‘ವಾರಿಸು’ ಯಶಸ್ಸಿನ ಬಳಿಕ 50 ಕೋಟಿ ರೂಪಾಯಿ ಸಂಭಾವನೆ ಹೆಚ್ಚಿಸಿಕೊಂಡ ದಳಪತಿ ವಿಜಯ್

Thalapathy Vijay: ದಳಪತಿ ವಿಜಯ್ ಅವರ 68ನೇ ಸಿನಿಮಾಗೆ ವೆಂಕಟ್ ಪ್ರಭು ಅವರು ನಿರ್ದೇಶನ ಮಾಡುತ್ತಿದ್ದು, ಎಜಿಎಸ್​ ಎಂಟರ್​ಟೇನ್​ಮೆಂಟ್ ನಿರ್ಮಿಸುತ್ತಿದೆ. ಈ ಸಿನಿಮಾಗಾಗಿ ವಿಜಯ್ ಅವರು ಭರ್ಜರಿ ಸಂಭಾವನೆ ಪಡೆಯುತ್ತಿದ್ದಾರೆ.

‘ವಾರಿಸು’ ಯಶಸ್ಸಿನ ಬಳಿಕ 50 ಕೋಟಿ ರೂಪಾಯಿ ಸಂಭಾವನೆ ಹೆಚ್ಚಿಸಿಕೊಂಡ ದಳಪತಿ ವಿಜಯ್
ವಿಜಯ್
Follow us
|

Updated on: May 18, 2023 | 10:56 AM

ದಳಪತಿ ವಿಜಯ್ ಅವರು ಸಿನಿಮಾ ಮಾಡುವುದರಲ್ಲಿ ಸಖತ್ ಫಾಸ್ಟ್. ಒಂದು ಸಿನಿಮಾ ರಿಲೀಸ್ ಆಗುತ್ತಿದ್ದಂತೆ ಮತ್ತೊಂದು ಸಿನಿಮಾ ಘೋಷಿಸುತ್ತಾರೆ. ಸಂಕ್ರಾಂತಿ ಸಂದರ್ಭದಲ್ಲಿ ಅವರ ನಟನೆಯ ‘ವಾರಿಸು’ ಸಿನಿಮಾ (Varisu Movie) ಸೂಪರ್ ಹಿಟ್ ಆಯಿತು. ಈ ಚಿತ್ರ ತೆರೆಕಂಡ ಬೆನ್ನಲ್ಲೇ ಅವರು ‘ಲಿಯೋ’ ಸಿನಿಮಾ (Leo Movie) ಘೋಷಿಸಿದರು. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಹೀಗಿರುವಾಗಲೇ ಅವರ 68ನೇ ಸಿನಿಮಾ ಬಗ್ಗೆ ಹೊಸ ಮಾಹಿತಿ ಹೊರಬಿದ್ದಿದೆ. ಈ ಚಿತ್ರದಲ್ಲಿ ದಳಪತಿ ವಿಜಯ್ ಪಡೆಯುತ್ತಿರುವ ಸಂಭಾವನೆ ಅನೇಕರಲ್ಲಿ ಅಚ್ಚರಿ ಮೂಡಿಸಿದೆ.

ದಳಪತಿ ವಿಜಯ್ ಅವರ 68ನೇ ಸಿನಿಮಾ ಘೋಷಣೆ ಆಗಿಲ್ಲ. ಆದರೆ, ಇದಕ್ಕೆ ಸ್ಕ್ರಿಪ್ಟ್ ಕೆಲಸಗಳು ನಡೆಯುತ್ತಿವೆ. ವೆಂಕಟ್ ಪ್ರಭು ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಎಜಿಎಸ್​ ಎಂಟರ್​ಟೇನ್​ಮೆಂಟ್ ನಿರ್ಮಿಸುತ್ತಿದೆ. ಈ ಸಿನಿಮಾಗಾಗಿ ವಿಜಯ್ ಅವರು ಭರ್ಜರಿ ಸಂಭಾವನೆ ಪಡೆಯುತ್ತಿದ್ದಾರೆ. ಈ ಚಿತ್ರಕ್ಕಾಗಿ ಅವರು 150 ಕೋಟಿ ರೂಪಾಯಿ ಪಡೆದಿದ್ದಾರೆ ಎನ್ನಲಾಗಿದೆ.

ದಕ್ಷಿಣ ಭಾರತದಲ್ಲಿ 100 ಕೋಟಿ ರೂಪಾಯಿ ಸಂಭಾವನೆ ಪಡೆಯುವ ಹೀರೋಗಳಿದ್ದಾರೆ. ಆದರೆ, ಓರ್ವ ಹೀರೋಗೆ 150 ಕೋಟಿ ರೂಪಾಯಿ ಕೊಡುತ್ತಿರುವುದು ಇದೇ ಮೊದಲು ಎನ್ನಲಾಗಿದೆ. ಈ ಮೂಲಕ ದಳಪತಿ ವಿಜಯ್ ಅವರು ಹೊಸ ದಾಖಲೆ ಬರೆದಿದ್ದಾರೆ. ಅವರ ಸಂಭಾವನೆ ಮೊತ್ತ ಅನೇಕರಿಗೆ ಅಚ್ಚರಿ ಮುಡಿಸಿದೆ.

ಈ ವರ್ಷ ರಿಲೀಸ್ ಆದ ‘ವಾರಿಸು’ ಹಾಗೂ ಈಗ ಸಿದ್ಧಗೊಳ್ಳುತ್ತಿರುವ ‘ಲಿಯೋ’ ಚಿತ್ರಕ್ಕೆ ಅವರು 100 ಕೋಟಿ ರೂಪಾಯಿ ಪಡೆದಿದ್ದಾರೆ. ಈಗ ಹೊಸ ಚಿತ್ರಕ್ಕೆ ಅವರು ಭರ್ಜರಿ ಹಣ ಪಡೆಯುತ್ತಿದ್ದಾರೆ. ವಿಜಯ್ ಅವರು ಅನೇಕ ಬ್ರ್ಯಾಂಡ್​ಗಳಿಗೆ ರಾಯಭಾರಿ ಆಗಿದ್ದಾರೆ. ಇದರಿಂದ ಅವರಿಗೆ ವರ್ಷಕ್ಕೆ 10+ ಕೋಟಿ ರೂಪಾಯಿ ಬರುತ್ತದೆ. ದಳಪತಿ ವಿಜಯ್ ಅವರ ಒಟ್ಟೂ ಆಸ್ತಿ 500+ ಕೋಟಿ ರೂಪಾಯಿ ಇದೆ.

ಇದನ್ನೂ ಓದಿ: ‘ಲಿಯೋ’ ನಿರ್ದೇಶಕನಿಗೆ ದಳಪತಿ ವಿಜಯ್​ ಅಭಿಮಾನಿಗಳಿಂದ ಬಹಿರಂಗ ಪತ್ರ; ಏನಿದೆ ಇದರಲ್ಲಿ?

ದಳಪತಿ ವಿಜಯ್ ಅವರ ಸಿನಿಮಾಗಳು ಮಿನಿಮಮ್ ಬಿಸ್ನೆಸ್ ಮಾಡುತ್ತವೆ. ಸಿನಿಮಾ ರಿಲೀಸ್​ಗೂ ಮೊದಲೇ ಸ್ಯಾಟಲೈಟ್ ಹಕ್ಕು, ಒಟಿಟಿ ಹಕ್ಕು ಮತ್ತಿತ್ಯಾದಿಗಳಿಂದ ಸಿನಿಮಾ ನೂರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡುತ್ತದೆ. ಹೀಗಾಗಿ ಸಿನಿಮಾ ರಿಲೀಸ್​ಗೂ ಮೊದಲೇ ನಿರ್ಮಾಪಕರು ಸೇಫ್ ಆಗುತ್ತಾರೆ. ಹೀಗಾಗಿ ವಿಜಯ್ ಕೇಳಿದಷ್ಟು ಹಣ ಕೊಡಲು ನಿರ್ಮಾಪಕರು ರೆಡಿ ಇರುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್