AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಬಿಕ್ಕಟ್ಟಿನ ನಡುವೆ ಬಿಡುಗಡೆ ಆಗಲಿದೆ ‘ಲಿಯೋ’; ಏನಾಗಬಹುದು ಬಾಕ್ಸ್​ ಆಫೀಸ್​ ಭವಿಷ್ಯ?

ಈ ವರ್ಷ ಕರ್ನಾಟಕದಲ್ಲಿ ಪರಭಾಷೆಯ ಸಿನಿಮಾಗಳು ರಾರಾಜಿಸಿವೆ. ರಜನಿಕಾಂತ್​ ನಟನೆಯ ‘ಜೈಲರ್​’ ಚಿತ್ರಕ್ಕೆ ಭರ್ಜರಿ ಕಲೆಕ್ಷನ್​ ಆಗಿರುವುದು ಗೊತ್ತೇ ಇದೆ. ಇದರ ಬೆನ್ನಲ್ಲೇ ದಳಪತಿ ವಿಜಯ್​ ನಟನೆಯ ‘ಲಿಯೋ’ ಚಿತ್ರ ಅ.19ರಂದು ಬಿಡುಗಡೆಗೆ ಸಜ್ಜಾಗುತ್ತಿದೆ. ಅದೇ ದಿನ ಕನ್ನಡದಲ್ಲಿ ‘ಘೋಸ್ಟ್​’ ಸಿನಿಮಾ ಸಹ ತೆರೆ ಕಾಣಲಿದೆ.

ಕಾವೇರಿ ಬಿಕ್ಕಟ್ಟಿನ ನಡುವೆ ಬಿಡುಗಡೆ ಆಗಲಿದೆ ‘ಲಿಯೋ’; ಏನಾಗಬಹುದು ಬಾಕ್ಸ್​ ಆಫೀಸ್​ ಭವಿಷ್ಯ?
ದಳಪತಿ ವಿಜಯ್​
ಮದನ್​ ಕುಮಾರ್​
|

Updated on: Oct 01, 2023 | 7:48 AM

Share

ಪ್ರತಿ ಬಾರಿ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಕಾವೇರಿ ಬಿಕ್ಕಟ್ಟು (Cauvery Dispute) ಉಂಟಾದಾಗ ಸಿನಿಮಾಗಳ ಮೇಲೆ ಪರಿಣಾಮ ಬೀರುತ್ತದೆ. ತಮಿಳಿನ ಸಿನಿಮಾಗಳ (Tamil Cinema) ಮೇಲೆ ಕರುನಾಡಿನಲ್ಲಿ ಆಕ್ರೋಶ ವ್ಯಕ್ತಪಡಿಸಲಾಗುತ್ತದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ತಮಿಳು ನಟ ಸಿದ್ದಾರ್ಥ್​ ಅಭಿನಯದ ‘ಚಿಕ್ಕು’ ಸಿನಿಮಾದ ಸುದ್ದಿಗೋಷ್ಠಿಗೆ ಅಡ್ಡಿಪಡಿಸಲಾಯಿತು. ಆ ಘಟನೆಗೆ ಪರ-ವಿರೋಧದ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಈ ಮಧ್ಯೆಯೂ ತಮಿಳಿನ ‘ಲಿಯೋ’ ಸಿನಿಮಾ (Leo Movie) ಬಿಡುಗಡೆಗೆ ಸಜ್ಜಾಗಿದೆ. ಅಕ್ಟೋಬರ್​ 19ರಂದು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ರಿಲೀಸ್ ಆಗಲಿದೆ. ಕನ್ನಡಕ್ಕೂ ಡಬ್​ ಆಗಿ ಕರ್ನಾಟಕದಲ್ಲಿ ಈ ಸಿನಿಮಾ ತೆರೆಕಾಣಲಿದೆ. ಕಾವೇರಿ ಕಾವು ಇರುವುದರಿಂದ ಕರ್ನಾಟಕದಲ್ಲಿ ‘ಲಿಯೋ’ ಬಾಕ್ಸ್​ ಆಫೀಸ್​ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ದಳಪತಿ ವಿಜಯ್​ ಅವರು ‘ಲಿಯೋ’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಈ ಚಿತ್ರಕ್ಕೆ ಲೋಕೇಶ್ ಕನಗರಾಜ್​ ನಿರ್ದೇಶನ ಮಾಡಿದ್ದಾರೆ. ತ್ರಿಶಾ, ಸಂಜಯ್​ ದತ್​ ಮುಂತಾದ ಘಟಾನುಘಟಿ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣವಾದ ‘ಲಿಯೋ’ ಮೇಲೆ ದಳಪತಿ ವಿಜಯ್​ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕರ್ನಾಟಕದಲ್ಲಿನ ಪ್ರೇಕ್ಷಕರು ಈ ಸಿನಿಮಾಗೆ ಯಾವ ರೀತಿ ಪ್ರತಿಕ್ರಿಯಿಸಬಹುದು ಎಂಬ ಕೌತುಕ ಮೂಡಿದೆ.

ಇದನ್ನೂ ಓದಿ: ಕೇರಳದಲ್ಲಿ ‘ಲಿಯೋ’ ಚಿತ್ರಕ್ಕೆ ಬಹಿಷ್ಕಾರ; ಫ್ಯಾನ್ಸ್​ ಮಾಡಿದ ತಪ್ಪಿನಿಂದ ನಿರ್ಮಾಪಕರಿಗೆ ತೊಂದರೆ

ಈ ವರ್ಷ ಕರ್ನಾಟಕದಲ್ಲಿ ಪರಭಾಷೆಯ ಸಿನಿಮಾಗಳು ರಾರಾಜಿಸಿವೆ. ರಜನಿಕಾಂತ್​ ನಟನೆಯ ‘ಜೈಲರ್​’ ಚಿತ್ರಕ್ಕೆ ಭರ್ಜರಿ ಕಲೆಕ್ಷನ್​ ಆಗಿರುವುದು ಗೊತ್ತೇ ಇದೆ. ಇದರ ಬೆನ್ನಲ್ಲೇ ದಳಪತಿ ವಿಜಯ್​ ನಟನೆಯ ‘ಲಿಯೋ’ ಕೂಡ ಬಿಡುಗಡೆಗೆ ಸಜ್ಜಾಗುತ್ತಿದೆ. ಕಾವೇರಿ ವಿವಾದ ಜೋರಾಗಿರುವ ಕಾರಣ ಕರ್ನಾಟಕದಲ್ಲಿ ‘ಲಿಯೋ’ ಬಿಡುಗಡೆಗೆ ಅಡೆತಡೆ ಉಂಟಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಈ ಬಗ್ಗೆ ನಿರ್ಮಾಪಕರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ‘​ನಮ್ಮ ಇಂಡಸ್ಟ್ರಿ ಪರವಾಗಿ ಸಿದ್ದಾರ್ಥ್​ಗೆ ನಾನು ಕ್ಷಮೆ ಕೇಳುತ್ತೇನೆ’; ನೇರ ಮಾತಲ್ಲಿ ಹೇಳಿದ ಶಿವಣ್ಣ

ದಸರಾ ಹಬ್ಬದ ಸಂದರ್ಭದಲ್ಲಿ ಹಲವು ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಶಿವರಾಜ್​ಕುಮಾರ್​ ನಟನೆಯ ‘ಘೋಸ್ಟ್​’ ಚಿತ್ರ ಅಕ್ಟೋಬರ್​ 19ರಂದು ರಿಲೀಸ್​ ಆಗಲಿದೆ. ಆ ಚಿತ್ರ ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲಿ, ಬೇರೆ ಬೇರೆ ಭಾಷೆಯಲ್ಲಿ ತೆರೆಕಾಣಲಿದೆ. ತಮಿಳುನಾಡಿನಲ್ಲಿ ‘ಘೋಸ್ಟ್​’ ಸಿನಿಮಾಗೆ ಯಾವ ರೀತಿ ರೆಸ್ಪಾನ್ಸ್​ ಸಿಗಲಿದೆ ಎಂಬುದುನ್ನು ತಿಳಿಯುವ ಕೌತುಕ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?