AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರಿಸು’ ಯಶಸ್ಸಿನ ಬಳಿಕ 50 ಕೋಟಿ ರೂಪಾಯಿ ಸಂಭಾವನೆ ಹೆಚ್ಚಿಸಿಕೊಂಡ ದಳಪತಿ ವಿಜಯ್

Thalapathy Vijay: ದಳಪತಿ ವಿಜಯ್ ಅವರ 68ನೇ ಸಿನಿಮಾಗೆ ವೆಂಕಟ್ ಪ್ರಭು ಅವರು ನಿರ್ದೇಶನ ಮಾಡುತ್ತಿದ್ದು, ಎಜಿಎಸ್​ ಎಂಟರ್​ಟೇನ್​ಮೆಂಟ್ ನಿರ್ಮಿಸುತ್ತಿದೆ. ಈ ಸಿನಿಮಾಗಾಗಿ ವಿಜಯ್ ಅವರು ಭರ್ಜರಿ ಸಂಭಾವನೆ ಪಡೆಯುತ್ತಿದ್ದಾರೆ.

‘ವಾರಿಸು’ ಯಶಸ್ಸಿನ ಬಳಿಕ 50 ಕೋಟಿ ರೂಪಾಯಿ ಸಂಭಾವನೆ ಹೆಚ್ಚಿಸಿಕೊಂಡ ದಳಪತಿ ವಿಜಯ್
ವಿಜಯ್
ರಾಜೇಶ್ ದುಗ್ಗುಮನೆ
|

Updated on: May 18, 2023 | 10:56 AM

Share

ದಳಪತಿ ವಿಜಯ್ ಅವರು ಸಿನಿಮಾ ಮಾಡುವುದರಲ್ಲಿ ಸಖತ್ ಫಾಸ್ಟ್. ಒಂದು ಸಿನಿಮಾ ರಿಲೀಸ್ ಆಗುತ್ತಿದ್ದಂತೆ ಮತ್ತೊಂದು ಸಿನಿಮಾ ಘೋಷಿಸುತ್ತಾರೆ. ಸಂಕ್ರಾಂತಿ ಸಂದರ್ಭದಲ್ಲಿ ಅವರ ನಟನೆಯ ‘ವಾರಿಸು’ ಸಿನಿಮಾ (Varisu Movie) ಸೂಪರ್ ಹಿಟ್ ಆಯಿತು. ಈ ಚಿತ್ರ ತೆರೆಕಂಡ ಬೆನ್ನಲ್ಲೇ ಅವರು ‘ಲಿಯೋ’ ಸಿನಿಮಾ (Leo Movie) ಘೋಷಿಸಿದರು. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಹೀಗಿರುವಾಗಲೇ ಅವರ 68ನೇ ಸಿನಿಮಾ ಬಗ್ಗೆ ಹೊಸ ಮಾಹಿತಿ ಹೊರಬಿದ್ದಿದೆ. ಈ ಚಿತ್ರದಲ್ಲಿ ದಳಪತಿ ವಿಜಯ್ ಪಡೆಯುತ್ತಿರುವ ಸಂಭಾವನೆ ಅನೇಕರಲ್ಲಿ ಅಚ್ಚರಿ ಮೂಡಿಸಿದೆ.

ದಳಪತಿ ವಿಜಯ್ ಅವರ 68ನೇ ಸಿನಿಮಾ ಘೋಷಣೆ ಆಗಿಲ್ಲ. ಆದರೆ, ಇದಕ್ಕೆ ಸ್ಕ್ರಿಪ್ಟ್ ಕೆಲಸಗಳು ನಡೆಯುತ್ತಿವೆ. ವೆಂಕಟ್ ಪ್ರಭು ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಎಜಿಎಸ್​ ಎಂಟರ್​ಟೇನ್​ಮೆಂಟ್ ನಿರ್ಮಿಸುತ್ತಿದೆ. ಈ ಸಿನಿಮಾಗಾಗಿ ವಿಜಯ್ ಅವರು ಭರ್ಜರಿ ಸಂಭಾವನೆ ಪಡೆಯುತ್ತಿದ್ದಾರೆ. ಈ ಚಿತ್ರಕ್ಕಾಗಿ ಅವರು 150 ಕೋಟಿ ರೂಪಾಯಿ ಪಡೆದಿದ್ದಾರೆ ಎನ್ನಲಾಗಿದೆ.

ದಕ್ಷಿಣ ಭಾರತದಲ್ಲಿ 100 ಕೋಟಿ ರೂಪಾಯಿ ಸಂಭಾವನೆ ಪಡೆಯುವ ಹೀರೋಗಳಿದ್ದಾರೆ. ಆದರೆ, ಓರ್ವ ಹೀರೋಗೆ 150 ಕೋಟಿ ರೂಪಾಯಿ ಕೊಡುತ್ತಿರುವುದು ಇದೇ ಮೊದಲು ಎನ್ನಲಾಗಿದೆ. ಈ ಮೂಲಕ ದಳಪತಿ ವಿಜಯ್ ಅವರು ಹೊಸ ದಾಖಲೆ ಬರೆದಿದ್ದಾರೆ. ಅವರ ಸಂಭಾವನೆ ಮೊತ್ತ ಅನೇಕರಿಗೆ ಅಚ್ಚರಿ ಮುಡಿಸಿದೆ.

ಈ ವರ್ಷ ರಿಲೀಸ್ ಆದ ‘ವಾರಿಸು’ ಹಾಗೂ ಈಗ ಸಿದ್ಧಗೊಳ್ಳುತ್ತಿರುವ ‘ಲಿಯೋ’ ಚಿತ್ರಕ್ಕೆ ಅವರು 100 ಕೋಟಿ ರೂಪಾಯಿ ಪಡೆದಿದ್ದಾರೆ. ಈಗ ಹೊಸ ಚಿತ್ರಕ್ಕೆ ಅವರು ಭರ್ಜರಿ ಹಣ ಪಡೆಯುತ್ತಿದ್ದಾರೆ. ವಿಜಯ್ ಅವರು ಅನೇಕ ಬ್ರ್ಯಾಂಡ್​ಗಳಿಗೆ ರಾಯಭಾರಿ ಆಗಿದ್ದಾರೆ. ಇದರಿಂದ ಅವರಿಗೆ ವರ್ಷಕ್ಕೆ 10+ ಕೋಟಿ ರೂಪಾಯಿ ಬರುತ್ತದೆ. ದಳಪತಿ ವಿಜಯ್ ಅವರ ಒಟ್ಟೂ ಆಸ್ತಿ 500+ ಕೋಟಿ ರೂಪಾಯಿ ಇದೆ.

ಇದನ್ನೂ ಓದಿ: ‘ಲಿಯೋ’ ನಿರ್ದೇಶಕನಿಗೆ ದಳಪತಿ ವಿಜಯ್​ ಅಭಿಮಾನಿಗಳಿಂದ ಬಹಿರಂಗ ಪತ್ರ; ಏನಿದೆ ಇದರಲ್ಲಿ?

ದಳಪತಿ ವಿಜಯ್ ಅವರ ಸಿನಿಮಾಗಳು ಮಿನಿಮಮ್ ಬಿಸ್ನೆಸ್ ಮಾಡುತ್ತವೆ. ಸಿನಿಮಾ ರಿಲೀಸ್​ಗೂ ಮೊದಲೇ ಸ್ಯಾಟಲೈಟ್ ಹಕ್ಕು, ಒಟಿಟಿ ಹಕ್ಕು ಮತ್ತಿತ್ಯಾದಿಗಳಿಂದ ಸಿನಿಮಾ ನೂರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡುತ್ತದೆ. ಹೀಗಾಗಿ ಸಿನಿಮಾ ರಿಲೀಸ್​ಗೂ ಮೊದಲೇ ನಿರ್ಮಾಪಕರು ಸೇಫ್ ಆಗುತ್ತಾರೆ. ಹೀಗಾಗಿ ವಿಜಯ್ ಕೇಳಿದಷ್ಟು ಹಣ ಕೊಡಲು ನಿರ್ಮಾಪಕರು ರೆಡಿ ಇರುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು