AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಫಲಿತಾಂಶದ ಮೇಲೆ ದಳಪತಿ ವಿಜಯ್ ಸಿನಿಮಾ ಭವಿಷ್ಯ ನಿರ್ಧಾರ

ದಳಪತಿ ವಿಜಯ್ ರಾಜಕೀಯ ಪ್ರವೇಶಿಸಿ, ಟಿವಿಕೆ ಪಕ್ಷದ ಮೂಲಕ ತಮಿಳುನಾಡು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಅವರ ಸಿನಿಮಾ ಭವಿಷ್ಯವು ಈ ಚುನಾವಣಾ ಫಲಿತಾಂಶದ ಮೇಲೆ ನಿಂತಿದೆ. ರಾಜಕೀಯ ಯಶಸ್ಸು ಸಿಗದಿದ್ದರೆ, ವರ್ಷಕ್ಕೆ ಎರಡು ಸಿನಿಮಾಗಳನ್ನು ಮಾಡುವ ಯೋಜನೆಯಿದೆ. ರಾಜಕೀಯದಲ್ಲಿ ಹಿನ್ನಡೆಯಾದರೆ ಅಟ್ಲಿ ನಿರ್ದೇಶನದ ಸಿನಿಮಾ ಕೂಡ ಅಕ್ಟೋಬರ್‌ನಲ್ಲಿ ಘೋಷಣೆಯಾಗುವ ಸಾಧ್ಯತೆಯಿದೆ.

ಚುನಾವಣೆ ಫಲಿತಾಂಶದ ಮೇಲೆ ದಳಪತಿ ವಿಜಯ್ ಸಿನಿಮಾ ಭವಿಷ್ಯ ನಿರ್ಧಾರ
ವಿಜಯ್ Image Credit source: news lankasri
ರಾಜೇಶ್ ದುಗ್ಗುಮನೆ
|

Updated on: Mar 25, 2026 | 1:08 PM

Share

ದಳಪತಿ ವಿಜಯ್ ಕೊನೆಯ ಸಿನಿಮಾ ಎನ್ನಲಾಗಿದ್ದ ‘ಜನ ನಾಯಗನ್’ ರಿಲೀಸ್​​ಗೆ ಅಭಿಮಾನಿಗಳು ಕಾದಿದ್ದರು. ಆದರೆ, ಸಿನಿಮಾ ಸದ್ಯಕ್ಕಂತೂ ರಿಲೀಸ್ ಆಗೋದು ಅನುಮಾನವೇ. ಸದ್ಯ ವಿಜಯ್ ಅವರು ತಮಿಳುನಾಡು ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಅವರು ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದಾರೆ. ಹೀಗಿರುವಾಗಲೇ ಅವರ ಸಿನಿಮಾ ಭವಿಷ್ಯ ಈಗಲೇ ಮುಗಿದಿಲ್ಲ ಎಂದು ಹೇಳಲಾಗುತ್ತಾ ಇದೆ. ಚುನಾವಣೆ ಫಲಿತಾಂಶ ಎಲ್ಲವನ್ನೂ ನಿರ್ಧಾರ ಮಾಡಲಿದೆ.

ವಿಜಯ್ ಅವರು ರಾಜಕೀಯಕ್ಕೆ ಕಾಲಿಡಬೇಕು ಎಂದು ನಿರ್ಧರಿಸಿಯಾಗಿದೆ. ಟಿವಿಕೆ ಹೆಸರಿನ ಪಕ್ಷ ಸ್ಥಾಪಿಸಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಅವರ ಪಕ್ಷ ತಮಿಳುನಾಡಿನಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸುವ ಗುರಿ ಹೊಂದಿದ್ದಾರೆ. ದಳಪತಿ ವಿಜಯ್​​ಗೆ ರಾಜಕೀಯ ಹೊಸದು. ಅವರು ತಮ್ಮ ಜನಪ್ರಿಯತೆ ಬಳಸಿ ಮೊದಲ ಚುನಾವಣೆಯಲ್ಲೇ ಗೆದ್ದೇ ಬಿಡುತ್ತಾರೆ ಎಂದು ಹೇಳೋದು ಕಷ್ಟ.

ಒಂದೊಮ್ಮೆ ಟಿವಿಕೆ ಪಕ್ಷ ಚುನಾವಣೆಯಲ್ಲಿ ಬಹುಮತ ಪಡೆದರೆ ವಿಜಯ್ ತಮಿಳುನಾಡು ಸಿಎಂ ಆಗಲಿದ್ದಾರೆ. ಒಂದೊಮ್ಮೆ ರಾಜಕೀಯ ಕೈ ಹಿಡಿಯದೇ ಇದ್ದರೆ ಮುಂದಿನ ಐದು ವರ್ಷಗಳ ಕಾಲ ಅವರು ವರ್ಷಕ್ಕೆ ಎರಡು ಸಿನಿಮಾಗಳನ್ನು ಮಾಡುವ ಗುರಿ ಹೊಂದಿದ್ದಾರೆ. ಈ ವೇಳೆ ಅವರು ಹಿಂಬದಿಯಲ್ಲಿ ಪಕ್ಷ ಬೆಳೆಸುವ ಕಾರ್ಯವನ್ನೂ ಮಾಡಲಿದ್ದಾರೆ.

ಇದನ್ನೂ ಓದಿ: ಇಫ್ತಾರ್​​ಕೂಟದಲ್ಲಿ ಭಾಗಿ ಆದ ದಳಪತಿ ವಿಜಯ್; ವಿವಾದದಿಂದ ತಪ್ಪಿಸಿಕೊಳ್ಳಲು ಹೊಸ ಐಡಿಯಾ

ಅಟ್ಲಿ ಅವರು ಸದ್ಯ ಅಲ್ಲು ಅರ್ಜುನ್ ಸಿನಿಮಾದ ನಿರ್ದೇಶನದಲ್ಲಿ ಬ್ಯುಸಿ ಇದ್ದಾರೆ. ಒಂದೊಮ್ಮೆ ವಿಜಯ್ ರಾಜಕೀಯ ಭವಿಷ್ಯ ಅತಂತ್ರವಾದರೆ ಅಟ್ಲಿ ಜೊತೆ ವಿಜಯ್ ಸಿನಿಮಾ ಮಾಡುವ ಸಾಧ್ಯತೆ ಇದೆಯಂತೆ. ರಾಜಕೀಯದಲ್ಲಿ ಯಶಸ್ಸು ಸಿಗದೆ ಇದ್ದರೆ ಅಕ್ಟೋಬರ್​ ಅಲ್ಲಿ ಸಿನಿಮಾ ಘೋಷಣೆ ಆಗುವ ಸಾಧ್ಯತೆ ಇದೆ. ವಿಜಯ್ ಅವರು ಟಿವಿಕೆ ಪಕ್ಷ ಕಟ್ಟಿ ಅದನ್ನು ಬೆಳೆಸುತ್ತಿದ್ದಾರೆ. ಕರೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಾಕಷ್ಟು ಹಿನ್ನಡೆ ಉಂಟು ಮಾಡಿದೆ. ಈ ಪ್ರಕರಣದಲ್ಲಿ ಅವರು ಇನ್ನೂ ತನಿಖೆ ಎದುರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು