ವಿಜಯ್ ಸಿಎಂ ಆಗುವ ಕನಸು ಇಂದು, ನಿನ್ನೆಯದಲ್ಲ; 15 ವರ್ಷಗಳ ಹಿಂದೆಯೇ ಸೂಚನೆ ಕೊಟ್ಟಿದ್ದ ನಟ
Thalapathy Vijay: ವಿಜಯ್ ಅವರು ಅಂದು ಹೇಳಿದಂತೆ, ಹಂತ ಹಂತವಾಗಿ ತಮ್ಮ ಅಭಿಮಾನಿ ಬಳಗವನ್ನು ಸಂಘಟಿಸಿ, ಇಂದು ಅಡಿಪಾಯವನ್ನು ಗಟ್ಟಿಮಾಡಿಕೊಂಡು ರಾಜಕೀಯ ಅಖಾಡಕ್ಕೆ ಇಳಿದಿದ್ದಾರೆ. ತಮಿಳುನಾಡಿನ ಮುಂದಿನ ರಾಜಕೀಯ ಚಿತ್ರಣದಲ್ಲಿ ವಿಜಯ್ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂಬ ಚರ್ಚೆಗಳು ಈಗ ಜೋರಾಗಿವೆ.

ತಮಿಳು ಚಿತ್ರರಂಗದ ಅನೇಕರು ರಾಜಕೀಯಕ್ಕೆ ಎಂಟ್ರಿ ಕೊಟ್ಟು ಯಶಸ್ಸು ಕಂಡಿದ್ದಾರೆ. ಈ ಸಾಲಿನಲ್ಲಿ ದಳಪತಿ ವಿಜಯ್ ಕೂಡ ಸೇರಿದ್ದಾರೆ. ಅವರದ್ದು ಅಂತಿಂಥ ಗೆಲುವಲ್ಲ. ಕೆಲವೇ ವರ್ಷಗಳ ಹಿಂದೆ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವನ್ನು ಸ್ಥಾಪಿಸಿ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ. 2026ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಅವರು ಗೆದ್ದಿದ್ದಾರೆ. ಆದರೆ, ಅವರ ಈ ರಾಜಕೀಯ ಪಯಣದ ಸುಳಿವು 2011ರಲ್ಲೇ ಸಿಕ್ಕಿತ್ತು ಎಂಬುದು ಈಗ ವೈರಲ್ ಆಗುತ್ತಿರುವ ವಿಡಿಯೋದಿಂದ ಸ್ಪಷ್ಟವಾಗುತ್ತಿದೆ.
ಅಂದು ವಿಜಯ್ ಹೇಳಿದ್ದೇನು?
ವಿಜಯ್ ಆಗಿನ್ನೂ ಸಿನಿಮಾದಲ್ಲಿ ಸ್ಟಾರ್ ಆಗಿ ಬೆಳೆದಿದ್ದರು. ಅಂದಿನ ದಿನಗಳ ಸಂದರ್ಶನವೊಂದರಲ್ಲಿ ರಾಜಕೀಯ ಪ್ರವೇಶದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ್ದ ವಿಜಯ್, ‘ಸದ್ಯಕ್ಕೆ ನನ್ನ ಗಮನ ಸಿನಿಮಾದ ಮೇಲಿದೆ. ಆದರೆ, ತಮಿಳುನಾಡಿನ ಜನರಿಗಾಗಿ ಏನಾದರೂ ಮಾಡಬೇಕು ಎಂಬ ಆಸೆಯಿದೆ. ಸೂಕ್ತ ಸಮಯ, ಸಂದರ್ಭ ಬಂದಾಗ ಕಾಲವೇ ನನ್ನನ್ನು ಆ ಜಾಗದಲ್ಲಿ ತಂದು ಕೂರಿಸುತ್ತದೆ. ಅದಕ್ಕಾಗಿ ಅಡಿಪಾಯವನ್ನು ಗಟ್ಟಿಗೊಳಿಸುತ್ತಿದ್ದೇನೆ’ ಎಂದು ಹೇಳಿದ್ದರು.
ಅಂದು ನುಡಿದಂತೆ ಇಂದು ನಡೆದಿದೆ:
ವಿಜಯ್ ಅವರು ಅಂದು ಹೇಳಿದಂತೆ, ಹಂತ ಹಂತವಾಗಿ ತಮ್ಮ ಅಭಿಮಾನಿ ಬಳಗವನ್ನು ಸಂಘಟಿಸಿ, ಇಂದು ಅಡಿಪಾಯವನ್ನು ಗಟ್ಟಿಮಾಡಿಕೊಂಡು ರಾಜಕೀಯ ಅಖಾಡಕ್ಕೆ ಇಳಿದಿದ್ದಾರೆ. ತಮಿಳುನಾಡಿನ ಮುಂದಿನ ರಾಜಕೀಯ ಚಿತ್ರಣದಲ್ಲಿ ವಿಜಯ್ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂಬ ಚರ್ಚೆಗಳು ಈಗ ಜೋರಾಗಿವೆ.
ಇದನ್ನೂ ಓದಿ: ವಿಜಯ್ ಫಿಟ್ನೆಸ್ ಗುಟ್ಟೇನು? ಖಾಸಗಿ ಟ್ರೈನರ್ ಹಂಚಿಕೊಂಡ ಕುತೂಹಲಕಾರಿ ಮಾಹಿತಿ
ವಿಜಯ್ ಪ್ಲ್ಯಾನ್:
ವಿಜಯ್ ಅವರು ಪಕ್ಷ ಕಟ್ಟಿದ್ದು ಕೆಲ ವರ್ಷಗಳ ಹಿಂದೇ ಆಗಿದ್ದರೂ ಅವರು ಇದಕ್ಕಾಗಿ ಸಾಕಷ್ಟು ಪ್ಲ್ಯಾನ್ ಮಾಡಿದ್ದರು. ಅಭಿಮಾನಿಗಳನ್ನು ಸಂಘಟಿಸಿ, ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು. ಈ ಮೂಲಕ ಜನರಿಗೆ ಹತ್ತಿರವಾದರು. ಈಗ ಅವರು ಗೆದ್ದು ಸಿಎಂ ಆಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.




