AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ ರಾಜಕೀಯಕ್ಕೆ ಬರುವುದು ಮತ್ತಷ್ಟು ಸನಿಹ; ನಡೆಯಿತು ಪ್ರಮುಖ ಬೆಳವಣಿಗೆ

‘ವಿಜಯ್ ಮಕ್ಕಳ್ ಇಯಕ್ಕಮ್’ ಸಂಘದ ಅಧ್ಯಕ್ಷರಾಗಿ ವಿಜಯ್ ನೇಮಕಗೊಂಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಯಾರೂ ರೇಸ್​ನಲ್ಲಿ ಇರಲಿಲ್ಲ. ಸರ್ವಾನುಮತದಿಂದ ಪಕ್ಷದವರು ವಿಜಯ್​ಗೆ ವೋಟ್ ಹಾಕಿದ್ದಾರೆ. ಪಕ್ಷದ ಪ್ರಮುಖ ಸ್ಥಾನಗಳನ್ನು ಕೂಡ ತುಂಬಲಾಗಿದೆ. ಹೀಗಾಗಿ, ಅಧಿಕೃತ ಘೋಷಣೆ ಹತ್ತಿರವಾಗಿದೆ ಎಂದು ಹೇಳಲಾಗುತ್ತಿದೆ. ‘ವಿಜಯ್ ಮಕ್ಕಳ್ ಇಯಕ್ಕಮ್’ನ ಶೀಘ್ರವೇ ಪಕ್ಷವಾಗಿ ಘೋಷಿಸುವ ಸಾಧ್ಯತೆ ಇದೆ.

ದಳಪತಿ ವಿಜಯ್ ರಾಜಕೀಯಕ್ಕೆ ಬರುವುದು ಮತ್ತಷ್ಟು ಸನಿಹ; ನಡೆಯಿತು ಪ್ರಮುಖ ಬೆಳವಣಿಗೆ
ದಳಪತಿ ವಿಜಯ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jan 27, 2024 | 4:06 PM

Share

ತಮಿಳು ಚಿತ್ರರಂಗದಲ್ಲಿ ಮಿಂಚಿದ ಬಳಿಕ ಅನೇಕರು ರಾಜಕೀಯಕ್ಕೆ ಕಾಲಿಟ್ಟಿದ್ದಾರೆ. ಈ ಸಾಲಿಗೆ ತಮಿಳು ನಟ ದಳಪತಿ ವಿಜಯ್ (Thalapathy Vijay) ಕೂಡ ಸೇರ್ಪಡೆ ಆಗುತ್ತಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಶೀಘ್ರವೇ ಅಧಿಕೃತ ಮಾಹಿತಿ ಹೊರ ಬೀಳೋ ಸಾಧ್ಯತೆ ಇದೆ. ದಳಪತಿ ವಿಜಯ್ ಅವರ ಪಾಳಯದಲ್ಲಿ ಕೆಲವು ಪ್ರಮುಖ ಬೆಳವಣಿಗೆಗಳು ನಡೆದಿವೆ. ಇದರಿಂದ ವಿಜಯ್ ಅವರು ರಾಜಕೀಯಕ್ಕೆ (Tamil Nadu Politics) ಬರೋದು ತುಂಬಾನೇ ಸನಿಹದಲ್ಲಿದೆ. ಜನರು ಅವರನ್ನು ರಾಜಕೀಯ ನಾಯಕನನ್ನಾಗಿ ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ದಳಪತಿ ವಿಜಯ್ ಅವರು ರಾಜಕೀಯಕ್ಕೆ ಎಂಟ್ರಿ ನೀಡುತ್ತಾರೆ, ತಮ್ಮದೇ ಪಕ್ಷ ಸ್ಥಾಪನೆ ಮಾಡುತ್ತಾರೆ ಅನ್ನೋದು ಮೊದಲಿನಿಂದಲೂ ಹರಿದಾಡುತ್ತಿರುವ ಸುದ್ದಿ. ಇದಕ್ಕೆ ಪೂರಕವಾಗಿ ಅವರು ಇತ್ತೀಚೆಗೆ ಸಾಕಷ್ಟು ಸಾಮಾಜಿಕ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವ ಕಾರಣದಿಂದಲೇ ಅವರು ಈ ರೀತಿ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟ. ಈಗ ಅವರು ರಾಜಕೀಯಕ್ಕೆ ಬರೋದು ಬಹುತೇಕ ಖಚಿತವಾಗಿದೆ.

‘ವಿಜಯ್ ಮಕ್ಕಳ್ ಇಯಕ್ಕಮ್’ ಸಂಘದ ಅಧ್ಯಕ್ಷರಾಗಿ ವಿಜಯ್ ನೇಮಕಗೊಂಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಯಾರೂ ರೇಸ್​ನಲ್ಲಿ ಇರಲಿಲ್ಲ. ಸರ್ವಾನುಮತದಿಂದ ಪಕ್ಷದವರು ವಿಜಯ್​ಗೆ ವೋಟ್ ಹಾಕಿದ್ದಾರೆ. ಪಕ್ಷದ ಪ್ರಮುಖ ಸ್ಥಾನಗಳನ್ನು ಕೂಡ ತುಂಬಲಾಗಿದೆ. ಹೀಗಾಗಿ, ಅಧಿಕೃತ ಘೋಷಣೆ ಹತ್ತಿರವಾಗಿದೆ ಎಂದು ಹೇಳಲಾಗುತ್ತಿದೆ. ‘ವಿಜಯ್ ಮಕ್ಕಳ್ ಇಯಕ್ಕಮ್’ನ ಶೀಘ್ರವೇ ಪಕ್ಷವಾಗಿ ಘೋಷಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ದಳಪತಿ ವಿಜಯ್ ಹೊಸ ಸಿನಿಮಾ ಹೆಸರು ಘೋಷಣೆ, ಇದು ಆಕಾಶದಲ್ಲಿ ನಡೆವ ಕತೆ

‘ಲಾಲ್ ಸಲಾಂ’ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈ ವೇಳೆ ರಜನಿಕಾಂತ್ ಕೂಡ ಈ ವಿಚಾರವನ್ನು ಅಧಿಕೃತ ಮಾಡಿದ್ದರು. ‘ತಮಿಳುನಾಡು ಜನತೆಗಾಗಿ ವಿಜಯ್ ಹೊಸ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದಾರೆ’ ಎಂದು ಹೇಳಿದ್ದರು. ಈ ಮೂಲಕ ಅವರು ರಾಜಕೀಯಕ್ಕೆ ಕಾಲಿಡೋದು ಹೌದು ಎಂಬುದನ್ನು ಖಚಿತಪಡಿಸಿದ್ದರು. ಈ ಮೊದಲು ರಜನಿಕಾಂತ್ ಪಕ್ಷ ಸ್ಥಾಪನೆ ಮಾಡಲು ಮುಂದಾಗಿದ್ದರು. ಆ ಬಳಿಕ ಆ ನಿರ್ಧಾರದಿಂದ ಹೊರ ಬಂದರು.

ಕಳೆದ ವರ್ಷ ರಿಲೀಸ್ ಆದ ದಳಪತಿ ವಿಜಯ್ ನಟನೆಯ ‘ಲಿಯೋ’ ಸಿನಿಮಾ ವಿಮರ್ಶೆಯಲ್ಲಿ ಸಾಧಾರಣ ಎನಿಸಿಕೊಂಡಿತು. ಇದು ಅವರ ವೃತ್ತಿ ಜೀವನದ ಕೊನೆಯ ಸಿನಿಮಾ ಆಗಲಿದೆ ಎಂದೇ ಹೇಳಲಾಗಿತ್ತು. ಅಚ್ಚರಿ ಎಂಬಂತೆ ಅವರು ‘GOAT’ ಸಿನಿಮಾ ಘೋಷಿಸಿದರು. ಈ ಚಿತ್ರದಲ್ಲಿ ಅವರು ಡಬಲ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವೆಂಕಟ್ ಪ್ರಭು ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿ ಎಲ್ಲರ ಗಮನ ಸೆಳೆಯಲಾಯಿತು. ಈ ವರ್ಷವೇ ಸಿನಿಮಾ ರಿಲೀಸ್ ಆಗಲಿದೆ. ಮತ್ತೆ ಅವರು ಚಿತ್ರರಂಗದಲ್ಲಿ ಮುಂದುವರಿಯುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ