AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಖಾನ್ ‘ಜವಾನ್​’ ಚಿತ್ರದಲ್ಲಿ ದಳಪತಿ ವಿಜಯ್​ಗೆ ಅತಿಥಿ ಪಾತ್ರ; ಸಂಭಾವನೆ ಎಷ್ಟು?

‘ಜವಾನ್​’ ಸಿನಿಮಾ ಸಾಕಷ್ಟು ವಿಚಾರಗಳಿಗೆ ಗಮನ ಸೆಳೆಯುತ್ತಿದೆ. ಈ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಲು ದಳಪತಿ ವಿಜಯ್ ರೆಡಿ ಆಗಿದ್ದಾರೆ.

ಶಾರುಖ್ ಖಾನ್ ‘ಜವಾನ್​’ ಚಿತ್ರದಲ್ಲಿ ದಳಪತಿ ವಿಜಯ್​ಗೆ ಅತಿಥಿ ಪಾತ್ರ; ಸಂಭಾವನೆ ಎಷ್ಟು?
ಶಾರುಖ್​-ವಿಜಯ್
TV9 Web
| Edited By: |

Updated on: Jul 15, 2022 | 5:29 PM

Share

ಶಾರುಖ್ ಖಾನ್ (Shah Rukh Khan) ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ನಾಲ್ಕು ವರ್ಷಗಳ ಕಾಲ ಬಳಿಕ ನಟನೆಗೆ ಮರಳುತ್ತಿರುವ ಅವರು ಒಟ್ಟಾಗಿ ಮೂರು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಅದರಲ್ಲಿ ಹೆಚ್ಚು ಗಮನ ಸೆಳೆಯುತ್ತಿರುವುದು ಅಟ್ಲೀ ನಿರ್ದೇಶನದ ‘ಜವಾನ್​’ ಸಿನಿಮಾ (Jawan Movie). ಈ ಚಿತ್ರದಲ್ಲಿ ಶಾರುಖ್ ಖಾನ್ ಸೋಲ್ಜರ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಇತ್ತೀಚೆಗೆ ರಿಲೀಸ್ ಆದ ಗ್ಲಿಂಪ್ಸ್ ವಿಡಿಯೋ ಮೂಲಕ ಗೊತ್ತಾಗಿದೆ. ಈ ಸಿನಿಮಾದಲ್ಲಿ ‘ದಳಪತಿ’ ವಿಜಯ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

‘ಜವಾನ್​’ ಸಿನಿಮಾ ಸಾಕಷ್ಟು ವಿಚಾರಗಳಿಗೆ ಗಮನ ಸೆಳೆಯುತ್ತಿದೆ. ಅಟ್ಲೀ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದಲ್ಲಿ ಈಗಾಗಲೇ ವಿಜಯ್ ಸೇತುಪತಿ ಅವರು ನಟಿಸೋದು ಪಕ್ಕಾ ಆಗಿದೆ. ಈಗ ಈ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಲು ದಳಪತಿ ವಿಜಯ್ ರೆಡಿ ಆಗಿದ್ದಾರೆ. ಸೆಪ್ಟೆಂಬರ್ ಮಧ್ಯದ ವೇಳೆಗೆ ಚೆನ್ನೈನಲ್ಲಿ ಈ ಚಿತ್ರದ ಶೂಟಿಂಗ್ ನಡೆಯಲಿದೆ. ಒಂದು ಅಥವಾ ಎರಡು ದಿನಗಳ ಕಾಲ ಶೂಟಿಂಗ್ ಇರಲಿದೆ ಎಂದು ವರದಿ ಆಗಿದೆ.

ಕೆಲ ಹೀರೋಗಳು ಅತಿಥಿ ಪಾತ್ರ ಮಾಡಿದರೂ ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಾರೆ. ಅಚ್ಚರಿ ಎಂದರೆ ದಳಪತಿ ವಿಜಯ್ ಅವರು ಈ ಚಿತ್ರಕ್ಕಾಗಿ ಒಂದು ರೂಪಾಯಿ ಕೂಡ ಪಡೆಯುತ್ತಿಲ್ಲ. ಇದಕ್ಕೆ ಕಾರಣ ಅಟ್ಲೀ ಹಾಗೂ ಶಾರುಖ್ ಖಾನ್​. ವಿಜಯ್​​ಗೆ ಶಾರುಖ್ ಖಾನ್ ಹಾಗೂ ಅಟ್ಲಿ ಜತೆ ಒಳ್ಳೆಯ ಬಾಂಧವ್ಯ ಇದೆ. ಅಟ್ಲೀ ಹಾಗೂ ವಿಜಯ್ ಮೂರು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಹೀಗಾಗಿ, ಸಂಭಾವನೆ ಪಡೆಯುವುದಿಲ್ಲ ಎಂಬ ಮಾತನ್ನು ವಿಜಯ್ ಹೇಳಿದ್ದಾರೆ. ಅವರು ಅತಿಥಿ ಪಾತ್ರ ಮಾಡುತ್ತಿರುವ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಆಗಲಿದೆ.

ಇದನ್ನೂ ಓದಿ: ಹನಿಮೂನ್​ ಮುಗಿಸಿ ಬಂದ ನಯನತಾರಾ; ಶಾರುಖ್​ ಖಾನ್​ ಜೊತೆ ತಕ್ಷಣ ಶೂಟಿಂಗ್​ ಶುರು

‘ಜವಾನ್​’ ಸಿನಿಮಾದಲ್ಲಿ ಸಖತ್ ಮಾಸ್ ಆ್ಯಕ್ಷನ್ ಇರಲಿದೆ ಎನ್ನಲಾಗುತ್ತಿದೆ. ಈ ಚಿತ್ರದ ಗ್ಲಿಂಪ್ಸ್ ವಿಡಿಯೋ ಸಾಕಷ್ಟು ಗಮನ ಸೆಳೆದಿದೆ. ಈ ಚಿತ್ರ ಮುಂದಿನ ವರ್ಷ ಜೂನ್ 2ಕ್ಕೆ ತೆರೆಗೆ ಬರಲಿದೆ. ‘ರೆಡ್ ಚಿಲ್ಲೀಸ್ ಎಂಟರ್​ಟೇನ್​ಮೆಂಟ್’ ಮೂಲಕ ಗೌರವ್ ವರ್ಮಾ ಹಾಗೂ ಶಾರುಖ್ ಖಾನ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ನಯನತಾರಾ ಅವರು ಈ ಚಿತ್ರದಲ್ಲಿ ನಾಯಕಿ ಆಗಿ ನಟಿಸುತ್ತಿದ್ದಾರೆ. ಇನ್ನು, ದಳಪತಿ ವಿಜಯ್ ಅವರು ‘ವಾರಿಸು’ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ರಶ್ಮಿಕಾ ನಾಯಕಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ