AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಜಯ್ ಆ ಗುಣ ನನಗೆ ಯಾವಾಗಲೂ ಇಷ್ಟ ಆಗಲ್ಲ’; ತ್ರಿಷಾ ಕೃಷ್ಣನ್

ದಳಪತಿ ವಿಜಯ್ ಅವರ ಟಿವಿಎಕ್ಸ್ ಪಕ್ಷ ತಮಿಳುನಾಡು ರಾಜಕೀಯದಲ್ಲಿ 108 ಸ್ಥಾನಗಳನ್ನು ಗೆದ್ದ ನಂತರ, ವಿಜಯ್ ಅವರ ಬಗ್ಗೆ ನಟಿ ತ್ರಿಷಾ ಈ ಹಿಂದೆ ಆಡಿದ್ದ ಮಾತುಗಳು ಈಗ ವೈರಲ್ ಆಗಿವೆ. 'ಸೈಲೆಂಟ್ ಕಿಲ್ಲರ್' ಎಂದಿದ್ದ ತ್ರಿಷಾ, ವಿಜಯ್ ಅವರ ಮೌನ ವ್ಯಕ್ತಿತ್ವದ ಬಗ್ಗೆ ಮುಕ್ತವಾಗಿ ಮಾತನಾಡಿದ್ದರು. ಅವರ ಈ ನಿಗೂಢ ಆಕರ್ಷಣೆಯೇ ರಾಜಕೀಯ ಅಖಾಡದಲ್ಲೂ ಗೆಲುವಿಗೆ ಕಾರಣವಾಯಿತೇ ಎಂಬ ಚರ್ಚೆ ಶುರುವಾಗಿದೆ.

‘ವಿಜಯ್ ಆ ಗುಣ ನನಗೆ ಯಾವಾಗಲೂ ಇಷ್ಟ ಆಗಲ್ಲ’; ತ್ರಿಷಾ ಕೃಷ್ಣನ್
ವಿಜಯ್-ತ್ರಿಷಾ
ರಾಜೇಶ್ ದುಗ್ಗುಮನೆ
|

Updated on: May 08, 2026 | 3:25 PM

Share

ಕಾಲಿವುಡ್‌ನ ಹಿಟ್ ಜೋಡಿ ಎನಿಸಿಕೊಂಡಿರುವ ದಳಪತಿ ವಿಜಯ್ ಮತ್ತು ತ್ರಿಷಾ ಕೃಷ್ಣನ್ ಅವರ ಸ್ನೇಹಕ್ಕೆ ಎರಡು ದಶಕಗಳ ಇತಿಹಾಸವಿದೆ. ಸದ್ಯ ತಮಿಳುನಾಡು ರಾಜಕೀಯದಲ್ಲಿ ವಿಜಯ್ ಅವರ ಟಿವಿಕೆ ಪಕ್ಷ 108 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ಐತಿಹಾಸಿಕ ಗೆಲುವಿನ ಬೆನ್ನಲ್ಲೇ, ವಿಜಯ್ ಅವರ ವ್ಯಕ್ತಿತ್ವದ ಬಗ್ಗೆ ನಟಿ ತ್ರಿಷಾ ಈ ಹಿಂದೆ ಆಡಿದ್ದ ಮಾತುಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿವೆ.

ವಿಜಯ್ ಮತ್ತು ತ್ರಿಷಾ ‘ಗಿಲ್ಲಿ’, ‘ಕುರುವಿ’, ‘ಲಿಯೋ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಹಲವು ವರ್ಷಗಳ ಹಿಂದೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ತ್ರಿಷಾ, ವಿಜಯ್ ಅವರಲ್ಲಿ ತಮಗೆ ಇಷ್ಟವಾಗದ ಒಂದು ಅಂಶದ ಬಗ್ಗೆ ಮುಕ್ತವಾಗಿ ಮಾತನಾಡಿದ್ದರು. ಆ ವಿಷಯ ಮತ್ತೆ ಚರ್ಚೆ ಆಗಿದೆ.

‘ವಿಜಯ್ ಸೆಟ್‌ನಲ್ಲಿ ತುಂಬಾ ಸೈಲೆಂಟ್ ಆಗಿರುತ್ತಾರೆ. ಶೂಟಿಂಗ್ ಇಲ್ಲದ ಸಮಯದಲ್ಲಿ ಎಲ್ಲರೂ ಹರಟೆ ಹೊಡೆಯುತ್ತಿದ್ದರೆ, ಇವರು ಮಾತ್ರ ಯಾವುದೋ ಮೂಲೆಯಲ್ಲಿ ಗೋಡೆ ಮುಖ ಮಾಡಿ ಗಂಟೆಗಟ್ಟಲೆ ಕುಳಿತಿರುತ್ತಾರೆ. ಆರಂಭದಲ್ಲಿ ನನಗೆ ಅವರ ಈ ಮೌನ ಅಸಹನೀಯ ಎನಿಸುತ್ತಿತ್ತು ಮತ್ತು ಅವರ ಬಗ್ಗೆ ತಪ್ಪು ಕಲ್ಪನೆ ಮೂಡಿಸಿತ್ತು’ ಎಂದು ತ್ರಿಷಾ ಹೇಳಿದ್ದರು.

ಅಷ್ಟೇ ಅಲ್ಲದೆ, ವಿಜಯ್ ಅವರನ್ನು ‘ಸೈಲೆಂಟ್ ಕಿಲ್ಲರ್’ ಎಂದು ಕರೆದಿದ್ದ ತ್ರಿಷಾ, ‘ಅವರು ಏನನ್ನೂ ಹೇಳದೆಯೇ ತಮ್ಮ ನಿಗೂಢ ಆಕರ್ಷಣೆಯಿಂದ ಎಲ್ಲರನ್ನೂ ಸೆಳೆಯಬಲ್ಲರು’ ಎಂದು ಬಣ್ಣಿಸಿದ್ದರು.

ಇದನ್ನೂ ಓದಿ: ದಳಪತಿ ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​.ಡಿ. ಕುಮಾರಸ್ವಾಮಿ: ಕಾರಣ ಇಲ್ಲಿದೆ

ಈಗ ವಿಜಯ್ ರಾಜಕೀಯ ಅಖಾಡದಲ್ಲಿ ‘ಸೈಲೆಂಟ್’ ಆಗಿಯೇ ಕ್ರಾಂತಿ ಮಾಡಿದ್ದಾರೆ. 234 ಸದಸ್ಯರ ವಿಧಾನಸಭೆಯಲ್ಲಿ 108 ಸ್ಥಾನಗಳನ್ನು ಗೆದ್ದು ಮ್ಯಾಜಿಕ್ ಮಾಡಿದ್ದಾರೆ. ಆದರೆ, ಬಹುಮತಕ್ಕೆ (118) ಇನ್ನೂ 10 ಸ್ಥಾನಗಳ ಕೊರತೆ ಇರುವುದರಿಂದ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ಪ್ರಮಾಣವಚನಕ್ಕೆ ತಡೆ ಒಡ್ಡಿದ್ದಾರೆ. ಈ ರಾಜಕೀಯ ಬಿಕ್ಕಟ್ಟಿನ ನಡುವೆ ವಿಜಯ್ ಸೈಲೆಂಟ್ ಆಗಿಯೇ ಪ್ಲ್ಯಾನ್ ರೂಪಿಸುತ್ತಿದ್ದಾರಾ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?