AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ ಚಿತ್ರಕ್ಕೆ ಶಾಕ್; ಸಿನಿಮಾ ರಿಲೀಸ್ ಮುಂದಕ್ಕೆ

Jana Nayagan Postponed: ದಳಪತಿ ವಿಜಯ್ ಅವರ ಕೊನೆಯ ಚಿತ್ರ 'ಜನ ನಾಯಗನ್' ಸೆನ್ಸಾರ್ ಮಂಡಳಿಯ ತಡೆಯಿಂದಾಗಿ ಮುಂದೂಡಲ್ಪಟ್ಟಿದೆ. ಸಿನಿಮಾ ತಂಡ ಕೆವಿಎನ್ ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದು, ಜನವರಿ 9ರಂದು ತೀರ್ಪು ನಿರೀಕ್ಷಿಸಲಾಗಿದೆ. ರಾಜಕೀಯ ಹಸ್ತಕ್ಷೇಪದ ಆರೋಪಗಳು ಕೇಳಿಬಂದಿವೆ. ಭಾರಿ ನಿರೀಕ್ಷೆ ಮೂಡಿಸಿದ್ದ ಈ ಚಿತ್ರದ ಮುಂಗಡ ಬುಕಿಂಗ್ ಹಣ ಹಿಂದಿರುಗಿಸುವ ಸವಾಲು ಎದುರಾಗಿದೆ. ಎಲ್ಲ ಅಡೆತಡೆ ನಿವಾರಣೆಯಾದರೆ ಜನವರಿ 14ಕ್ಕೆ ಬಿಡುಗಡೆಯಾಗುವ ಸಾಧ್ಯತೆ ಇದೆ.

‘ಜನ ನಾಯಗನ್’ ಚಿತ್ರಕ್ಕೆ ಶಾಕ್; ಸಿನಿಮಾ ರಿಲೀಸ್ ಮುಂದಕ್ಕೆ
ವಿಜಯ್
ರಾಜೇಶ್ ದುಗ್ಗುಮನೆ
|

Updated on:Jan 08, 2026 | 6:56 AM

Share

ದಳಪತಿ ವಿಜಯ್ (Thalapathy Vijay) ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದವರು. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಈಗ ರಾಜಕೀಯಕ್ಕೆ ಬರಲು ಅವರು ಅಡಿಯಾಗುತ್ತಿದ್ದಾರೆ. ಅವರ ಕೊನೆಯ ಚಿತ್ರ ‘ಜನ ನಾಯಗನ್’ಗಾಗಿ ಅಭಿಮಾನಿಗಳು ಕಾತುರದಿಂದ ಕಾದಿದ್ದರು. ಆದರೆ, ಈಗ ಸಿನಿಮಾ ರಿಲೀಸ್ ತಾತ್ಕಲಿಕವಾಗಿ ಮುಂದಕ್ಕೆ ಹೋಗಿದೆ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ. ಇದರ ಹಿಂದೆ ರಾಜಕೀಯದ ಕೆಸರೆರೆಚಾಟ ಇರಬಹುದು ಎಂದು ಕೂಡ ಊಹಿಸಲಾಗುತ್ತಿದೆ.

ಜನ ನಾಯಗನ್ ಚಿತ್ರಕ್ಕೆ ಸೆನ್ಸಾರ್ ಮಾಡಿಸಲು ‘ಕೆವಿಎನ್’ ಸಂಸ್ಥೆ ಡಿಸೆಂಬರ್ 18ರಂದೇ ಸಿನಿಮಾ ಸಲ್ಲಿಕೆ ಮಾಡಿತ್ತು. ಸಿನಿಮಾ ನೋಡಿದ ಮಂಡಳಿ 27 ಕಡೆ ಬದಲವಾಣೆ/ಕಟ್​ಗೆ ಸೂಚನೆ ನೀಡಿತ್ತು. ಇದನ್ನು ಸಿನಿಮಾ ಪಾಲಿಸಿತ್ತು. ನಂತರ ಸಿನಿಮಾನ ಮರು ಸಲ್ಲಿಕೆ ಮಾಡಿತ್ತು. ಆದರೆ, ಇದನ್ನು ಮಂಡಳಿ ಒಪ್ಪಿಲ್ಲ. ವಿಶೇಷ ಮಂಡಳಿಗೆ ಸಿನಿಮಾ ವೀಕ್ಷಿಸಲು ಶಿಫಾರಸು ಮಾಡಲು ಸೂಚನೆ ನೀಡಿತ್ತು. ಸೆನ್ಸಾರ್ ಮಂಡಳಿಯಿಂದ ಸರಿಯಾದ ರೆಸ್ಪಾನ್ಸ್ ಇಲ್ಲ ಆರೋಪವನ್ನೂ ತಂಡ ಮಾಡಿದೆ. ಈ ಎಲ್ಲಾ ಕಾರಣದಿಂದ ಸಿನಿಮಾ ತಂಡ ಆಕ್ರೋಶ ಹೊರಹಾಕಿತ್ತು.

ಈ ವಿಷಯವಾಗಿ ಕೆವಿಎನ್ ನಿರ್ಮಾಣ ಸಂಸ್ಥೆ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದೆ. ಸಿನಿಮಾ ತಂಡ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದ್ದು, ಜನವರಿ 9ಕ್ಕೆ ನೀಡುವ ಸಾಧ್ಯತೆ ಇದೆ. ಸೆನ್ಸಾರ್ ಪ್ರಮಾಣಪತ್ರ ಸಿಗದ ಹಿನ್ನೆಲೆಯಲ್ಲಿ ಸಿನಿಮಾ ರಿಲೀಸ್ ತಾತ್ಕಾಲಿಕವಾಗಿ ಮುಂದಕ್ಕೆ ಹೋಗಿದೆ.ಈ ಬಗ್ಗೆ ಕೆವಿಎನ್ ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತವಾಗಿ ಮಾಹಿತಿ ನೀಡಿದೆ.

ಇದನ್ನೂ ಓದಿ: ಕಾಲ್ತುಳಿತ ದುರಂತದ ಬಳಿಕವೂ ಮತ್ತೆ ದಾಖಲೆ ಪ್ರಮಾಣದಲ್ಲಿ ಜನ ಸೇರಿಸಲು ಸಜ್ಜಾದ ದಳಪತಿ ವಿಜಯ್

ದಳಪತಿ ವಿಜಯ್ ಕೊನೆಯ ಸಿನಿಮಾ ಎಂಬ ಕಾರಣದಿಂದ ‘ಜನ ನಾಯಗನ್’ ಮೇಲಿನ ನಿರೀಕ್ಷೆ ಹೆಚ್ಚಿತ್ತು. ರಿಲೀಸ್​​ಗೂ ಮೊದಲೇ ಮುಂಗಡ ಟಿಕೆಟ್ ಬುಕಿಂಗ್​​ನಿಂದ ಸಿನಿಮಾ ಕೋಟಿ ಕೋಟಿ ಬಿಸ್ನೆಸ್ ಮಾಡಿತ್ತು. ಆದರೆ, ಈಗ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿರುವುದರಿಂದ ಆ ಹಣವನ್ನು ಪ್ರೇಕ್ಷಕನಿಗೆ ಮರಳಿ ನೀಡಬೇಕಾದ ಸವಾಲು ಇದೆ. ಒಂದೊಮ್ಮೆ ವಾರದ ಒಳಗೆ ಎಲ್ಲವೂ ಕ್ಲಿಯರ್ ಆದರೆ, ಜನವರಿ 14ರಂದೇ ಸಿನಿಮಾ ರಿಲೀಸ್ ಆಗಬಹುದು ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:55 am, Thu, 8 January 26

ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು