AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thaman S: ಮಹೇಶ್​ ಬಾಬು ನಟನೆಯ ‘ಗುಂಟೂರು ಖಾರಂ’ ಚಿತ್ರತಂಡದಿಂದ ತಮನ್​ಗೆ ಗೇಟ್​ ಪಾಸ್​?

Guntur Kaaram: ತಮನ್​ ಎಸ್​. ಅವರಿಗೆ ಬೇಡಿಕೆ ಇದೆ. ಹಾಗಿದ್ದರೂ ಕೂಡ ‘ಗುಂಟೂರು ಖಾರಂ’ ಸಿನಿಮಾ ತಂಡದಿಂದ ಅವರಿಗೆ ಗೇಟ್​ ಪಾಸ್​ ನೀಡುತ್ತಿರುವ ಗಾಸಿಪ್​ ಹಬ್ಬಿದೆ.

Thaman S: ಮಹೇಶ್​ ಬಾಬು ನಟನೆಯ ‘ಗುಂಟೂರು ಖಾರಂ’ ಚಿತ್ರತಂಡದಿಂದ ತಮನ್​ಗೆ ಗೇಟ್​ ಪಾಸ್​?
ಮಹೇಶ್​ ಬಾಬು, ತಮನ್​ ಎಸ್​.
ಮದನ್​ ಕುಮಾರ್​
|

Updated on: Jul 24, 2023 | 7:48 PM

Share

ಟಾಲಿವುಡ್​ನ ‘ಗುಂಟೂರು ಖಾರಂ’ (Guntur Kaaram) ಸಿನಿಮಾ ಕೇವಲ ಗಾಸಿಪ್​ಗಳಿಂದಲೇ ಹೆಚ್ಚು ಸದ್ದು ಮಾಡುತ್ತಿದೆ. ಈ ಚಿತ್ರ ಸೆಟ್ಟೇರಿದ ದಿನದಿಂದಲೂ ಒಂದಿಲ್ಲೊಂದು ವದಂತಿ ಕೇಳಿಬರುತ್ತಲೇ ಇದೆ. ಅಲ್ಲದೇ ಚಿತ್ರತಂಡದಲ್ಲಿ ಆಗುತ್ತಿರುವ ಕೆಲವು ಬದಲಾವಣೆಗಳು ಅನವಶ್ಯಕ ಚರ್ಚೆಗೆ ಎಡೆಮಾಡಿಕೊಟ್ಟಿವೆ. ಮಹೇಶ್​ ಬಾಬು (Mahesh Babu) ನಟನೆಯ ಈ ಸಿನಿಮಾಗೆ ನಾಯಕಿಯಾಗಿ ಈ ಮೊದಲು ಪೂಜಾ ಹೆಗ್ಡೆ ಆಯ್ಕೆ ಆಗಿದ್ದರು. ಆದರೆ ನಂತರ ಅವರು ಚಿತ್ರತಂಡದಿಂದ ಹೊರನಡೆದರು. ಇನ್ನು, ಸಂಗೀತ ನಿರ್ದೇಶಕ ತಮನ್​ ಎಸ್​. (Thaman S) ಅವರನ್ನೂ ಗುಂಟೂರು ಖಾರಂ ಸಿನಿಮಾ ತಂಡದಿಂದ ಹೊರಗೆ ಇಡಲಾಗುತ್ತಿದೆ ಎಂದು ಸುದ್ದಿ ಹರಡಿದೆ. ಈ ಬಗ್ಗೆ ಚಿತ್ರತಂಡದವರು ಶೀಘ್ರದಲ್ಲೇ ಅಧಿಕೃತವಾಗಿ ಹೇಳಿಕೆ ನೀಡುವ ಸಾಧ್ಯತೆ ಇದೆ.

ತಮನ್​ ಎಸ್​. ಅವರಿಗೆ ತೆಲುಗು ಚಿತ್ರರಂಗದಲ್ಲಿ ಬೇಡಿಕೆ ಇದೆ. ಹಾಗಿದ್ದರೂ ಕೂಡ ‘ಗುಂಟೂರು ಖಾರಂ’ ಸಿನಿಮಾ ತಂಡದಿಂದ ಅವರಿಗೆ ಗೇಟ್​ ಪಾಸ್​ ನೀಡುತ್ತಿರುವುದು ಯಾಕೆ ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಸ್ಟಾರ್​ ನಟರ ಸಿನಿಮಾ ಎಂದಾಗ ಗಾಸಿಪ್​ ಹರಡುವುದು ಸಹಜ. ಆದರೆ ಬೆಂಕಿ ಇಲ್ಲದೇ ಹೊಗೆ ಆಡುವುದಿಲ್ಲ. ತಮನ್​ ಅವರನ್ನು ಚಿತ್ರತಂಡದಿಂದ ಹೊರಗೆ ಇಡಲಾಗಿದೆ ಎಂಬ ಬಗ್ಗೆ ತೆಲುಗು ಮಾಧ್ಯಮಗಳಲ್ಲಿ ವರದಿ ಆಗುತ್ತಿದೆ. ಆದರೆ ಎಲ್ಲವೂ ಅಂತೆ-ಕಂತೆಗಳ ರೂಪದಲ್ಲಿ ಇವೆ.

ಇದನ್ನೂ ಓದಿ: Mahesh Babu: ‘ಗುಂಟೂರು ಖಾರಂ’ ಚಿತ್ರದಲ್ಲಿ ಮಹೇಶ್​ ಬಾಬು ಜೊತೆ ನಟಿಸ್ತಾರಾ ಶಿವಗಾಮಿ ಅಲಿಯಾಸ್ ರಮ್ಯಾ ಕೃಷ್ಣನ್​?

‘ಗುಂಟೂರು ಖಾರಂ’ ಸಿನಿಮಾದ ಹಾಡುಗಳಿಗೆ ಸಂಗೀತ ನೀಡದಿದ್ದರೂ ಹಿನ್ನೆಲೆ ಸಂಗೀತಕ್ಕಾದರೂ ತಮನ್​ ಎಸ್​. ಕೆಲಸ ಮಾಡಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನೂ ಅವರಿಗೆ ನೀಡುವುದು ಅನುಮಾನ ಎಂದು ಗಾಸಿಪ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಆದಷ್ಟು ಬೇಗ ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ. ಈ ಸಿನಿಮಾಗೆ ತ್ರಿವಿಕ್ರಮ್​ ಶ್ರೀನಿವಾಸ್​ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: Guntur Kaaram: ಮಾಹಿತಿ ಲೀಕ್​ ಆಗುವುದಕ್ಕೂ ಮುನ್ನವೇ ಎಚ್ಚರಿಕೆ ವಹಿಸಿದ ನಟಿ ಮೀನಾಕ್ಷಿ ಚೌಧರಿ; ವಿಡಿಯೋ ವೈರಲ್​

‘ಹೃದಯಂ’, ‘ಖುಷಿ’ ಸಿನಿಮಾಗಳ ಖ್ಯಾತಿಯ ಹೇಷಮ್​ ಅಬ್ದುಲ್​ ವಹಾಬ್​ ಅವರು ‘ಗುಂಟೂರು ಖಾರಂ’ ಸಿನಿಮಾಗೆ ಸಂಗೀತ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವುದು ಬಾಕಿ ಇದೆ. ಚಿತ್ರತಂಡದಲ್ಲಿ ಇಷ್ಟೆಲ್ಲ ಗೊಂದಲಗಳು ಸೃಷ್ಟಿಯಾಗಲು ಕಾರಣ ಏನು ಎಂಬುದು ಮಾತ್ರ ಇನ್ನೂ ಬಹಿರಂಗ ಆಗಿಲ್ಲ. ಮಹೇಶ್​ ಬಾಬು ಅವರ ಫಸ್ಟ್​ ಲುಕ್​ ಗಮನ ಸೆಳೆದಿದೆ. ಶ್ರೀಲೀಲಾ ಮತ್ತು ಮೀನಾಕ್ಷಿ ಚೌಧರಿ ಅವರು ನಾಯಕಿಯರಾಗಿ ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು