AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ ರಾಜಕೀಯಕ್ಕೆ ಬರುವುದು ಮತ್ತಷ್ಟು ಸನಿಹ; ನಡೆಯಿತು ಪ್ರಮುಖ ಬೆಳವಣಿಗೆ

‘ವಿಜಯ್ ಮಕ್ಕಳ್ ಇಯಕ್ಕಮ್’ ಸಂಘದ ಅಧ್ಯಕ್ಷರಾಗಿ ವಿಜಯ್ ನೇಮಕಗೊಂಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಯಾರೂ ರೇಸ್​ನಲ್ಲಿ ಇರಲಿಲ್ಲ. ಸರ್ವಾನುಮತದಿಂದ ಪಕ್ಷದವರು ವಿಜಯ್​ಗೆ ವೋಟ್ ಹಾಕಿದ್ದಾರೆ. ಪಕ್ಷದ ಪ್ರಮುಖ ಸ್ಥಾನಗಳನ್ನು ಕೂಡ ತುಂಬಲಾಗಿದೆ. ಹೀಗಾಗಿ, ಅಧಿಕೃತ ಘೋಷಣೆ ಹತ್ತಿರವಾಗಿದೆ ಎಂದು ಹೇಳಲಾಗುತ್ತಿದೆ. ‘ವಿಜಯ್ ಮಕ್ಕಳ್ ಇಯಕ್ಕಮ್’ನ ಶೀಘ್ರವೇ ಪಕ್ಷವಾಗಿ ಘೋಷಿಸುವ ಸಾಧ್ಯತೆ ಇದೆ.

ದಳಪತಿ ವಿಜಯ್ ರಾಜಕೀಯಕ್ಕೆ ಬರುವುದು ಮತ್ತಷ್ಟು ಸನಿಹ; ನಡೆಯಿತು ಪ್ರಮುಖ ಬೆಳವಣಿಗೆ
ದಳಪತಿ ವಿಜಯ್
Follow us
 ಶ್ರೀಲಕ್ಷ್ಮೀ ಎಚ್
| Updated By: ಮದನ್​ ಕುಮಾರ್​

Updated on: Jan 27, 2024 | 4:06 PM

ತಮಿಳು ಚಿತ್ರರಂಗದಲ್ಲಿ ಮಿಂಚಿದ ಬಳಿಕ ಅನೇಕರು ರಾಜಕೀಯಕ್ಕೆ ಕಾಲಿಟ್ಟಿದ್ದಾರೆ. ಈ ಸಾಲಿಗೆ ತಮಿಳು ನಟ ದಳಪತಿ ವಿಜಯ್ (Thalapathy Vijay) ಕೂಡ ಸೇರ್ಪಡೆ ಆಗುತ್ತಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಶೀಘ್ರವೇ ಅಧಿಕೃತ ಮಾಹಿತಿ ಹೊರ ಬೀಳೋ ಸಾಧ್ಯತೆ ಇದೆ. ದಳಪತಿ ವಿಜಯ್ ಅವರ ಪಾಳಯದಲ್ಲಿ ಕೆಲವು ಪ್ರಮುಖ ಬೆಳವಣಿಗೆಗಳು ನಡೆದಿವೆ. ಇದರಿಂದ ವಿಜಯ್ ಅವರು ರಾಜಕೀಯಕ್ಕೆ (Tamil Nadu Politics) ಬರೋದು ತುಂಬಾನೇ ಸನಿಹದಲ್ಲಿದೆ. ಜನರು ಅವರನ್ನು ರಾಜಕೀಯ ನಾಯಕನನ್ನಾಗಿ ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ದಳಪತಿ ವಿಜಯ್ ಅವರು ರಾಜಕೀಯಕ್ಕೆ ಎಂಟ್ರಿ ನೀಡುತ್ತಾರೆ, ತಮ್ಮದೇ ಪಕ್ಷ ಸ್ಥಾಪನೆ ಮಾಡುತ್ತಾರೆ ಅನ್ನೋದು ಮೊದಲಿನಿಂದಲೂ ಹರಿದಾಡುತ್ತಿರುವ ಸುದ್ದಿ. ಇದಕ್ಕೆ ಪೂರಕವಾಗಿ ಅವರು ಇತ್ತೀಚೆಗೆ ಸಾಕಷ್ಟು ಸಾಮಾಜಿಕ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವ ಕಾರಣದಿಂದಲೇ ಅವರು ಈ ರೀತಿ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟ. ಈಗ ಅವರು ರಾಜಕೀಯಕ್ಕೆ ಬರೋದು ಬಹುತೇಕ ಖಚಿತವಾಗಿದೆ.

‘ವಿಜಯ್ ಮಕ್ಕಳ್ ಇಯಕ್ಕಮ್’ ಸಂಘದ ಅಧ್ಯಕ್ಷರಾಗಿ ವಿಜಯ್ ನೇಮಕಗೊಂಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಯಾರೂ ರೇಸ್​ನಲ್ಲಿ ಇರಲಿಲ್ಲ. ಸರ್ವಾನುಮತದಿಂದ ಪಕ್ಷದವರು ವಿಜಯ್​ಗೆ ವೋಟ್ ಹಾಕಿದ್ದಾರೆ. ಪಕ್ಷದ ಪ್ರಮುಖ ಸ್ಥಾನಗಳನ್ನು ಕೂಡ ತುಂಬಲಾಗಿದೆ. ಹೀಗಾಗಿ, ಅಧಿಕೃತ ಘೋಷಣೆ ಹತ್ತಿರವಾಗಿದೆ ಎಂದು ಹೇಳಲಾಗುತ್ತಿದೆ. ‘ವಿಜಯ್ ಮಕ್ಕಳ್ ಇಯಕ್ಕಮ್’ನ ಶೀಘ್ರವೇ ಪಕ್ಷವಾಗಿ ಘೋಷಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ದಳಪತಿ ವಿಜಯ್ ಹೊಸ ಸಿನಿಮಾ ಹೆಸರು ಘೋಷಣೆ, ಇದು ಆಕಾಶದಲ್ಲಿ ನಡೆವ ಕತೆ

‘ಲಾಲ್ ಸಲಾಂ’ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈ ವೇಳೆ ರಜನಿಕಾಂತ್ ಕೂಡ ಈ ವಿಚಾರವನ್ನು ಅಧಿಕೃತ ಮಾಡಿದ್ದರು. ‘ತಮಿಳುನಾಡು ಜನತೆಗಾಗಿ ವಿಜಯ್ ಹೊಸ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದಾರೆ’ ಎಂದು ಹೇಳಿದ್ದರು. ಈ ಮೂಲಕ ಅವರು ರಾಜಕೀಯಕ್ಕೆ ಕಾಲಿಡೋದು ಹೌದು ಎಂಬುದನ್ನು ಖಚಿತಪಡಿಸಿದ್ದರು. ಈ ಮೊದಲು ರಜನಿಕಾಂತ್ ಪಕ್ಷ ಸ್ಥಾಪನೆ ಮಾಡಲು ಮುಂದಾಗಿದ್ದರು. ಆ ಬಳಿಕ ಆ ನಿರ್ಧಾರದಿಂದ ಹೊರ ಬಂದರು.

ಕಳೆದ ವರ್ಷ ರಿಲೀಸ್ ಆದ ದಳಪತಿ ವಿಜಯ್ ನಟನೆಯ ‘ಲಿಯೋ’ ಸಿನಿಮಾ ವಿಮರ್ಶೆಯಲ್ಲಿ ಸಾಧಾರಣ ಎನಿಸಿಕೊಂಡಿತು. ಇದು ಅವರ ವೃತ್ತಿ ಜೀವನದ ಕೊನೆಯ ಸಿನಿಮಾ ಆಗಲಿದೆ ಎಂದೇ ಹೇಳಲಾಗಿತ್ತು. ಅಚ್ಚರಿ ಎಂಬಂತೆ ಅವರು ‘GOAT’ ಸಿನಿಮಾ ಘೋಷಿಸಿದರು. ಈ ಚಿತ್ರದಲ್ಲಿ ಅವರು ಡಬಲ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವೆಂಕಟ್ ಪ್ರಭು ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿ ಎಲ್ಲರ ಗಮನ ಸೆಳೆಯಲಾಯಿತು. ಈ ವರ್ಷವೇ ಸಿನಿಮಾ ರಿಲೀಸ್ ಆಗಲಿದೆ. ಮತ್ತೆ ಅವರು ಚಿತ್ರರಂಗದಲ್ಲಿ ಮುಂದುವರಿಯುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ