Thaman S: ಮಹೇಶ್​ ಬಾಬು ನಟನೆಯ ‘ಗುಂಟೂರು ಖಾರಂ’ ಚಿತ್ರತಂಡದಿಂದ ತಮನ್​ಗೆ ಗೇಟ್​ ಪಾಸ್​?

Guntur Kaaram: ತಮನ್​ ಎಸ್​. ಅವರಿಗೆ ಬೇಡಿಕೆ ಇದೆ. ಹಾಗಿದ್ದರೂ ಕೂಡ ‘ಗುಂಟೂರು ಖಾರಂ’ ಸಿನಿಮಾ ತಂಡದಿಂದ ಅವರಿಗೆ ಗೇಟ್​ ಪಾಸ್​ ನೀಡುತ್ತಿರುವ ಗಾಸಿಪ್​ ಹಬ್ಬಿದೆ.

Thaman S: ಮಹೇಶ್​ ಬಾಬು ನಟನೆಯ ‘ಗುಂಟೂರು ಖಾರಂ’ ಚಿತ್ರತಂಡದಿಂದ ತಮನ್​ಗೆ ಗೇಟ್​ ಪಾಸ್​?
ಮಹೇಶ್​ ಬಾಬು, ತಮನ್​ ಎಸ್​.
Follow us
|

Updated on: Jul 24, 2023 | 7:48 PM

ಟಾಲಿವುಡ್​ನ ‘ಗುಂಟೂರು ಖಾರಂ’ (Guntur Kaaram) ಸಿನಿಮಾ ಕೇವಲ ಗಾಸಿಪ್​ಗಳಿಂದಲೇ ಹೆಚ್ಚು ಸದ್ದು ಮಾಡುತ್ತಿದೆ. ಈ ಚಿತ್ರ ಸೆಟ್ಟೇರಿದ ದಿನದಿಂದಲೂ ಒಂದಿಲ್ಲೊಂದು ವದಂತಿ ಕೇಳಿಬರುತ್ತಲೇ ಇದೆ. ಅಲ್ಲದೇ ಚಿತ್ರತಂಡದಲ್ಲಿ ಆಗುತ್ತಿರುವ ಕೆಲವು ಬದಲಾವಣೆಗಳು ಅನವಶ್ಯಕ ಚರ್ಚೆಗೆ ಎಡೆಮಾಡಿಕೊಟ್ಟಿವೆ. ಮಹೇಶ್​ ಬಾಬು (Mahesh Babu) ನಟನೆಯ ಈ ಸಿನಿಮಾಗೆ ನಾಯಕಿಯಾಗಿ ಈ ಮೊದಲು ಪೂಜಾ ಹೆಗ್ಡೆ ಆಯ್ಕೆ ಆಗಿದ್ದರು. ಆದರೆ ನಂತರ ಅವರು ಚಿತ್ರತಂಡದಿಂದ ಹೊರನಡೆದರು. ಇನ್ನು, ಸಂಗೀತ ನಿರ್ದೇಶಕ ತಮನ್​ ಎಸ್​. (Thaman S) ಅವರನ್ನೂ ಗುಂಟೂರು ಖಾರಂ ಸಿನಿಮಾ ತಂಡದಿಂದ ಹೊರಗೆ ಇಡಲಾಗುತ್ತಿದೆ ಎಂದು ಸುದ್ದಿ ಹರಡಿದೆ. ಈ ಬಗ್ಗೆ ಚಿತ್ರತಂಡದವರು ಶೀಘ್ರದಲ್ಲೇ ಅಧಿಕೃತವಾಗಿ ಹೇಳಿಕೆ ನೀಡುವ ಸಾಧ್ಯತೆ ಇದೆ.

ತಮನ್​ ಎಸ್​. ಅವರಿಗೆ ತೆಲುಗು ಚಿತ್ರರಂಗದಲ್ಲಿ ಬೇಡಿಕೆ ಇದೆ. ಹಾಗಿದ್ದರೂ ಕೂಡ ‘ಗುಂಟೂರು ಖಾರಂ’ ಸಿನಿಮಾ ತಂಡದಿಂದ ಅವರಿಗೆ ಗೇಟ್​ ಪಾಸ್​ ನೀಡುತ್ತಿರುವುದು ಯಾಕೆ ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಸ್ಟಾರ್​ ನಟರ ಸಿನಿಮಾ ಎಂದಾಗ ಗಾಸಿಪ್​ ಹರಡುವುದು ಸಹಜ. ಆದರೆ ಬೆಂಕಿ ಇಲ್ಲದೇ ಹೊಗೆ ಆಡುವುದಿಲ್ಲ. ತಮನ್​ ಅವರನ್ನು ಚಿತ್ರತಂಡದಿಂದ ಹೊರಗೆ ಇಡಲಾಗಿದೆ ಎಂಬ ಬಗ್ಗೆ ತೆಲುಗು ಮಾಧ್ಯಮಗಳಲ್ಲಿ ವರದಿ ಆಗುತ್ತಿದೆ. ಆದರೆ ಎಲ್ಲವೂ ಅಂತೆ-ಕಂತೆಗಳ ರೂಪದಲ್ಲಿ ಇವೆ.

ಇದನ್ನೂ ಓದಿ: Mahesh Babu: ‘ಗುಂಟೂರು ಖಾರಂ’ ಚಿತ್ರದಲ್ಲಿ ಮಹೇಶ್​ ಬಾಬು ಜೊತೆ ನಟಿಸ್ತಾರಾ ಶಿವಗಾಮಿ ಅಲಿಯಾಸ್ ರಮ್ಯಾ ಕೃಷ್ಣನ್​?

‘ಗುಂಟೂರು ಖಾರಂ’ ಸಿನಿಮಾದ ಹಾಡುಗಳಿಗೆ ಸಂಗೀತ ನೀಡದಿದ್ದರೂ ಹಿನ್ನೆಲೆ ಸಂಗೀತಕ್ಕಾದರೂ ತಮನ್​ ಎಸ್​. ಕೆಲಸ ಮಾಡಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನೂ ಅವರಿಗೆ ನೀಡುವುದು ಅನುಮಾನ ಎಂದು ಗಾಸಿಪ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಆದಷ್ಟು ಬೇಗ ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ. ಈ ಸಿನಿಮಾಗೆ ತ್ರಿವಿಕ್ರಮ್​ ಶ್ರೀನಿವಾಸ್​ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: Guntur Kaaram: ಮಾಹಿತಿ ಲೀಕ್​ ಆಗುವುದಕ್ಕೂ ಮುನ್ನವೇ ಎಚ್ಚರಿಕೆ ವಹಿಸಿದ ನಟಿ ಮೀನಾಕ್ಷಿ ಚೌಧರಿ; ವಿಡಿಯೋ ವೈರಲ್​

‘ಹೃದಯಂ’, ‘ಖುಷಿ’ ಸಿನಿಮಾಗಳ ಖ್ಯಾತಿಯ ಹೇಷಮ್​ ಅಬ್ದುಲ್​ ವಹಾಬ್​ ಅವರು ‘ಗುಂಟೂರು ಖಾರಂ’ ಸಿನಿಮಾಗೆ ಸಂಗೀತ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವುದು ಬಾಕಿ ಇದೆ. ಚಿತ್ರತಂಡದಲ್ಲಿ ಇಷ್ಟೆಲ್ಲ ಗೊಂದಲಗಳು ಸೃಷ್ಟಿಯಾಗಲು ಕಾರಣ ಏನು ಎಂಬುದು ಮಾತ್ರ ಇನ್ನೂ ಬಹಿರಂಗ ಆಗಿಲ್ಲ. ಮಹೇಶ್​ ಬಾಬು ಅವರ ಫಸ್ಟ್​ ಲುಕ್​ ಗಮನ ಸೆಳೆದಿದೆ. ಶ್ರೀಲೀಲಾ ಮತ್ತು ಮೀನಾಕ್ಷಿ ಚೌಧರಿ ಅವರು ನಾಯಕಿಯರಾಗಿ ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!