ಬಾಕ್ಸ್ ಆಫೀಸ್​ನಲ್ಲಿ ಅಜಿತ್ vs ವಿಜಯ್​; ಈಗಲೇ ಶುರುವಾಯ್ತು ಫ್ಯಾನ್ಸ್​ ವಾರ್

ಅಜಿತ್ ಹಾಗೂ ವಿಜಯ್ ಸಿನಿಮಾಗಳು ಕ್ಲ್ಯಾಶ್ ಆಗುತ್ತಿರುವುದು ಇದೇ ಮೊದಲೇನಲ್ಲ. 2014ರಲ್ಲಿ ವಿಜಯ್ ಅವರ ‘ಜಿಲ್ಲಾ’ ಹಾಗೂ ಅಜಿತ್ ಅವರ ‘ವೀರಂ’ ಚಿತ್ರಗಳು ಒಟ್ಟಿಗೆ ತೆರೆಗೆ ಬಂದಿದ್ದವು.

ಬಾಕ್ಸ್ ಆಫೀಸ್​ನಲ್ಲಿ ಅಜಿತ್ vs ವಿಜಯ್​; ಈಗಲೇ ಶುರುವಾಯ್ತು ಫ್ಯಾನ್ಸ್​ ವಾರ್
ಅಜಿತ್-ವಿಜಯ್
Follow us
| Updated By: ರಾಜೇಶ್ ದುಗ್ಗುಮನೆ

Updated on: Oct 28, 2022 | 3:59 PM

ನಟ ಅಜಿತ್ ಕುಮಾರ್ (Ajith Kumar) ಹಾಗೂ ನಟ ದಳಪತಿ ವಿಜಯ್ ಅಭಿಮಾನಿಗಳ ಮಧ್ಯೆ ಕಿರಿಕ್ ಸರ್ವೇಸಾಮಾನ್ಯ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಅನೇಕ ಸಮರಗಳು ನಡೆದಿವೆ. ಸಿನಿಮಾ ವಿಚಾರದಿಂದ ಹಿಡಿದು, ವೈಯಕ್ತಿಕ ಜೀವನದ ವಿಚಾರದವರೆಗೆ ಎಲ್ಲ ವಿಷಯಗಳಲ್ಲೂ ಅಜಿತ್ ಹಾಗೂ ವಿಜಯ್ ಅಭಿಮಾನಿಗಳು ಕಿತ್ತಾಡಿಕೊಳ್ಳುತ್ತಾರೆ. ಈಗ ಈ ಹೀರೋಗಳ ಸಿನಿಮಾಗಳು ಒಂದೇ ದಿನ ತೆರೆಗೆ ಬರುತ್ತಿವೆ. ಇದರಿಂದ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಕ್ಲ್ಯಾಶ್ ಏರ್ಪಡುತ್ತಿವೆ.

‘ವಲಿಮೈ’ ತೆರೆಗೆ ಬಂದ ನಂತರದಲ್ಲಿ ಇದೇ ತಂಡ ಮತ್ತೊಮ್ಮೆ ಜತೆಯಾಗಿತ್ತು. ‘ವಲಿಮೈ’ನಲ್ಲಿ ಅಜಿತ್ ಕುಮಾರ್ ಅವರು ಹೀರೋ ಆಗಿ ನಟಿಸಿದರೆ, ಎಚ್​. ವಿನೋದ್ ನಿರ್ದೇಶನ ಹಾಗೂ ಬೋನಿ ಕಪೂರ್ ನಿರ್ಮಾಣ ಈ ಚಿತ್ರಕ್ಕಿತ್ತು. ಇದೇ ಕಾಂಬಿನೇಷನ್​ನಲ್ಲಿ ‘ತುನಿವು’ ಮೂಡಿ ಬಂದಿದೆ. ಈ ಚಿತ್ರ ಮುಂದಿನ ಸಂಕ್ರಾಂತಿಗೆ ರಿಲೀಸ್ ಆಗಲಿದೆ. ಈ ಸಂಬಂಧ ಬೋನಿ ಕಪೂರ್ ಅವರು ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಿಲೀಸ್ ದಿನಾಂಕ ಖಚಿತಪಡಿಸಿದ್ದಾರೆ.

ಇದನ್ನೂ ಓದಿ
Image
Thala Ajith Kumar Birthday: ಅಜಿತ್​ ಕುಮಾರ್​ ಜನ್ಮದಿನ: ವಿಮಾನದ ಪೈಲಟ್​ ಕೂಡ ಆಗಿರುವ ಸ್ಟಾರ್​ ನಟನಿಗಿದೆ ಹಲವು ಹವ್ಯಾಸ
Image
ಒಟಿಟಿಯಲ್ಲಿ ‘ವಲಿಮೈ’ ದಾಖಲೆ; ಒಂದೇ ನಿಮಿಷಕ್ಕೆ 10 ಕೋಟಿ ಸ್ಟ್ರೀಮಿಂಗ್
Image
​ಕೀಳು ಮಟ್ಟಕ್ಕೆ ಬಂತು ಫ್ಯಾನ್ಸ್​ ವಾರ್​; ದಳಪತಿ ವಿಜಯ್​ ನಿಧನ ಎಂದು ಫೇಕ್​ ನ್ಯೂಸ್​ ಹಬ್ಬಿಸಿದ ಅಜಿತ್​ ಫ್ಯಾನ್ಸ್​
Image
ನಿರ್ಮಾಪಕನ ಕಾರಿಗೆ ಮೊಸರಿನ ಅಭಿಷೇಕ; ಅಜಿತ್ ಫ್ಯಾನ್ಸ್​ ಮೇಲೆ ಪೆಟ್ರೋಲ್​ ಬಾಂಬ್​​ ಎಸೆತ

ದಳಪತಿ ವಿಜಯ್ ನಟನೆಯ ‘ವಾರಿಸು’ ಕೂಡ ಅದೇ ಸಂದರ್ಭದಲ್ಲಿ ಬಿಡುಗಡೆ ಆಗಲಿದೆ. ಇದನ್ನು ಚಿತ್ರತಂಡ ಇತ್ತೀಚೆಗೆ ಖಚಿತಪಡಿಸಿತ್ತು. ವಂಶಿ ಪೈಡಿಪಲ್ಲಿ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಪೋಸ್ಟರ್​ಗಳು ಸಾಕಷ್ಟು ಗಮನ ಸೆಳೆದಿವೆ. ನಟಿ ರಶ್ಮಿಕಾ ಮಂದಣ್ಣ ಅವರು ಈ ಚಿತ್ರದಲ್ಲಿ ನಾಯಕಿ ಆಗಿ ನಟಿಸಿದ್ದಾರೆ.

ಅಜಿತ್ ಹಾಗೂ ವಿಜಯ್ ಸಿನಿಮಾಗಳು ಕ್ಲ್ಯಾಶ್ ಆಗುತ್ತಿರುವುದು ಇದೇ ಮೊದಲೇನಲ್ಲ. 2014ರಲ್ಲಿ ವಿಜಯ್ ಅವರ ‘ಜಿಲ್ಲಾ’ ಹಾಗೂ ಅಜಿತ್ ಅವರ ‘ವೀರಂ’ ಚಿತ್ರಗಳು ಒಟ್ಟಿಗೆ ತೆರೆಗೆ ಬಂದಿದ್ದವು. ಈ ವೇಳೆ ‘ವೀರಂ’ ಚಿತ್ರ ಹೆಚ್ಚು ಮೆಚ್ಚುಗೆ ಪಡೆಯಿತು. ‘ಜಿಲ್ಲಾ’ ಕೊಂಚ ಕಡಿಮೆ ಅಬ್ಬರಿಸಿತು. ಈ ಸಂದರ್ಭದಲ್ಲಿ ಅಜಿತ್ ಫ್ಯಾನ್ಸ್ ಹಬ್ಬ ಮಾಡಿದ್ದರು. ಈಗ 8 ವರ್ಷಗಳ ಬಳಿಕ ಇಬ್ಬರೂ ಮುಖಾಮುಖಿ ಆಗುತ್ತಿದ್ದಾರೆ. ಈಗಲೇ ಸೋಶಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ ವಾರ್ ಶುರುವಾಗಿದೆ. ಈ ರೇಸ್​ನಲ್ಲಿ ಗೆಲ್ಲೋದು ಯಾರು ಅನ್ನೋದು ಸದ್ಯದ ಕುತೂಹಲ.

ಇದನ್ನೂ ಓದಿ: ಬಿಡುಗಡೆ ಆಯ್ತ ಭಾರತದ ಟಾಪ್ ಹೀರೋಗಳ ಪಟ್ಟಿ; ದಳಪತಿ ವಿಜಯ್ ಫಸ್ಟ್​, ಯಶ್​ಗೆ ಎಷ್ಟನೇ ಸ್ಥಾನ?

ಈ ಮೊದಲು ರಿಲೀಸ್ ಆದ ವಿಜಯ್ ನಟನೆಯ ‘ಬೀಸ್ಟ್’ ಅಷ್ಟಾಗಿ ಅಬ್ಬರಿಸಿಲ್ಲ. ಇದೇ ಸಂದರ್ಭದಲ್ಲಿ ‘ಕೆಜಿಎಫ್ 2’ ರಿಲೀಸ್ ಆಗಿದ್ದರಿಂದ ‘ಬೀಸ್ಟ್’ಗೆ ಮತ್ತಷ್ಟು ಹೊಡೆತ ಉಂಟಾಯಿತು. ಈಗ ವಿಜಯ್​ಗೆ ಗೆಲ್ಲುವ ಅನಿವಾರ್ಯತೆ ಇದೆ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ