AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯಕ್ಕೆ ಎಂಟ್ರಿ ಕೊಡಲು ಸಿನಿಮಾ ರಂಗವನ್ನೇ ವೇದಿಕೆ ಮಾಡಿಕೊಂಡ ವಿಜಯ್

ದಳಪತಿ ವಿಜಯ್ ತಮ್ಮ ಸಿನಿಮಾ ರಂಗವನ್ನು ರಾಜಕೀಯ ಪ್ರವೇಶಕ್ಕೆ ವೇದಿಕೆಯನ್ನಾಗಿ ಬಳಸಿಕೊಂಡರು. ಅಭಿಮಾನವನ್ನು ಮತಗಳಾಗಿ ಪರಿವರ್ತಿಸಿದರು. ಮೆರ್ಸಲ್, ಸರ್ಕಾರ್‌ನಂತಹ ರಾಜಕೀಯ ಕಥಾಹಂದರದ ಸಿನಿಮಾಗಳು ಅವರ ಸಾಮಾಜಿಕ ಕಳಕಳಿಯನ್ನು ಬಿಂಬಿಸಿದವು. ತಮಿಳುನಾಡಿನ ಜನರ ಧ್ವನಿಯಾದ ವಿಜಯ್, ರಾಜಕೀಯದಲ್ಲಿ ಯಶಸ್ಸು ಕಂಡರು, ತಮ್ಮ ಸಿನಿಮಾಗಳ ಮೂಲಕ ಪ್ರಬಲ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಿದರು.

ರಾಜಕೀಯಕ್ಕೆ ಎಂಟ್ರಿ ಕೊಡಲು ಸಿನಿಮಾ ರಂಗವನ್ನೇ ವೇದಿಕೆ ಮಾಡಿಕೊಂಡ ವಿಜಯ್
ವಿಜಯ್
ರಾಜೇಶ್ ದುಗ್ಗುಮನೆ
|

Updated on: May 04, 2026 | 3:21 PM

Share

ದಳಪತಿ ವಿಜಯ್ ಅವರು ರಾಜಕೀಯದಲ್ಲಿ ಯಶಸ್ಸು ಕಂಡಿದ್ದಾರೆ. ಹಲವು ವರ್ಷಗಳ ಕಾಲ ಸಿನಿಮಾ ರಂಗದಲ್ಲಿ ಅವರು ಸಂಪಾದಿಸಿದ ಅಭಿಮಾನ ಈಗ ಮತವಾಗಿ ಬದಲಾಗಿದೆ. ಅವರು ತಮಗೆ ಸಿಕ್ಕ ಬಣ್ಣದ ಲೋಕದ ವೇದಿಕೆಯನ್ನು ಸರಿಯಾದ ರೂಪದಲ್ಲಿ ಬಳಸಿಕೊಂಡರು. ಜನರ ನೋವು-ನಲಿವುಗಳಿಗೆ ಸ್ಪಂದಿಸುವ ಒಂದು ದೊಡ್ಡ ವೇದಿಕೆಯಾಗಿ ಬೆಳೆದಿದೆ. ಆರಂಭದಲ್ಲಿ ಕಮರ್ಷಿಯಲ್ ಮತ್ತು ರೊಮ್ಯಾಂಟಿಕ್ ಹೀರೋ ಆಗಿ ಗುರುತಿಸಿಕೊಂಡ ವಿಜಯ್, ನಂತರದ ವರ್ಷಗಳಲ್ಲಿ ತಮಿಳುನಾಡಿನ ಪ್ರಬಲ ರಾಜಕೀಯ ಧ್ವನಿಯಾಗಿ ರೂಪಾಂತರಗೊಂಡರು. ಅವರ ಈ ಪಯಣದಲ್ಲಿ ರಾಜಕೀಯ ಕಥಾಹಂದರ ಹೊಂದಿರುವ ಕೆಲವು ಸಿನಿಮಾಗಳನ್ನು ಮಾಡಿದ್ದಾರೆ.

ವಿಜಯ್ ಸಿನಿಮಾಗಳಲ್ಲಿ ರಾಜಕೀಯದ ಕಿಚ್ಚು:

ವಿಜಯ್ ಅವರ ರಾಜಕೀಯ ಪ್ರವೇಶಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದ್ದು ಅವರ ಸಿನಿಮಾಗಳಲ್ಲಿನ ಹರಿತವಾದ ಸಂಭಾಷಣೆಗಳು ಮತ್ತು ಸಾಮಾಜಿಕ ಕಳಕಳಿ. ಈ ನಿಟ್ಟಿನಲ್ಲಿ ಕೆಲವು ಪ್ರಮುಖ ಸಿನಿಮಾಗಳ ವಿವರ ಇಲ್ಲಿದೆ.

ಮೆರ್ಸಲ್: ಅಟ್ಲಿ ನಿರ್ದೇಶನದ ‘ಮೆರ್ಸೆಲ್’ ಸಿನಿಮಾ ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟುಹಾಕಿತು. ಇದು ರಾಜಕೀಯ ಹಿನ್ನೆಲೆ ಹೊಂದಿತ್ತು. ಅವರ ರಾಜಕೀಯ ಕನಸಿಗೆ ಈ ಸಿನಿಮಾ ಸಾಕಷ್ಟು ವೇಗ ನೀಡಿತು. ದೇಶದ ಆರೋಗ್ಯ ವ್ಯವಸ್ಥೆ ಮತ್ತು ಜಿಎಸ್‌ಟಿ ವಿಷಯಗಳ ಕುರಿತು ಈ ಸಿನಿಮಾ ಬೆಳಕು ಚೆಲ್ಲಿತ್ತು. ಸಾಮಾನ್ಯ ಜನರ ಪರವಾಗಿ ಧ್ವನಿ ಎತ್ತುವ ನಾಯಕನಾಗಿ ವಿಜಯ್ ಇಲ್ಲಿ ಮಿಂಚಿದ್ದರು.

ಸರ್ಕಾರ್: ರಾಜಕೀಯ ವ್ಯವಸ್ಥೆಯ ಭ್ರಷ್ಟಾಚಾರ ಹಾಗೂ ಒಂದು ಮತದ ಪ್ರಾಮುಖ್ಯತೆಯನ್ನು ಹೇಳುವ ಕಥೆಯನ್ನು ‘ಸರ್ಕಾರ್’ ಹೊಂದಿತ್ತು. ಈ ಸಿನಿಮಾ ರಿಲೀಸ್ ಬಳಿಕ ವಿಜಯ್ ರಾಜಕೀಯಕ್ಕೆ ಬರೋದು ಪಕ್ಕಾ ಎಂಬ ಮಾತುಗಳು ಕೇಳಿ ಬಂದವು. ಕಳ್ಳಮತದಾನದ ವಿರುದ್ಧ ಹೋರಾಡುವ ಎನ್‌ಆರ್​ಐ ಉದ್ಯಮಿಯ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು.

ಕತ್ತಿ : ರೈತರ ಆತ್ಮಹತ್ಯೆ ಮತ್ತು ಕಾರ್ಪೊರೇಟ್ ಕಂಪನಿಗಳ ದಬ್ಬಾಳಿಕೆಯ ವಿರುದ್ಧದ ಹೋರಾಟದ ಕಥೆಯೇ ‘ಕತ್ತಿ’. ಈ ಸಿನಿಮಾ ವಿಜಯ್ ಅವರನ್ನು ಕೇವಲ ನಟನನ್ನಾಗಿ ಅಲ್ಲದೆ, ಒಬ್ಬ ಹೋರಾಟಗಾರನನ್ನಾಗಿ ಬಿಂಬಿಸಿತು.

ತುಪ್ಪಾಕಿ: ದೇಶಪ್ರೇಮ ಮತ್ತು ಭಯೋತ್ಪಾದನೆಯ ವಿರುದ್ಧದ ಕಥೆಯನ್ನು ‘ತುಪ್ಪಾಕಿ’ ಹೊಂದಿತ್ತು. ಇದು ನಮ್ಮ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಇದು ಎತ್ತಿ ತೋರಿಸಿತ್ತು.

ಇದನ್ನೂ ಓದಿ:

ಜನ ನಾಯಗನ್: ರಾಜಕೀಯಕ್ಕೆ ಕಾಲಿಡೋದಕ್ಕೂ ಮೊದಲು ಒಂದೊಳ್ಳೆಯ ರಾಜಕೀಯ ಕಥೆ ಹೇಳುವ ಆಲೋಚನೆ ವಿಜಯ್​ಗೆ ಇತ್ತು. ಇದಕ್ಕಾಗಿ ಅವರು ‘ಜನ ನಾಯಗನ್’ ಚಿತ್ರ ಆಯ್ಕೆ ಮಾಡಿಕೊಂಡರು. ಇದು ಅವರ ‘ತಮಿಳಗ ವೆಟ್ರಿ ಕಳಗಂ’ ಪಕ್ಷಕ್ಕೆ ಸೈದ್ಧಾಂತಿಕ ಶಕ್ತಿ ತುಂಬುವಂತಿತ್ತು. ಆದರೆ, ಈ ಸಿನಿಮಾ ಅಂದುಕೊಂಡಂತೆ ತೆರೆಗೆ ಬಂದಿಲ್ಲ. ವಿಜಯ್ ಸಿಎಂ ಆದ ಬಳಿಕ ಚಿತ್ರ ತೆರೆಗೆ ಬರೋ ನಿರೀಕ್ಷೆ ಇದೆ. ಸಿನಿಮಾ ರಂಗಕ್ಕೆ ಅವರು ವಿದಾಯ ಹೇಳುವ ಸೂಚನೆ ನೀಡಿದ್ದರೂ, ಅವರು ಕಟ್ಟಿಕೊಟ್ಟ ‘ಮಾಸ್’ ಮತ್ತು ‘ಸೋಶಿಯಲ್’ ಪಾತ್ರಗಳು ಜನರ ಮನದಲ್ಲಿ ಶಾಶ್ವತವಾಗಿ ಉಳಿಯಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?