ಕೊನೆ ಸಿನಿಮಾಕ್ಕೆ ಭಾರಿ ಸಂಭಾವನೆ ಪಡೆಯುತ್ತಿರುವ ದಳಪತಿ ವಿಜಯ್

Thalapathy: ದಳಪತಿ ವಿಜಯ್ ನಟಿಸಲಿರುವ ಕೊನೆಯ ಸಿನಿಮಾ ನಿನ್ನೆ ಘೋಷಣೆ ಆಗಿದೆ. ಸಿನಿಮಾವನ್ನು ಕನ್ನಡದ ನಿರ್ಮಾಣ ಸಂಸ್ಥೆ ನಿರ್ಮಿಸಲಿದೆ. ಆದರೆ ತಮ್ಮ ಕೊನೆಯ ಸಿನಿಮಾಕ್ಕೆ ಭಾರಿ ಸಂಭಾವನೆಯನ್ನು ವಿಜಯ್ ಪಡೆಯಲಿದ್ದಾರೆ.

ಕೊನೆ ಸಿನಿಮಾಕ್ಕೆ ಭಾರಿ ಸಂಭಾವನೆ ಪಡೆಯುತ್ತಿರುವ ದಳಪತಿ ವಿಜಯ್
ದಳಪತಿ ವಿಜಯ್
Follow us
|

Updated on: Sep 14, 2024 | 4:58 PM

ಭಾರತದಲ್ಲಿ ಸಿನಿಮಾ ಒಂದಕ್ಕೆ ಅತಿ ಹೆಚ್ಚು ಸಂಭಾವನೆ ಪಡೆವ ನಟರಲ್ಲಿ ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ಸಹ ಒಬ್ಬರು. ಕೆಲವು ದಿನಗಳ ಹಿಂದಷ್ಟೆ ಬಿಡುಗಡೆ ಆಗಿರುವ ಭಾರತದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿ ಮಾಡುವವರ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ದೊಡ್ಡ ಬಾಲಿವುಡ್ ಸ್ಟಾರ್​ಗಳನ್ನು ಮೀರಿಸಿ ಎರಡನೇ ಸ್ಥಾನದಲ್ಲಿದ್ದಾರೆ ದಳಪತಿ ವಿಜಯ್. ಇದೀಗ ರಾಜಕೀಯಕ್ಕೆ ಪ್ರವೇಶಿಸಲಿರುವ ವಿಜಯ್, ಸಿನಿಮಾಗಳಲ್ಲಿ ನಟಿಸದಿರಲು ನಿರ್ಧರಿಸಿದ್ದಾರೆ. ನಿನ್ನೆಯಷ್ಟೆ ಅವರು ತಮ್ಮ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಸಿನಿಮಾಕ್ಕೆ ಅವರು ಭಾರಿ ಮೊತ್ತದ ಸಂಭಾವನೆ ಪಡೆಯಲಿದ್ದಾರೆ.

ವಿಜಯ್​ರ 69ನೇ ಸಿನಿಮಾ ನಿನ್ನೆಯಷ್ಟೆ ಘೋಷಣೆ ಆಗಿದೆ. ಈ ಸಿನಿಮಾ ವಿಜಯ್​ರ ಕೊನೆಯ ಸಿನಿಮಾ ಆಗಿರಲಿದೆ. ಈ ಸಿನಿಮಾವನ್ನು ಕನ್ನಡದ ಕೆವಿಎಂ ನಿರ್ಮಾಣ ಸಂಸ್ಥೆ ನಿರ್ಮಾಣ ಮಾಡಲಿದೆ. ಇದೇ ಅವರ ಕೊನೆಯ ಸಿನಿಮಾ ಎಂದು ಅಧಿಕೃತವಾಗಿ ಘೋಷಣೆ ಸಹ ಆಗಿದೆ. ಈ ಸಿನಿಮಾ ಅವರ ಅಭಿಮಾನಿಗಳ ಪಾಲಿಗೆ ಬಹಳ ವಿಶೇಷವಾದದ್ದಾಗಿದ್ದು, ಸಿನಿಮಾಕ್ಕಾಗಿ ವಿಜಯ್ ಸಹ ಭಾರಿ ದೊಡ್ಡ ಮೊತ್ತವನ್ನು ಸಂಭಾವನೆಯಾಗಿ ಪಡೆಯಲಿದ್ದಾರೆ.

ಇದನ್ನೂ ಓದಿ:‘Thalapathy 69’ ವಿಜಯ್ ಕೊನೆಯ ಸಿನಿಮಾ; ಖಚಿತಪಡಿಸಿದ ಕೆವಿಎನ್ ಸಂಸ್ಥೆ

ವಿಜಯ್, ತಮ್ಮ 69ನೇ ಸಿನಿಮಾಕ್ಕಾಗಿ 275 ಕೋಟಿ ರೂಪಾಯಿ ಸಂಭಾವನೆಯನ್ನು ನಿರ್ಮಾಣ ಸಂಸ್ಥೆಯಿಂದ ಪಡೆಯಲಿದ್ದಾರೆ. ಭಾರತದಲ್ಲಿ ಈವರೆಗೆ ಇನ್ಯಾವ ನಟರೂ ಸಹ ಇಷ್ಟು ದೊಡ್ಡ ಸಂಭಾವನೆಯನ್ನು ಪಡೆದಿಲ್ಲ ಎನ್ನಲಾಗುತ್ತಿದೆ. ಪ್ರಭಾಸ್​, ದಕ್ಷಿಣ ಭಾರತದ ಅತಿ ದೊಡ್ಡ ಸ್ಟಾರ್ ಎಂದೆಲ್ಲ ಹೇಳಲಾಗುತ್ತದೆ. ಆದರೆ ಪ್ರಭಾಸ್ ಸಹ, ವಿಜಯ್​ ಪಡೆಯುವಷ್ಟೆ ಸಂಭಾವನೆಯನ್ನು ಒಂದು ಸಿನಿಮಾಕ್ಕಾಗಿ ಪಡೆಯುವುದಿಲ್ಲ.

ಕೆಲ ವಾರಗಳ ಹಿಂದಷ್ಟೆ, ಭಾರತದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿ ಮಾಡುವ ವ್ಯಕ್ತಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಯ್ತು. ಭಾರತದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವ ಸಿನಿಮಾ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ದಳಪತಿ ವಿಜಯ್ ಎರಡನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿ ಬಾದ್​ ಶಾ ಶಾರುಖ್ ಖಾನ್ ಇದ್ದಾರೆ. ಮೂರನೇ ಸ್ಥಾನದಲ್ಲಿ ಸಲ್ಮಾನ್ ಖಾನ್ ಇದ್ದಾರೆ. ಸಲ್ಮಾನ್​ ಖಾನ್​ಗಿಂತಳೂ ಹೆಚ್ಚು ಸಂಭಾವನೆಯನ್ನು ವಿಜಯ್ ತೆಗೆದುಕೊಳ್ಳುತ್ತಾರೆ ಎನ್ನಲಾಗುತ್ತದೆ. ಶಾರುಖ್ ಖಾನ್ ಹೆಚ್ಚು ಸಂಭಾವನೆ ಪಡೆಯುತ್ತಾರಾದರೂ ಅವರು ಸಾಮಾನ್ಯವಾಗಿ ವರ್ಷಕ್ಕೆ ಒಂದೇ ಸಿನಿಮಾ ಮಾಡುತ್ತಾರೆ. ಆದರೆ ವಿಜಯ್ ವರ್ಷಕ್ಕೆ ಕನಿಷ್ಟ ಎರಡಾದರೂ ಸಿನಿಮಾ ಮಾಡುತ್ತಾರೆ. ಒಮ್ಮೊಮ್ಮೆ ಮೂರು ಸಿನಿಮಾ ಮಾಡಿದ್ದೂ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ