AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಖಾನ್ ‘ಜವಾನ್​’ ಚಿತ್ರದಲ್ಲಿ ದಳಪತಿ ವಿಜಯ್​ಗೆ ಅತಿಥಿ ಪಾತ್ರ; ಸಂಭಾವನೆ ಎಷ್ಟು?

‘ಜವಾನ್​’ ಸಿನಿಮಾ ಸಾಕಷ್ಟು ವಿಚಾರಗಳಿಗೆ ಗಮನ ಸೆಳೆಯುತ್ತಿದೆ. ಈ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಲು ದಳಪತಿ ವಿಜಯ್ ರೆಡಿ ಆಗಿದ್ದಾರೆ.

ಶಾರುಖ್ ಖಾನ್ ‘ಜವಾನ್​’ ಚಿತ್ರದಲ್ಲಿ ದಳಪತಿ ವಿಜಯ್​ಗೆ ಅತಿಥಿ ಪಾತ್ರ; ಸಂಭಾವನೆ ಎಷ್ಟು?
ಶಾರುಖ್​-ವಿಜಯ್
TV9 Web
| Edited By: |

Updated on: Jul 15, 2022 | 5:29 PM

Share

ಶಾರುಖ್ ಖಾನ್ (Shah Rukh Khan) ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ನಾಲ್ಕು ವರ್ಷಗಳ ಕಾಲ ಬಳಿಕ ನಟನೆಗೆ ಮರಳುತ್ತಿರುವ ಅವರು ಒಟ್ಟಾಗಿ ಮೂರು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಅದರಲ್ಲಿ ಹೆಚ್ಚು ಗಮನ ಸೆಳೆಯುತ್ತಿರುವುದು ಅಟ್ಲೀ ನಿರ್ದೇಶನದ ‘ಜವಾನ್​’ ಸಿನಿಮಾ (Jawan Movie). ಈ ಚಿತ್ರದಲ್ಲಿ ಶಾರುಖ್ ಖಾನ್ ಸೋಲ್ಜರ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಇತ್ತೀಚೆಗೆ ರಿಲೀಸ್ ಆದ ಗ್ಲಿಂಪ್ಸ್ ವಿಡಿಯೋ ಮೂಲಕ ಗೊತ್ತಾಗಿದೆ. ಈ ಸಿನಿಮಾದಲ್ಲಿ ‘ದಳಪತಿ’ ವಿಜಯ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

‘ಜವಾನ್​’ ಸಿನಿಮಾ ಸಾಕಷ್ಟು ವಿಚಾರಗಳಿಗೆ ಗಮನ ಸೆಳೆಯುತ್ತಿದೆ. ಅಟ್ಲೀ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದಲ್ಲಿ ಈಗಾಗಲೇ ವಿಜಯ್ ಸೇತುಪತಿ ಅವರು ನಟಿಸೋದು ಪಕ್ಕಾ ಆಗಿದೆ. ಈಗ ಈ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಲು ದಳಪತಿ ವಿಜಯ್ ರೆಡಿ ಆಗಿದ್ದಾರೆ. ಸೆಪ್ಟೆಂಬರ್ ಮಧ್ಯದ ವೇಳೆಗೆ ಚೆನ್ನೈನಲ್ಲಿ ಈ ಚಿತ್ರದ ಶೂಟಿಂಗ್ ನಡೆಯಲಿದೆ. ಒಂದು ಅಥವಾ ಎರಡು ದಿನಗಳ ಕಾಲ ಶೂಟಿಂಗ್ ಇರಲಿದೆ ಎಂದು ವರದಿ ಆಗಿದೆ.

ಕೆಲ ಹೀರೋಗಳು ಅತಿಥಿ ಪಾತ್ರ ಮಾಡಿದರೂ ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಾರೆ. ಅಚ್ಚರಿ ಎಂದರೆ ದಳಪತಿ ವಿಜಯ್ ಅವರು ಈ ಚಿತ್ರಕ್ಕಾಗಿ ಒಂದು ರೂಪಾಯಿ ಕೂಡ ಪಡೆಯುತ್ತಿಲ್ಲ. ಇದಕ್ಕೆ ಕಾರಣ ಅಟ್ಲೀ ಹಾಗೂ ಶಾರುಖ್ ಖಾನ್​. ವಿಜಯ್​​ಗೆ ಶಾರುಖ್ ಖಾನ್ ಹಾಗೂ ಅಟ್ಲಿ ಜತೆ ಒಳ್ಳೆಯ ಬಾಂಧವ್ಯ ಇದೆ. ಅಟ್ಲೀ ಹಾಗೂ ವಿಜಯ್ ಮೂರು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಹೀಗಾಗಿ, ಸಂಭಾವನೆ ಪಡೆಯುವುದಿಲ್ಲ ಎಂಬ ಮಾತನ್ನು ವಿಜಯ್ ಹೇಳಿದ್ದಾರೆ. ಅವರು ಅತಿಥಿ ಪಾತ್ರ ಮಾಡುತ್ತಿರುವ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಆಗಲಿದೆ.

ಇದನ್ನೂ ಓದಿ: ಹನಿಮೂನ್​ ಮುಗಿಸಿ ಬಂದ ನಯನತಾರಾ; ಶಾರುಖ್​ ಖಾನ್​ ಜೊತೆ ತಕ್ಷಣ ಶೂಟಿಂಗ್​ ಶುರು

‘ಜವಾನ್​’ ಸಿನಿಮಾದಲ್ಲಿ ಸಖತ್ ಮಾಸ್ ಆ್ಯಕ್ಷನ್ ಇರಲಿದೆ ಎನ್ನಲಾಗುತ್ತಿದೆ. ಈ ಚಿತ್ರದ ಗ್ಲಿಂಪ್ಸ್ ವಿಡಿಯೋ ಸಾಕಷ್ಟು ಗಮನ ಸೆಳೆದಿದೆ. ಈ ಚಿತ್ರ ಮುಂದಿನ ವರ್ಷ ಜೂನ್ 2ಕ್ಕೆ ತೆರೆಗೆ ಬರಲಿದೆ. ‘ರೆಡ್ ಚಿಲ್ಲೀಸ್ ಎಂಟರ್​ಟೇನ್​ಮೆಂಟ್’ ಮೂಲಕ ಗೌರವ್ ವರ್ಮಾ ಹಾಗೂ ಶಾರುಖ್ ಖಾನ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ನಯನತಾರಾ ಅವರು ಈ ಚಿತ್ರದಲ್ಲಿ ನಾಯಕಿ ಆಗಿ ನಟಿಸುತ್ತಿದ್ದಾರೆ. ಇನ್ನು, ದಳಪತಿ ವಿಜಯ್ ಅವರು ‘ವಾರಿಸು’ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ರಶ್ಮಿಕಾ ನಾಯಕಿ.

Follow Us
Web contact
Web contact

TV9 Kannada

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ