AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ಸಿಎಂ ಆಗುವ ಕನಸು ಇಂದು, ನಿನ್ನೆಯದಲ್ಲ; 15 ವರ್ಷಗಳ ಹಿಂದೆಯೇ ಸೂಚನೆ ಕೊಟ್ಟಿದ್ದ ನಟ

Thalapathy Vijay: ವಿಜಯ್ ಅವರು ಅಂದು ಹೇಳಿದಂತೆ, ಹಂತ ಹಂತವಾಗಿ ತಮ್ಮ ಅಭಿಮಾನಿ ಬಳಗವನ್ನು ಸಂಘಟಿಸಿ, ಇಂದು ಅಡಿಪಾಯವನ್ನು ಗಟ್ಟಿಮಾಡಿಕೊಂಡು ರಾಜಕೀಯ ಅಖಾಡಕ್ಕೆ ಇಳಿದಿದ್ದಾರೆ. ತಮಿಳುನಾಡಿನ ಮುಂದಿನ ರಾಜಕೀಯ ಚಿತ್ರಣದಲ್ಲಿ ವಿಜಯ್ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂಬ ಚರ್ಚೆಗಳು ಈಗ ಜೋರಾಗಿವೆ.

ವಿಜಯ್ ಸಿಎಂ ಆಗುವ ಕನಸು ಇಂದು, ನಿನ್ನೆಯದಲ್ಲ; 15 ವರ್ಷಗಳ ಹಿಂದೆಯೇ ಸೂಚನೆ ಕೊಟ್ಟಿದ್ದ ನಟ
ವಿಜಯ್
ರಾಜೇಶ್ ದುಗ್ಗುಮನೆ
|

Updated on: May 12, 2026 | 3:11 PM

Share

ತಮಿಳು ಚಿತ್ರರಂಗದ ಅನೇಕರು ರಾಜಕೀಯಕ್ಕೆ ಎಂಟ್ರಿ ಕೊಟ್ಟು ಯಶಸ್ಸು ಕಂಡಿದ್ದಾರೆ. ಈ ಸಾಲಿನಲ್ಲಿ ದಳಪತಿ ವಿಜಯ್ ಕೂಡ ಸೇರಿದ್ದಾರೆ. ಅವರದ್ದು ಅಂತಿಂಥ ಗೆಲುವಲ್ಲ. ಕೆಲವೇ ವರ್ಷಗಳ ಹಿಂದೆ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವನ್ನು ಸ್ಥಾಪಿಸಿ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ. 2026ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಅವರು ಗೆದ್ದಿದ್ದಾರೆ. ಆದರೆ, ಅವರ ಈ ರಾಜಕೀಯ ಪಯಣದ ಸುಳಿವು 2011ರಲ್ಲೇ ಸಿಕ್ಕಿತ್ತು ಎಂಬುದು ಈಗ ವೈರಲ್ ಆಗುತ್ತಿರುವ ವಿಡಿಯೋದಿಂದ ಸ್ಪಷ್ಟವಾಗುತ್ತಿದೆ.

ಅಂದು ವಿಜಯ್ ಹೇಳಿದ್ದೇನು?

ವಿಜಯ್ ಆಗಿನ್ನೂ ಸಿನಿಮಾದಲ್ಲಿ ಸ್ಟಾರ್ ಆಗಿ ಬೆಳೆದಿದ್ದರು. ಅಂದಿನ ದಿನಗಳ ಸಂದರ್ಶನವೊಂದರಲ್ಲಿ ರಾಜಕೀಯ ಪ್ರವೇಶದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ್ದ ವಿಜಯ್, ‘ಸದ್ಯಕ್ಕೆ ನನ್ನ ಗಮನ ಸಿನಿಮಾದ ಮೇಲಿದೆ. ಆದರೆ, ತಮಿಳುನಾಡಿನ ಜನರಿಗಾಗಿ ಏನಾದರೂ ಮಾಡಬೇಕು ಎಂಬ ಆಸೆಯಿದೆ. ಸೂಕ್ತ ಸಮಯ, ಸಂದರ್ಭ ಬಂದಾಗ ಕಾಲವೇ ನನ್ನನ್ನು ಆ ಜಾಗದಲ್ಲಿ ತಂದು ಕೂರಿಸುತ್ತದೆ. ಅದಕ್ಕಾಗಿ ಅಡಿಪಾಯವನ್ನು ಗಟ್ಟಿಗೊಳಿಸುತ್ತಿದ್ದೇನೆ’ ಎಂದು ಹೇಳಿದ್ದರು.

ಅಂದು ನುಡಿದಂತೆ ಇಂದು ನಡೆದಿದೆ:

ವಿಜಯ್ ಅವರು ಅಂದು ಹೇಳಿದಂತೆ, ಹಂತ ಹಂತವಾಗಿ ತಮ್ಮ ಅಭಿಮಾನಿ ಬಳಗವನ್ನು ಸಂಘಟಿಸಿ, ಇಂದು ಅಡಿಪಾಯವನ್ನು ಗಟ್ಟಿಮಾಡಿಕೊಂಡು ರಾಜಕೀಯ ಅಖಾಡಕ್ಕೆ ಇಳಿದಿದ್ದಾರೆ. ತಮಿಳುನಾಡಿನ ಮುಂದಿನ ರಾಜಕೀಯ ಚಿತ್ರಣದಲ್ಲಿ ವಿಜಯ್ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂಬ ಚರ್ಚೆಗಳು ಈಗ ಜೋರಾಗಿವೆ.

ಇದನ್ನೂ ಓದಿ: ವಿಜಯ್ ಫಿಟ್​​ನೆಸ್​​ ಗುಟ್ಟೇನು? ಖಾಸಗಿ ಟ್ರೈನರ್ ಹಂಚಿಕೊಂಡ ಕುತೂಹಲಕಾರಿ ಮಾಹಿತಿ

ವಿಜಯ್ ಪ್ಲ್ಯಾನ್:

ವಿಜಯ್ ಅವರು ಪಕ್ಷ ಕಟ್ಟಿದ್ದು ಕೆಲ ವರ್ಷಗಳ ಹಿಂದೇ ಆಗಿದ್ದರೂ ಅವರು ಇದಕ್ಕಾಗಿ ಸಾಕಷ್ಟು ಪ್ಲ್ಯಾನ್ ಮಾಡಿದ್ದರು. ಅಭಿಮಾನಿಗಳನ್ನು ಸಂಘಟಿಸಿ, ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು. ಈ ಮೂಲಕ ಜನರಿಗೆ ಹತ್ತಿರವಾದರು. ಈಗ ಅವರು ಗೆದ್ದು ಸಿಎಂ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು