನು ಆರಾಧಿಸುವ ಸಾಕಷ್ಟು ಮಂದಿ ಇದ್ದಾರೆ. ಅವರ ಸಿನಿಮಾ ರಿಲೀಸ್​ ಆಗುತ್ತಿದೆ ಎಂದಾದರೆ ಹಬ್ಬದ ವಾತಾವಾರಣ ನಿರ್ಮಾಣ ಆಗುತ್ತದೆ. ಅಭಿಮಾನಿಗಳು ಹಾಲಿನ ಅಭಿಷೇಕ್ ಮಾಡಿ ಸಂಭ್ರಮಿಸುತ್ತಾರೆ. ಇಂಥ ಅಭಿಮಾನಿಗಳಿಗೆ ಗಾಬರಿ ಆಗುವ ವಿಚಾರ ಒಂದು ಎದುರಾಗಿತ್ತು. ವಿಜಯ್​ ಮನೆಯಲ್ಲಿ ಬಾಂಬ್​ ಇಡಲಾಗಿದೆ ಎನ್ನುವ ಕರೆ ಬಂದಿತ್ತು. ಇದಾದ ಬೆನ್ನಲ್ಲೇ ಪೊಲೀಸರು ಶ್ವಾನ ದಳದೊಂದಿಗೆ ಸಂಪೂರ್ಣ ಮನೆಯನ್ನು ಶೋಧ ಮಾಡಿದ್ದರು. ಈ ವೇಳೆ ಇದೊಂದು ಹುಸಿ ಬಾಂಬ್​ ಕರೆ (Hoax Bomb Threat Call) ಎನ್ನುವ ವಿಚಾರ ಗೊತ್ತಾಗಿದೆ.

ಕಳೆದ ವಾರಾಂತ್ಯದಲ್ಲಿ ವಿಜಯ್​ ಅವರು ಅಭಿಮಾನಿಗಳ ಜತೆ ಫೋಟೋ ಕ್ಲಿಕ್​ ಮಾಡಿಕೊಳ್ಳುವುದರಲ್ಲಿ ಬ್ಯುಸಿ ಇದ್ದರು. ಈ ವೇಳೆ ಪೊಲೀಸರಿಗೆ ದೂರವಾಣಿ ಕರೆ ಒಂದು ಬಂದಿತ್ತು. ಅದರಲ್ಲಿ ಬಾಂಬ್​ ದಾಳಿ ನಡೆಯಲಿದೆ ಎನ್ನುವ ಎಚ್ಚರಿಕೆ ಇತ್ತು. ದೂರವಾಣಿ ಕರೆ ಬಂದ ಬೆನ್ನಲ್ಲೆ ಚೆನ್ನೈ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಬಾಂಬ್​ ನಿಷ್ಕ್ರಿಯ ದಳ ಹಾಗೂ ಶ್ವಾನ ದಳವೂ ಇತ್ತು.   ಮನೆ ಹಾಗೂ ಮನೆಯ ಸಮೀಪ ಶೋಧ ಕಾರ್ಯ ನಡೆಸಲಾಯಿತು. ಆದರೆ, ಏನು ದೊರೆತಿಲ್ಲ. ಆನಂತರದಲ್ಲಿ ಇದೊಂದು ಹುಸಿ ಕರೆ ಎಂಬುದು ಸ್ಪಷ್ಟವಾಗಿದೆ.

ಹುಸಿ ಕರೆ ಮಾಡಿದವರನ್ನು ಬಂಧಿಸಲಾಗಿದೆ ಮತ್ತು ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆತ ಯಾವ ಕಾರಣಕ್ಕೆ ಈ ರೀತಿ ಮಾಡಿದ್ದ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಾಕಷ್ಟು ಸೆಲೆಬ್ರಿಟಿಗಳಿಗೆ ಇದೇ ರೀತಿಯ ಹುಸಿ ಕರೆ ಬಂದಿತ್ತು.

ವಿಜಯ್​ 65ನೇ ಚಿತ್ರಕ್ಕೆ ‘ಬೀಸ್ಟ್’ ಎಂದು ಹೆಸರಿಡಲಾಗಿದೆ. ಹೆಸರಿಗೆ ತಕ್ಕಂತೆ ಇತ್ತೀಚೆಗೆ ಫಸ್ಟ್​ ಲುಕ್​ ರಿಲೀಸ್​ ಆಗಿತ್ತು.  ಪೂಜಾ ಹೆಗ್ಡೆ ಈ ಸಿನಿಮಾದ ನಾಯಕಿ. ಅವರು ಇದೇ ಮೊದಲ ಬಾರಿಗೆ ವಿಜಯ್​ಗೆ ಜತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾವನ್ನು ನೆಲ್ಸನ್​ ದಿಲೀಪ್​ಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ಸನ್​ ಪಿಕ್ಚರ್ಸ್​ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

ಇದನ್ನೂ ಓದಿ: ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ: ಭರ್ಜರಿ ಜಯಭೇರಿ ಬಾರಿಸಿದ ದಳಪತಿ ವಿಜಯ್​ ಫ್ಯಾನ್ಸ್​ ಕ್ಲಬ್​

ವಿಜಯ್​ ಸೇತುಪತಿ ಮೇಲೆ ಹಲ್ಲೆ ಮಾಡಿದವರಿಗೆ ನಗದು ಬಹುಮಾನ ಘೋಷಿಸಿದ ರಾಜಕಾರಣಿ

Published On - 7:48 pm, Mon, 15 November 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್