AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿಷಾ ಬರ್ತ್​​​ಡೇ ದಿನ ದಳಪತಿ ವಿಜಯ್ ರಾಜಕೀಯ ಭವಿಷ್ಯ; ಚುನಾವಣೆಗೂ ಮುನ್ನವೇ ಡಿವೋರ್ಸ್?

ತಮಿಳುನಾಡು ಚುನಾವಣೆಯಲ್ಲಿ ದಳಪತಿ ವಿಜಯ್ ಅವರ ಟಿವಿಕೆ ಪಕ್ಷ ಸ್ಪರ್ಧಿಸುತ್ತಿದ್ದು, ಏಪ್ರಿಲ್ 23ರಂದು ಮತದಾನ ನಡೆಯಲಿದೆ. ಇದರ ಬೆನ್ನಲ್ಲೇ ಪತ್ನಿ ಸಂಗೀತಾ ವಿಜಯ್ ವಿರುದ್ಧ ವಿಚ್ಛೇದನ ಅರ್ಜಿ ಸಲ್ಲಿಸಿದ್ದು, ನಟಿ ತ್ರಿಷಾ ಜೊತೆ ಅಕ್ರಮ ಸಂಬಂಧ ಆರೋಪ ಮಾಡಿದ್ದಾರೆ. ಏಪ್ರಿಲ್ 20ರಂದು ಡಿವೋರ್ಸ್ ಅರ್ಜಿ ವಿಚಾರಣೆ ನಡೆಯಲಿದ್ದು, ಇದು ವಿಜಯ್ ರಾಜಕೀಯ ಭವಿಷ್ಯದ ಮೇಲೆ ದೊಡ್ಡ ಪರಿಣಾಮ ಬೀರಲಿದೆ.

ತ್ರಿಷಾ ಬರ್ತ್​​​ಡೇ ದಿನ ದಳಪತಿ ವಿಜಯ್ ರಾಜಕೀಯ ಭವಿಷ್ಯ; ಚುನಾವಣೆಗೂ ಮುನ್ನವೇ ಡಿವೋರ್ಸ್?
ಸಂಗೀತಾ-ವಿಜಯ್-ತ್ರಿಷಾ
ರಾಜೇಶ್ ದುಗ್ಗುಮನೆ
|

Updated on: Mar 17, 2026 | 7:04 AM

Share

ಸದ್ಯ ತಮಿಳುನಾಡು ಚುನಾವಣಾ ದಿನಾಂಕ ಘೋಷಣೆ ಆಗಿದೆ. ಏಪ್ರಿಲ್ 23ರಂದು ಒಂದೇ ಹಂತದಲ್ಲಿ ರಾಜ್ಯದ 234 ಕ್ಷೇತ್ರಗಳಿಗೂ ಚುನಾವಣೆ ನಡೆಯಲಿದೆ. ದಳಪತಿ ವಿಜಯ್ ಅವರ ಟಿವಿಕೆ (ತಮಿಳಗ ವೆಟ್ರಿ ಕಳಗಮ್) ಪಕ್ಷ ಎಲ್ಲಾ ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ. ಹೀಗಿರುವಾಗಲೇ ಕೆಲವೊಂದು ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ. ವಿಜಯ್ ಅವರು ಚುನಾವಣೆಗೂ ಮೊದಲೇ ಡಿವೋರ್ಸ್ ಪಡೆದುಕೊಳ್ಳುತ್ತಾರಾ ಎಂಬ ಪ್ರಶ್ನೆ ಕಾಡಿದೆ. ತ್ರಿಷಾ ಬರ್ತ್​​​ಡೇ ದಿನ ವಿಜಯ್ (Vijay) ರಾಜಕೀಯ ಭವಿಷ್ಯ ನಿರ್ಧಾರ ಆಗಲಿದೆ.

ವಿಜಯ್ ಅವರ ಪತ್ನಿ ಸಂಗೀತಾ ಅವರು ಒಂದು ಗಂಭಿರ ಆರೋಪವನ್ನು ಮಾಡಿದ್ದಾರೆ. ವಿಜಯ್​​ಗೆ ನಟಿ ಜೊತೆ ಅಕ್ರಮ ಸಂಬಂಧ ಇದೆ ಎಂದು ಹೇಳಿದ್ದಾರೆ. ಇದು ಸಾಕಷ್ಟು ಚರ್ಚೆಗೆ ಕಾರಣ ಆಗಿದೆ. ಆ ನಟಿ ಯಾರು ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಲಾಗುತ್ತಿದೆ. ತ್ರಿಷಾ ಜೊತೆ ವಿಜಯ್ ಆಪ್ತತೆ ಬೆಳೆಸಿಕೊಂಡಿರುವುದರಿಂದ ಆ ನಟಿಯ ಮೇಲೆ ಆರೋಪ ಹೆಚ್ಚಿದೆ. ಸಂಗೀತಾ ಸಲ್ಲಿಕೆ ಮಾಡಿರುವ ಡಿವೋರ್ಸ್ ಅರ್ಜಿ ವಿಚಾರಣೆ ಕೌಟುಂಬಿಕ ನ್ಯಾಯಾಲಯದಲ್ಲಿ ಏಪ್ರಿಲ್ 20ರಂದು ನಡೆಯಲಿದೆ.

ಒಂದೊಮ್ಮೆ ಕೋರ್ಟ್ ಅರ್ಜಿ ವಿಚಾರಣೆ ನಡೆಸಿ, ಇಬ್ಬರೂ ಸಮ್ಮತಿಸಿದರೆ ಏಪ್ರಿಲ್ 20ರಂದೇ ಡಿವೋರ್ಸ್ ಸಿಗಲಿದೆಯೇ ಎಂಬ ಪ್ರಶ್ನೆ ಅನೇಕರದ್ದು. ಈ ವಿಚಾರಣೆ ಮುಗಿದ ಮೂರೇ ದಿನಕ್ಕೆ ಅಂದರೆ, ಏಪ್ರಿಲ್ 23ರಂದು ತಮಿಳುನಾಡಿನಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 20ರಂದು ವಿಜಯ್ ಚುನಾವಣೆ ಪ್ರಚಾರದಲ್ಲಿ ಬ್ಯುಸಿ ಇರುವುದರಿಂದ ಅವರು ಇಲ್ಲಿಗೆ ಹಾಜರಿ ಹಾಕುತ್ತಾರಾ ಎಂಬ ಪ್ರಶ್ನೆಯೂ ಕಾಡುತ್ತಿದೆ. ಅವರು ಈ ವಿಚಾರಣೆಯನ್ನು ಮುಂದಕ್ಕೆ ಹಾಕಿಕೊಳ್ಳುವಂತೆ ಮನವಿ ಮಾಡಬಹುದು.

ಇದನ್ನೂ ಓದಿ: ‘ನನಗೆ ವಿಚ್ಛೆದನ ಬಗ್ಗೆ ನಂಬಿಕೆ ಇಲ್ಲ, ಮದುವೆಗೂ ಮೊದಲು ನೂರು ಬಾರಿ ಯೋಚಿಸುವೆ’; ತ್ರಿಷಾ

ಇನ್ನು, ಮೇ 4 ತ್ರಿಷಾ ಜನ್ಮದಿನ. ಇದೇ ದಿನದಂದು ತಮಿಳುನಾಡು ಚುನಾವಣೆ ಫಲಿತಾಂಶ ಹೊರ ಬೀಳಲಿದೆ ಎಂಬುದು ವಿಶೇಷ. ಈ ದಿನ ವಿಜಯ್ ರಾಜಕೀಯ ಭವಿಷ್ಯ ನಿರ್ಧಾರ ಆಗಲಿದೆ. ಎಲ್ಲಾ ಕ್ಷೇತ್ರಗಳಲ್ಲೂ ವಿಜಯ್ ಸ್ಪರ್ಧಿಸುತ್ತಿದ್ದಾರೆ. ಒಂದೊಮ್ಮೆ ಅವರು ಗೆಲುವು ಕಂಡರೆ ಮುಂದಿನ ಸಿಎಂ ಆಗಿ ವಿಜಯ್ ಆಯ್ಕೆ ಆಗುತ್ತಾರೆ. ಸದ್ಯ ಅವರು ಹೋದಲ್ಲಿ ಬಂದಲ್ಲಿ ಸಾಕಷ್ಟು ಜನರು ಸೇರುತ್ತಿದ್ದಾರೆ. ಅದು ಮತವಾಗಿ ಬದಲಾಗುತ್ತದೆಯೇ ಎಂಬ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಲ್ಲಿ ನಮ್ಮ ಮಾತಿಗೆ ಗೌರವವೇ ನೀಡುತ್ತಿಲ್ಲ ಅಧಿಕಾರಿಗಳು
ಇಲ್ಲಿ ನಮ್ಮ ಮಾತಿಗೆ ಗೌರವವೇ ನೀಡುತ್ತಿಲ್ಲ ಅಧಿಕಾರಿಗಳು
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!