AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thaman S: ಮಹೇಶ್​ ಬಾಬು ನಟನೆಯ ‘ಗುಂಟೂರು ಖಾರಂ’ ಚಿತ್ರತಂಡದಿಂದ ತಮನ್​ಗೆ ಗೇಟ್​ ಪಾಸ್​?

Guntur Kaaram: ತಮನ್​ ಎಸ್​. ಅವರಿಗೆ ಬೇಡಿಕೆ ಇದೆ. ಹಾಗಿದ್ದರೂ ಕೂಡ ‘ಗುಂಟೂರು ಖಾರಂ’ ಸಿನಿಮಾ ತಂಡದಿಂದ ಅವರಿಗೆ ಗೇಟ್​ ಪಾಸ್​ ನೀಡುತ್ತಿರುವ ಗಾಸಿಪ್​ ಹಬ್ಬಿದೆ.

Thaman S: ಮಹೇಶ್​ ಬಾಬು ನಟನೆಯ ‘ಗುಂಟೂರು ಖಾರಂ’ ಚಿತ್ರತಂಡದಿಂದ ತಮನ್​ಗೆ ಗೇಟ್​ ಪಾಸ್​?
ಮಹೇಶ್​ ಬಾಬು, ತಮನ್​ ಎಸ್​.
ಮದನ್​ ಕುಮಾರ್​
|

Updated on: Jul 24, 2023 | 7:48 PM

Share

ಟಾಲಿವುಡ್​ನ ‘ಗುಂಟೂರು ಖಾರಂ’ (Guntur Kaaram) ಸಿನಿಮಾ ಕೇವಲ ಗಾಸಿಪ್​ಗಳಿಂದಲೇ ಹೆಚ್ಚು ಸದ್ದು ಮಾಡುತ್ತಿದೆ. ಈ ಚಿತ್ರ ಸೆಟ್ಟೇರಿದ ದಿನದಿಂದಲೂ ಒಂದಿಲ್ಲೊಂದು ವದಂತಿ ಕೇಳಿಬರುತ್ತಲೇ ಇದೆ. ಅಲ್ಲದೇ ಚಿತ್ರತಂಡದಲ್ಲಿ ಆಗುತ್ತಿರುವ ಕೆಲವು ಬದಲಾವಣೆಗಳು ಅನವಶ್ಯಕ ಚರ್ಚೆಗೆ ಎಡೆಮಾಡಿಕೊಟ್ಟಿವೆ. ಮಹೇಶ್​ ಬಾಬು (Mahesh Babu) ನಟನೆಯ ಈ ಸಿನಿಮಾಗೆ ನಾಯಕಿಯಾಗಿ ಈ ಮೊದಲು ಪೂಜಾ ಹೆಗ್ಡೆ ಆಯ್ಕೆ ಆಗಿದ್ದರು. ಆದರೆ ನಂತರ ಅವರು ಚಿತ್ರತಂಡದಿಂದ ಹೊರನಡೆದರು. ಇನ್ನು, ಸಂಗೀತ ನಿರ್ದೇಶಕ ತಮನ್​ ಎಸ್​. (Thaman S) ಅವರನ್ನೂ ಗುಂಟೂರು ಖಾರಂ ಸಿನಿಮಾ ತಂಡದಿಂದ ಹೊರಗೆ ಇಡಲಾಗುತ್ತಿದೆ ಎಂದು ಸುದ್ದಿ ಹರಡಿದೆ. ಈ ಬಗ್ಗೆ ಚಿತ್ರತಂಡದವರು ಶೀಘ್ರದಲ್ಲೇ ಅಧಿಕೃತವಾಗಿ ಹೇಳಿಕೆ ನೀಡುವ ಸಾಧ್ಯತೆ ಇದೆ.

ತಮನ್​ ಎಸ್​. ಅವರಿಗೆ ತೆಲುಗು ಚಿತ್ರರಂಗದಲ್ಲಿ ಬೇಡಿಕೆ ಇದೆ. ಹಾಗಿದ್ದರೂ ಕೂಡ ‘ಗುಂಟೂರು ಖಾರಂ’ ಸಿನಿಮಾ ತಂಡದಿಂದ ಅವರಿಗೆ ಗೇಟ್​ ಪಾಸ್​ ನೀಡುತ್ತಿರುವುದು ಯಾಕೆ ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಸ್ಟಾರ್​ ನಟರ ಸಿನಿಮಾ ಎಂದಾಗ ಗಾಸಿಪ್​ ಹರಡುವುದು ಸಹಜ. ಆದರೆ ಬೆಂಕಿ ಇಲ್ಲದೇ ಹೊಗೆ ಆಡುವುದಿಲ್ಲ. ತಮನ್​ ಅವರನ್ನು ಚಿತ್ರತಂಡದಿಂದ ಹೊರಗೆ ಇಡಲಾಗಿದೆ ಎಂಬ ಬಗ್ಗೆ ತೆಲುಗು ಮಾಧ್ಯಮಗಳಲ್ಲಿ ವರದಿ ಆಗುತ್ತಿದೆ. ಆದರೆ ಎಲ್ಲವೂ ಅಂತೆ-ಕಂತೆಗಳ ರೂಪದಲ್ಲಿ ಇವೆ.

ಇದನ್ನೂ ಓದಿ: Mahesh Babu: ‘ಗುಂಟೂರು ಖಾರಂ’ ಚಿತ್ರದಲ್ಲಿ ಮಹೇಶ್​ ಬಾಬು ಜೊತೆ ನಟಿಸ್ತಾರಾ ಶಿವಗಾಮಿ ಅಲಿಯಾಸ್ ರಮ್ಯಾ ಕೃಷ್ಣನ್​?

‘ಗುಂಟೂರು ಖಾರಂ’ ಸಿನಿಮಾದ ಹಾಡುಗಳಿಗೆ ಸಂಗೀತ ನೀಡದಿದ್ದರೂ ಹಿನ್ನೆಲೆ ಸಂಗೀತಕ್ಕಾದರೂ ತಮನ್​ ಎಸ್​. ಕೆಲಸ ಮಾಡಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನೂ ಅವರಿಗೆ ನೀಡುವುದು ಅನುಮಾನ ಎಂದು ಗಾಸಿಪ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಆದಷ್ಟು ಬೇಗ ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ. ಈ ಸಿನಿಮಾಗೆ ತ್ರಿವಿಕ್ರಮ್​ ಶ್ರೀನಿವಾಸ್​ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: Guntur Kaaram: ಮಾಹಿತಿ ಲೀಕ್​ ಆಗುವುದಕ್ಕೂ ಮುನ್ನವೇ ಎಚ್ಚರಿಕೆ ವಹಿಸಿದ ನಟಿ ಮೀನಾಕ್ಷಿ ಚೌಧರಿ; ವಿಡಿಯೋ ವೈರಲ್​

‘ಹೃದಯಂ’, ‘ಖುಷಿ’ ಸಿನಿಮಾಗಳ ಖ್ಯಾತಿಯ ಹೇಷಮ್​ ಅಬ್ದುಲ್​ ವಹಾಬ್​ ಅವರು ‘ಗುಂಟೂರು ಖಾರಂ’ ಸಿನಿಮಾಗೆ ಸಂಗೀತ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವುದು ಬಾಕಿ ಇದೆ. ಚಿತ್ರತಂಡದಲ್ಲಿ ಇಷ್ಟೆಲ್ಲ ಗೊಂದಲಗಳು ಸೃಷ್ಟಿಯಾಗಲು ಕಾರಣ ಏನು ಎಂಬುದು ಮಾತ್ರ ಇನ್ನೂ ಬಹಿರಂಗ ಆಗಿಲ್ಲ. ಮಹೇಶ್​ ಬಾಬು ಅವರ ಫಸ್ಟ್​ ಲುಕ್​ ಗಮನ ಸೆಳೆದಿದೆ. ಶ್ರೀಲೀಲಾ ಮತ್ತು ಮೀನಾಕ್ಷಿ ಚೌಧರಿ ಅವರು ನಾಯಕಿಯರಾಗಿ ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ